ಮಣಿಪಾಲ: ಬಸ್ ಚಾಲಕ, ನಿರ್ವಾಹಕರ ನಿರ್ಲಕ್ಷ್ಯ: ಮಹಿಳೆಗೆ ಗಂಭೀರ ಗಾಯ
Team Udayavani, Feb 22, 2023, 6:27 AM IST
ಮಣಿಪಾಲ: ಬಸ್ ಚಾಲಕ ಹಾಗೂ ನಿರ್ವಾಹಕರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಚಾಲಕ ಕಾಗನೂರು ಭರ್ಮಪ್ಪ ಬಸ್ ಅನ್ನು ಉಡುಪಿ ಕಡೆಯಿಂದ ದೆಂದೂರುಕಟ್ಟೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ರಾಂಪುರ ಜಂಕ್ಷನ್ನಲ್ಲಿ ಬಸ್ ನಿಲ್ಲಿಸಿದ್ದು, ಮಾಲಿನಿ ಎಂ. ರಾವ್ (68) ಅವರು ಮುಂಬಾಗಿಲಿನಿಂದ ಬಸ್ ಏರುವ ಸಂದರ್ಭದಲ್ಲಿ ನಿರ್ವಾಹಕ ಹೊರಡುವ ಸೂಚನೆ ನೀಡಿದ. ತತ್ಕ್ಷಣ ಬಸ್ ಚಲಿಸಿದ ಪರಿಣಾಮ ಮಾಲಿನಿ ಅವರು ಆಯತಪ್ಪಿ ರಸ್ತೆಗೆ ಬಿದ್ದರು. ತಲೆಗೆ ತೀವ್ರ ತೆರನಾದ ಗಾಯವಾಗಿದ್ದು, ಮಾಲಿನಿಯವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ