ಮಣಿಪಾಲ ಆಸ್ಪತ್ರೆ :ಡಿಜಿಟಲ್‌ ಮ್ಯಾಮೋಗ್ರಫಿ ಘಟಕ ಉದ್ಘಾಟನೆ


Team Udayavani, Jan 28, 2018, 11:31 AM IST

28-Jan–5.jpg

ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ರೇಡಿಯೋ ಡಯಗ್ನೋಸಿಸ್‌ ಮತ್ತು ಇಮೇಜಿಂಗ್‌ ವಿಭಾಗದಲ್ಲಿ ಅತ್ಯಾಧುನಿಕ ಡಿಜಿಟಲ್‌ ಮ್ಯಾಮೋಗ್ರಫಿ ಘಟಕ ಉದ್ಘಾಟನೆಗೊಂಡಿದ್ದು, ಸ್ತನ ಕ್ಯಾನ್ಸರ್‌ ತಪಾಸಣೆಯ ಸ್ತನದ ಬಿಂಬ ಪರೀಕ್ಷೆ (ಇಮೇಜಿಂಗ್‌)ಯಲ್ಲಿ ಹೊಸ ಅಧ್ಯಾಯ ಆರಂಭಗೊಂಡಿದೆ.

ಮಣಿಪಾಲದ ಮಾಹೆ ಹಾಸ್ಟೆಲ್ ಆಡಳಿತ ಮಂಡಳಿ  ಅಧ್ಯಕ್ಷೆ ವಸಂತಿ ಆರ್‌.ಪೈಘಟಕವನ್ನು ಉದ್ಘಾಟಿಸಿದರು. ಕರಾವಳಿ ಕರ್ನಾಟಕದಲ್ಲಿ ಮೊತ್ತ ಮೊದಲ ಡಿಜಿಟಲ್ ಮ್ಯಾಮೋಗ್ರಫಿ ಘಟಕ ಇದಾಗಿದೆ. ವಿ.ವಿ. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಪತಿ ಡಾ| ವಿನೋದ್‌ ಭಟ್‌, ಸಹಕುಲಪತಿ ಡಾ| ಪೂರ್ಣಿಮಾ ಬಾಳಿಗಾ, ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಕೆಎಂಸಿ ಡೀನ್‌ ಡಾ| ಪ್ರಜ್ಞಾ ರಾವ್‌, ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ| ಕ| ಎಂ. ದಯಾನಂದ, ಆಸ್ಪತ್ರೆಯ ರೇಡಿಯೋ ಡಯಗ್ನೋಸಿಸ್‌ ವಿಭಾಗದ ಮುಖ್ಯಸ್ಥ ಡಾ| ರಾಜಗೋಪಾಲ್ ಕೆ.ವಿ. ಉಪಸ್ಥಿತರಿದ್ದರು.

ಸ್ತನ ಕ್ಯಾನ್ಸರ್‌ ಆರೋಗ್ಯ ಕ್ಷೇತ್ರಕ್ಕೆ, ವಿಶೇಷವಾಗಿ ನಗರವಾಸಿಗಳಿಗೆ ಒಂದು ಪ್ರಮುಖ ಸವಾಲಾಗಿದೆ. ಭಾರತದಲ್ಲಿ ಗರ್ಭದ ಕ್ಯಾನ್ಸರನ್ನು ಹಿಂದಿಕ್ಕಿ ಸ್ತ್ರೀಯರಲ್ಲಿ ಅತ್ಯಂತ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ಕಾಯಿಲೆ ತಡವಾಗಿ ಪತ್ತೆಯಾಗುವುದರಿಂದ ಮರಣಕ್ಕೆ ಗುರಿಯಾಗುವ ಸ್ತ್ರೀಯರ ಸಂಖ್ಯೆ ಹೆಚ್ಚುತ್ತಿದೆ. ಮ್ಯಾಮೋಗ್ರಫಿಯ ಮುಖ್ಯ ಉದ್ದೇಶ ಆರಂಭಿಕ ಹಂತದಲ್ಲೇ ಸ್ತನ ಕ್ಯಾನ್ಸರನ್ನು ಪತ್ತೆಹಚ್ಚಿ ರೋಗಿಯ ಬದುಕುಳಿಯುವಿಕೆಯ ಸಂಭಾವ್ಯತೆಯನ್ನು ಹೆಚ್ಚಿಸುವುದು ಎಂದು ಡಾ| ಕ| ಎಂ. ದಯಾನಂದ ತಿಳಿಸಿದರು.

ಸ್ತನದ ಕ್ಯಾನ್ಸರ್‌ ಶೀಘ್ರ, ನಿಖರ ಪತ್ತೆಗೆ ಸಹಾಯಕ
ಹಿಂದೆ ಸ್ತನ ಕ್ಯಾನ್ಸರ್‌ ಪತ್ತೆಗೆ ಸಾಂಪ್ರದಾಯಿಕ ಮ್ಯಾಮೋಗ್ರಫಿ  ನಡೆಸಲಾಗುತ್ತಿತ್ತು. ಈಗ ಡಿಜಿಟಲ್  ಮ್ಯಾಮೋಗ್ರಫಿ  ಪರಿಚಯಿಸುವುದರೊಂದಿಗೆ, ಸ್ತನ ಕ್ಯಾನ್ಸರ್‌ ಪತ್ತೆಯಲ್ಲಿ ಗಮನಾರ್ಹ ಸುಧಾರಣೆ ಕಂಡುಬರಲಿದೆ. ಡಕ್ಟಲ್‌ ಕಾರ್ಸಿನೋಮಾ ಇನ್‌ ಸಿಟು ಮತ್ತು ಸುತ್ತಲಿನ ಅಂಗಾಂಶ ಗಳಿಗೆ ವ್ಯಾಪಿಸಿರುವ ಕ್ಯಾನ್ಸರನ್ನು ಪತ್ತೆ ಹಚ್ಚುವಲ್ಲಿ ಸಾಂಪ್ರದಾಯಿಕ ಫಿಲ್ಮ್ ಸ್ಕ್ರೀನ್‌ ಮ್ಯಾಮೊಗ್ರಫಿಗೆ ಹೋಲಿಸಿದಲ್ಲಿ ಡಿಜಿಟಲ್ ಮ್ಯಾಮೋಗ್ರಾಂನ ನಿರ್ವಹಣೆ ಬಹಳಷ್ಟು ನಿಖರ, ಉತ್ತಮ ಫ‌ಲಿತಾಂಶ ನೀಡುವುದು ಕಂಡು ಬಂದಿದೆ. ಇದರಲ್ಲಿ ಹೊಳಪು, ಮಬ್ಬಿನ ಪ್ರಮಾಣ ಅಥವಾ ಕಾಂಟ್ರಾಸ್ಟನ್ನು ಅಗತ್ಯಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಬಹುದು ಮತ್ತು ಬಿಂಬದ ಭಾಗಗಳನ್ನು ದೊಡ್ಡದು ಮಾಡಬಹುದಾಗಿರುವುದೇ ಇದಕ್ಕೆ ಕಾರಣ. ಇದರಿಂದ ಆರೋಗ್ಯಯುತ ಮತ್ತು ರೋಗಗ್ರಸ್ತ ಅಂಗಾಂಶ ಗಳ ನಡುವಿನ ಸೂಕ್ಷ್ಮ ವ್ಯತ್ಯಾಸಗಳನ್ನು ಸುಲಭವಾಗಿ ಗುರುತಿಸಬಹುದು. 

ಪಾಶ್ಚಾತ್ಯರಿಗೆ ಹೋಲಿಸಿದರೆ ಭಾರತೀಯರಲ್ಲಿ ಸ್ತನ ಕ್ಯಾನ್ಸರ್‌ ಬಹಳ ಚಿಕ್ಕ ಪ್ರಾಯದವರಲ್ಲಿಯೇ ಪತ್ತೆಯಾಗುತ್ತಿದೆ, ಈ ವಯೋಮಾನದವರಲ್ಲಿ ಸ್ತನ ಅಂಗಾಂಶಗಳು ಒತ್ತೂತ್ತಾಗಿರುವುದರಿಂದ ಡಿಜಿಟಲ್ ಮ್ಯಾಮೋಗ್ರಫಿ ಸ್ತನ ಕ್ಯಾನ್ಸರ್‌ ಪತ್ತೆಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಮರಣದ ಪ್ರಮಾಣವನ್ನು ಗಮನಾರ್ಹವಾಗಿ ತಗ್ಗಿಸುತ್ತದೆ. ತಂತ್ರಜ್ಞರು ಬಿಂಬಗಳನ್ನು ತತ್‌ಕ್ಷಣವೇ ನೋಡಲು ಸಾಧ್ಯವಾಗುವುದರಿಂದ ಮತ್ತು ಅಗತ್ಯ ತಿದ್ದುಪಡಿಗಳನ್ನು ಮಾಡುವ ಅನುಕೂಲತೆ ಇರುವುದರಿಂದ ಮರು ತಪಾಸಣೆಗಳ ಸಂಖ್ಯೆಯೂ ಕಡಿಮೆಯಾಗುತ್ತದೆ. ತಪಾಸಣೆ ತ್ವರಿತವಾಗಿ ಜರುಗುವುದರಿಂದ ರೋಗಿಗೆ ಅನನುಕೂಲತೆ ಉಂಟಾಗದು.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.