ಮಣಿಪಾಲ - ಕಡಿಯಾಳಿ ರಸ್ತೆ: ಸೂಚನಾ ಫಲಕ ಆಳವಡಿಕೆ
Team Udayavani, May 11, 2019, 6:10 AM IST
ಕಾಮಗಾರಿ ನಡೆಯುವ ಸ್ಥಳದಲ್ಲಿ ಆಳವಡಿಸಲಾದ ಸೂಚನಾಫಲಕ.
ಉಡುಪಿ: ಮಣಿಪಾಲ - ಉಡುಪಿ ನಿರ್ಮಾಣದ ಹಂತದಲ್ಲಿ ರುವ ರಾ.ಹೆ. 169ಎ ಕಾಮಗಾರಿಯಲ್ಲಿ ರಸ್ತೆ ಸುರಕ್ಷಾ ಕ್ರಮ ಕೈಗೊಳ್ಳದೆ ಇರುವುದರಿಂದ ನಗರದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಕುರಿತು ಮೇ.7ರಂದು ಉದಯವಾಣಿ ಪ್ರತಿಕೆಯಲ್ಲಿ ವರದಿ ಪ್ರಕಟವಾಗುತ್ತಿದಂತೆ ಎಚ್ಚೆತ್ತುಕೊಂಡ ಗುತ್ತಿಗೆದಾರರು ಮಣಿಪಾಲದಿಂದ ಕಡಿಯಾಳಿಯ ವರೆಗೆ ಕಾಮಗಾರಿ ಪ್ರಗತಿಯ ಲ್ಲಿರುವ ಕುರಿತು ಸೂಚನಾ ಫಲಕ ಅಳವಡಿಸಿದ್ದಾರೆ.
ವರದಿ ಪ್ರಕಟವಾದ ದಿನ ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಹಾಗೂ ಎಸ್ಪಿ ನಿಶಾ ಜೇಮ್ಸ್ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ರಸ್ತೆ ಸುರಕ್ಷಾ ಕ್ರಮಗಳು ಮತ್ತು ಕಾಮಗಾರಿಯನ್ನು ಮಳೆಗಾಲದ ಒಳಗೆ ಪೂರೈಸುವಂತೆ ರಾ.ಹೆ. ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದಂತೆ ಸೂಚನಾ ಫಲಕ ಅಳವಡಿಸಲಾಗಿದೆ.
ಗುತ್ತಿಗೆದಾರರು ಕಾಮಗಾರಿ ಸಂದರ್ಭ ರಸ್ತೆ ಸುರಕ್ಷಾ ಕ್ರಮ ಕೈಗೊಳ್ಳದ ಹಿನ್ನೆಲೆ ನಗರದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸ್ಥಳೀಯರಿಗೆ ಭೀತಿ ಮೂಡಿಸಿತ್ತು. ಇದೀಗ ಕಾಮಗಾರಿ ಸ್ಥಳದಲ್ಲಿ ಹಾಕಿರುವ ಸೂಚನಾಫಲಕ ವಾಹನ ಸವಾರರಲ್ಲಿ ಆತಂಕ ಕಡಿಮೆ ಮಾಡಿದೆ.
ಮಣಿಪಾಲದ ಎಂಐಟಿ, ಟೈಗರ್ ಸರ್ಕಲ್, ಎಂಜೆಸಿ ಕಾಲೇಜು, ಸಿಂಡಿಕೇಟ್ ಸರ್ಕಲ್, ಲಕ್ಷ್ಮೀಂದ್ರ ನಗರ, ಇಂದ್ರಾಳಿ, ಎಂಜಿಎಂ, ಕಡಿಯಾಳಿಯಲ್ಲಿ ಸೇರಿದಂತೆ ವಿವಿಧ ಕಡೆಗಳಲ್ಲಿ “ಎಚ್ಚರಿಕೆ ಕಾಮಗಾರಿ ಪ್ರಗತಿಯಲ್ಲಿದೆ ನಿಧಾನವಾಗಿ ಚಲಿಸಿ’ ಎನ್ನುವ ಸೂಚನಾಫಲಕ ಆಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್