ಮನೆಬಾಗಿಲಿಗೆ ಆರೋಗ್ಯ ಸೇವೆ ಶ್ಲಾಘನಾರ್ಹ: ಕೋಟ


Team Udayavani, Feb 21, 2019, 12:30 AM IST

200219astro01.jpg

ಮಣಿಪಾಲ: ವೃದ್ಧರು, ಅಂಗವಿಕಲರು, ದೀರ್ಘ‌ಕಾಲಿಕ ರೋಗಗಳಿಗೆ ತುತ್ತಾಗಿರುವವರು, ಮಧುಮೇಹ ಪೀಡಿತರಿಗೆ ವರದಾನವಾಗುವ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೋಮ್‌ ಕೇರ್‌ ಸೇವೆ ಶ್ಲಾಘನಾರ್ಹ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಬುಧವಾರ ಕೆಎಂಸಿ ಮಣಿಪಾಲದ ಒಪಿಡಿ ಆವರಣದಲ್ಲಿ ಉಡುಪಿ ಜಿಲ್ಲೆಯ ಚೊಚ್ಚಲ ಕೆಎಂಸಿ ಹೋಮ್‌ ಕೇರ್‌ ಸರ್ವಿಸ್‌(ಗೃಹ ಆರೈಕೆ ಸೇವೆ)ಗೆ ಚಾಲನೆ ನೀಡಿ ಮಾತನಾಡಿದರು.

ಮೊದಲೇ ಕೆಎಂಸಿಗೆ ಬನ್ನಿ 
ಮುಖ್ಯ ಅತಿಥಿಯಾಗಿದ್ದ ಶಾಸಕ ಕೆ. ರಘುಪತಿ ಭಟ್‌ ಮಾತನಾಡಿ, ವೃದ್ಧರು, ಮಧುಮೇಹ ಪೀಡಿತರಿಗೆ ಹೋಮ್‌ ಕೇರ್‌ ಸೇವೆ ಅತ್ಯುತ್ತಮ. ಕೆಎಂಸಿಯಲ್ಲಿ ಆರೋಗ್ಯ ಕರ್ನಾಟಕ/ಆಯುಷ್ಮಾನ್‌ ಭಾರತ ಯೋಜನೆಗಳ ಸೇವೆ ಅತ್ಯುತ್ತಮವಾಗಿ ಲಭ್ಯವಿದೆ. ಕಾಯಿಲೆಗಳು ಉಲ್ಬಣಿಸುವ ಮುನ್ನವೇ ಕೆಎಂಸಿಗೆ ಬನ್ನಿ ಎಂದು ಹೇಳಿದರು.

ಮಾಹೆ ಕುಲಪತಿ ಡಾ| ಎಚ್‌. ವಿನೋದ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಸಹಕುಲಪತಿ ಡಾ| ಪೂರ್ಣಿಮಾ ಬಾಳಿಗ, ಮುಖ್ಯ ನಿರ್ವಹಣಾಧಿಕಾರಿ ಸಿ.ಜಿ. ಮುತ್ತಣ್ಣ ಉಪಸ್ಥಿತರಿದ್ದರು. ಎಚ್‌ಆರ್‌ ವಿಭಾಗದ ಸುಚಿತಾ ನಿರೂಪಿಸಿದರು. ಹೋಮ್‌ಕೇರ್‌ ಸೇವೆ ಇನ್‌ಚಾರ್ಜ್‌ ರತೀಶ್‌ ಮಾಹಿತಿ ನೀಡಿದರು.

10 ಕಿ.ಮೀ. ವ್ಯಾಪ್ತಿ
ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ಪ್ರಸ್ತಾವನೆಗೈದು, ಸದ್ಯ ಎರಡು ವಾಹನಗಳ ಮೂಲಕ ಆಸ್ಪತ್ರೆಯ 10 ಕಿ.ಮೀ. ವ್ಯಾಪ್ತಿಯೊಳಗೆ ಹೋಂ ಕೇರ್‌ ಸೇವೆ ಒದಗಿಸುತ್ತೇವೆ. ಮುಂದಿನ ದಿನಗಳಲ್ಲಿ ಈ ಸೇವೆಯನ್ನು ಇನ್ನಷ್ಟು ವಿಸ್ತರಿಸಲಿದ್ದೇವೆ ಎಂದರು.

ಏನಿದು ಹೋಮ್‌ ಕೇರ್‌ ?
ವಿವಿಧ ಪರೀಕ್ಷೆಗಳಿಗೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಆಸ್ಪತ್ರೆಗೆ ಬರಬೇಕಾಗುತ್ತದೆ. ವೃದ್ಧರಿಗೆ, ಅಂಗವಿಕಲರಿಗೆ ಇದು ಕಷ್ಟ. ಇಂಥ ಸಂದರ್ಭ ನರ್ಸಿಂಗ್‌ ತಂಡದ ಸದಸ್ಯರು ರೋಗಿಗಳ ಮನೆಗೆ ತರಳಿ ಸ್ಯಾಂಪಲ್‌ ಸಂಗ್ರಹಿಸುತ್ತಾರೆ. ವರದಿ, ವೈದ್ಯರ ಅಭಿಪ್ರಾಯವನ್ನೂ ಮನೆಗೆ ತಲುಪಿಸುತ್ತಾರೆ. ಫಿಸಿಯೋಥೆರಪಿ ತಜ್ಞರು ಮನೆಗಳಿಗೆ ತೆರಳಿ ಸೇವೆ ನೀಡುತ್ತಾರೆ. ಗಾಯಕ್ಕೆ ಡ್ರೆಸ್ಸಿಂಗ್‌ ಸೇವೆಯನ್ನೂ ಮನೆಯಲ್ಲೇ ನೀಡಲಾಗುವುದು. ಅಗತ್ಯವಿದ್ದವರು 0820-2922761ಕ್ಕೆ  ಕರೆ ಮಾಡಬಹುದು.

ಆಯುಷ್ಮಾನ್‌ ಭಾರತ ಅನುಷ್ಠಾನದಲ್ಲಿ  ಸಮಸ್ಯೆ
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಆಯುಷ್ಮಾನ್‌ ಭಾರತವು 5 ಲಕ್ಷ ರೂ. ವರೆಗಿನ ಚಿಕಿತ್ಸೆಗೆ ನೆರವಾಗುತ್ತದೆ. ಆದರೆ ರಾಜ್ಯ ಸರಕಾರದಮಟ್ಟದಲ್ಲಿ ಅನುಷ್ಠಾನ ಮಾಡುವಾಗ ಸಮಸ್ಯೆಯಾಗುತ್ತಿದೆ. ಮೊದಲು ಸರಕಾರಿ ಆಸ್ಪತ್ರೆಗೆ ಹೋಗಬೇಕು ಎಂಬ ನಿಯಮ ಮಾಡಿದ್ದು ರೋಗಿಗಳಿಗೆ ಕಷ್ಟವಾಗಿದೆ. ಕೆಲವು ರೋಗಗಳ ಕೋಡ್‌ಇಲ್ಲದೆ ಸಮಸ್ಯೆಯಾಗಿದೆ. ಈ ಬಗ್ಗೆ ವೈದ್ಯರು ಮಾಹಿತಿ ನೀಡಿದಲ್ಲಿ ಸರಕಾರದ ಗಮನಕ್ಕೆ ತರಲಾಗುವುದು. ಕೋಡ್‌ ಇಲ್ಲದ ಕಾಯಿಲೆಗೆ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ ಎಂದು ಶಾಸಕ ರಘುಪತಿ ಭಟ್‌ ಹೇಳಿದರು.

ಟಾಪ್ ನ್ಯೂಸ್

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Udupi: ವಿಡಿಯೋ ಕರೆ ರೆಕಾರ್ಡ್‌ ಮಾಡಿ ಹಣಕ್ಕೆ ಬೇಡಿಕೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

Fraud: ಅಪರಿಚಿತ ವ್ಯಕ್ತಿಯಿಂದ 2.41 ಲಕ್ಷ ರೂ. ವಂಚನೆ

8

ಬಡಾನಿಡಿಯೂರು: ಊಟ ಮಾಡುತ್ತಿರುವಾಗಲೇ ವ್ಯಕ್ತಿ ಸಾವು

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

Missing: ಕನ್ನರ್ಪಾಡಿ; ಮದುವೆಗೆ ಬಂದ ವ್ಯಕ್ತಿ ನಾಪತ್ತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

6-sslc

Rank: ರಾಜ್ಯಕ್ಕೆ 5ನೇ ರ‍್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.