Manipal ಮಾನಸಿಕ ಖಿನ್ನತೆ: ಬ್ಯಾಂಕ್ ಮಹಿಳಾ ಅಧಿಕಾರಿ ಆತ್ಮಹತ್ಯೆ
Team Udayavani, Sep 15, 2023, 10:03 PM IST
ಮಣಿಪಾಲ: ಮಾನಸಿಕ ಖಿನ್ನತೆಯಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಹಾರಾಷ್ಟ್ರದ ನಾಗಪುರದ ನಿವಾಸಿ ಸೋನಾಲಿ (35) ಆತ್ಮಹತ್ಯೆ ಮಾಡಿಕೊಂಡವರು. ಅವರು ಮಣಿಪಾಲದ ಕೆನರಾ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದರು. 2 ವರ್ಷಗಳಿಂದ ಮಣಿಪಾಲದ ವಿಬುಧಪ್ರಿಯ ನಗರದಲ್ಲಿರುವ ಪ್ರೀಮಿಯರ್ ರೆಸಿಡೆನ್ಸ್ನಲ್ಲಿ ವಾಸಮಾಡಿಕೊಂಡಿದ್ದರು.
2019ರಲ್ಲಿ ಅಮೋಲ್ ಅವರೊಂದಿಗೆ ಮದುವೆಯಾಗಿ 2022ರಲ್ಲಿ ವೈಯಕ್ತಿಕ ಕಾರಣಗಳಿಂದ ವಿಚ್ಛೇದನವಾಗಿತ್ತು. ಆ ಬಳಿಕ ಅವರು ಸ್ವಲ್ಪ ಖಿನ್ನತೆಗೆ ಒಳಗಾಗಿದ್ದರು.
ಅಪಾರ್ಟ್ಮೆಂಟ್ನಲ್ಲಿ ಒಬ್ಬಳೇ ವಾಸವಾಗಿದ್ದು, ಅವರ ತಂದೆ ನರೇಂದ್ರ ವಿಸ್ತಾರಿ ನಂದೇಶ್ವರ ಹಾಗೂ ಅವರ ಪತ್ನಿ ಆಗಾಗ ಬಂದು ಹೋಗುತ್ತಿದ್ದರು.
ಆ. 27ರಂದು ಅವರ ತಾಯಿ ಶೋಭಾ ಅವರು ಮೆಟ್ಟಿಲಿನಿಂದ ಕೆಳಕ್ಕೆ ಬಿದ್ದು ಅವರ ಕಾಲಿಗೆ ಪೆಟ್ಟಾಗಿತ್ತು. ಅವರನ್ನು ಕೆಎಂಸಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದ್ದು, ಸೋನಾಲಿ ಊಟ, ತಿಂಡಿ ತಂದು ಕೊಡುತ್ತಿದ್ದರು. ಸೆ. 14ರಂದು ಡಿಸಾcರ್ಜ್ ಇತ್ತು. ಸೆ. 13ರ ರಾತ್ರಿ ಆಕೆ ತಂದೆಯೊಂದಿಗೆ ಆಸ್ಪತ್ರೆಯಲ್ಲಿಯೇ ಇದ್ದು, ಬೆಳಗ್ಗೆ ಮನೆಗೆ ಹಿಂದಿರುಗಿದ್ದಳು. ಬಳಿಕ ಸಂಜೆಯಾದರೂ ಆಸ್ಪತ್ರೆಗೆ ಬಾರದಿದ್ದಾಗ ತಂದೆ ಕರೆ ಮಾಡಿದಾಗ ಮೊಬೈಲ್ ಕರೆ ಸ್ವೀಕರಿಸಿರಲಿಲ್ಲ. ರಾತ್ರಿ 8 ಗಂಟೆಗೆ ಮನೆಗೆ ಬಂದು ನೋಡಿದಾಗ ಒಳಗಿನಿಂದ ಚಿಲಕ ಹಾಕಿರುವುದು ಕಂಡುಬಂದಿದ್ದು, ಬಳಿಕ ಬಾಗಿಲು ತೆರೆದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು
ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು