ಮಣಿಪಾಲ ಎಸ್ಒಸಿ:”ನಮ್ಮ ಅಂಗಡಿ-2019′ ಉದ್ಘಾಟನೆ
Team Udayavani, Mar 9, 2019, 12:30 AM IST
ಉಡುಪಿ: ಮಣಿಪಾಲ ಮಾಹೆಯ ಸ್ಕೂಲ್ ಆಫ್ ಕಮ್ಯೂನಕೇಷನ್ನಲ್ಲಿ(ಎಸ್ಒಸಿ) “ದಿ ಕನ್ಸರ್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ ‘(ಸಿಡಬ್ಲೂéಸಿ) ಸಹಯೋಗದಲ್ಲಿ ಮೂರು ದಿನಗಳ ಕಾಲ ನಡೆಯುವ “ನಮ್ಮ ಅಂಗಡಿ’ ಎಂಬ ಮಾರಾಟ ಮೇಳ ಮತ್ತು ವಸ್ತು ಪ್ರದರ್ಶನವನ್ನು ಜಿಲ್ಲಾಧಿಕಾರಿ ಹೆಪ್ಸಿಭಾ ರಾಣಿ ಅವರು ಶುಕ್ರವಾರ ಉದ್ಘಾಟಿಸಿದರು.
“ಸಾಮಾಜಿಕ ಸೇವೆಯ ಬದ್ಧತೆ ಅಗತ್ಯ. ಮಹಿಳೆಯರು ಮನೆ ಜವಾಬ್ದಾರಿ ನಿರ್ವಹಿಸುವ ಜತೆಗೆ ತಮ್ಮ ಕಾರ್ಯಕ್ಷೇತ್ರ ಹಾಗೂ ಸಾಮಾಜಿಕವಾಗಿಯೂ ಸಮರ್ಥವಾಗಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ.
ಅನಾಥ ಮಕ್ಕಳಿಗೆ ಆಶ್ರಯ, ಶಿಕ್ಷಣ ನೀಡುವುದಕ್ಕಾಗಿ ರೂಪುಗೊಂಡ “ನಮ್ಮ ಭೂಮಿ’ ಸಂಸ್ಥೆಯ ಜತೆಗೆ ಕೈ ಜೋಡಿಸಿ ಸಾಮಾಜಿಕ ಸೇವಾ ಕಾರ್ಯದಲ್ಲಿಯೂ ತೊಡಗಿಸಿಕೊಂಡಿರುವ ಎಸ್ಒಸಿ ಮಾದರಿ ಕೆಲಸ ಮಾಡುತ್ತಿದೆ. ಇಂತಹ ಮಕ್ಕಳನ್ನು ನಾನು ಮುಂದೆ ಖುದ್ದಾಗಿ ಭೇಟಿಯಾಗಲಿದ್ದೇನೆ’ ಎಂದು ಹೆಪ್ಸಿಬಾ ರಾಣಿ ಹೇಳಿದರು.
ಎಸ್ಒಸಿ ನಿರ್ದೇಶಕಿ ಡಾ| ಪದ್ಮಾರಾಣಿ ಅವರು ಮಾತನಾಡಿ “ಕಳೆದ 16 ವರ್ಷಗಳಿಂದ ನಮ್ಮ ಅಂಗಡಿ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಾಮಾಜಿಕ ಕಾರ್ಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿಯೂ ಸಂವೇದನೆ ಬೆಳೆಸುವುದು, ನಮ್ಮ ಭೂಮಿಯ ಮಕ್ಕಳು ಹಾಗೂ ಇತರ ಕರಕುಶಲಕರ್ಮಿಗಳು ಉತ್ಪಾದಿಸಿದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವುದು ಜತೆಗೆ ವಿದ್ಯಾರ್ಥಿ ಗಳಿಗೆ ಮಾರುಕಟ್ಟೆ ಜ್ಞಾನ ಒದಗಿಸುವ ಉದ್ದೇಶದಿಂದ ಇಂತಹ ಪ್ರದರ್ಶನ ಆಯೋಜಿಸಲಾಗುತ್ತಿದೆ’ ಎಂದರು.
ನಮ್ಮ ಭೂಮಿಯ ಕಾರ್ಯನಿರ್ವಾಹಕ ನಿರ್ದೇಶಕ ದಾಮೋದರ ಆಚಾರ್ಯ, ಎಸ್ಒಸಿಯ ಉಪನ್ಯಾಸಕಿ ಮಂಜುಳಾ ವೆಂಕಟ ರಾಘವನ್ ಉಪಸ್ಥಿತರಿದ್ದರು. ಪ್ರಿಯಾಂಕ ರಾಯ್ ನಿರ್ವಹಿಸಿ ಶುಚಿ ರೈ ವಂದಿಸಿದರು.
ನಮ್ಮಂಗಡಿಯಲ್ಲಿ ಏನೇನಿವೆ?
ಸಾಂಪ್ರದಾಯಿಕ ಕರಕುಶಲ ವಸ್ತುಗಳು, ಕಲಾಕೃತಿಗಳು, ಬೆಡ್ಶೀಟ್, ಅಲಂಕಾರಿಕ ವಸ್ತುಗಳು, ರೆಡಿಮೇಡ್ ಬಟ್ಟೆಗಳು, ಆಹಾರ ತಿನಿಸುಗಳು, ನೂತನ ಟ್ರೆಂಡ್ಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಿರುವ ಆಭರಣಗಳು ಹೀಗೆ ವಿವಿಧ ವಸ್ತುಗಳ ಪ್ರದರ್ಶನ ಮತ್ತು ಮಾರಾಟವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ