Manipal ನನ್ನ ಬದುಕಿಗೆ ಅರ್ಥವಂತಿಕೆ ಕೊಟ್ಟ ಉದಯವಾಣಿ: ಜಯಮಾಲಾ ಬಣ್ಣನೆ


Team Udayavani, Jan 20, 2024, 11:06 PM IST

Manipal ನನ್ನ ಬದುಕಿಗೆ ಅರ್ಥವಂತಿಕೆ ಕೊಟ್ಟ ಉದಯವಾಣಿ: ಜಯಮಾಲಾ ಬಣ್ಣನೆ

ಮಣಿಪಾಲ: ನನ್ನ ಜೀವನದ ಹಾದಿ ಅನೇಕ ರಮ್ಯ ರೋಚಕ ತಿರುವುಗಳಿಂದ ಕೂಡಿರುವ ಕಾಡಿನ ಪಯಣದಂತೆ. ನನ್ನನ್ನು ಕೈಹಿಡಿದು ಕೊನೆಗೆ ಮಣಿಪಾಲದ ಈ ವೇದಿಕೆ ಮೇಲೆ ನಿಲ್ಲಿಸಿದೆ. ಈ ಯಶಸ್ಸಿನಲ್ಲಿ ಕೈ ಹಿಡಿದು ನಡೆಸಿದ ಅನೇಕ ಮಹಾನುಭಾವರು, ಸಂಸ್ಥೆಗಳು, ದೈವಗಳ ಕೃಪೆಯೂ ಇದೆ. ಅಂತಹ ಪ್ರಾತಃಸ್ಮರಣೀಯರಲ್ಲಿ ನನ್ನ ಬದುಕಿಗೆ ಅರ್ಥವಂತಿಕೆ ತಂದ ಸಂಗತಿಗಳಲ್ಲಿ ಮಣಿ ಪಾಲದ “ಉದಯವಾಣಿ’ ಪಾತ್ರ ಹಿರಿದು ಎಂದು ಹಿರಿಯ ಚಲನಚಿತ್ರ ನಟಿ ಡಾ| ಜಯಮಾಲಾ ರಾಮಚಂದ್ರ ಹೇಳಿದರು.

ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌, ಮಾಹೆ, ಮಣಿಪಾಲ್‌ ಎಜುಕೇಶನ್‌ ಆ್ಯಂಡ್‌ ಮೆಡಿಕಲ್‌ ಗ್ರೂಪ್‌, ಮಣಿಪಾಲ್‌ ಮೀಡಿಯ ನೆಟ್‌ವರ್ಕ್‌ ಲಿ. ಡಾ| ಟಿಎಂಎ ಪೈ ಫೌಂಡೇಶನ್‌ ವತಿಯಿಂದ ಶುಕ್ರವಾರ ಮಣಿಪಾಲ ಗ್ರೀನ್ಸ್‌ನಲ್ಲಿ ನಡೆದ ಹೊಸ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.

ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನ್ನ ಬೆಳವಣಿಗೆಯನ್ನು ಪ್ರೋತ್ಸಾಹಿಸಿದ್ದಲ್ಲದೆ ನನ್ನ ಓರೆಕೋರೆಗ ಳನ್ನು ಉದಯವಾಣಿ ಗುರುತಿಸಿ ತಿದ್ದಿದೆ. ಈ ಋಣವನ್ನು ತೀರಿಸಲು ಸಾಧ್ಯವಿಲ್ಲ ಎನ್ನುವಾಗ ಮತ್ತೆ ಈ ಪ್ರಶಸ್ತಿ ಮೂಲಕ ನನ್ನನ್ನು ಮತ್ತೆ ಮಹಾ ಋಣಭಾರವನ್ನು ಮಣಿಪಾಲದ ಸಂಸ್ಥೆಗಳು ಹೊರಿಸಿವೆ ಎಂಬ ಮಾತು ಉತ್ಪ್ರೇಕ್ಷೆಯಲ್ಲ ಎಂದು ಅವರು ಜಯಮಾಲಾ ಹೇಳಿದರು.

ದಕ್ಷಿಣ ಭಾರತದಲ್ಲಿ ಗಂಡು ಆಳ್ವಿ ಕೆಯ ಕ್ಷೇತ್ರವಾಗಿದ್ದ ಚಲನಚಿತ್ರವಾಣಿಜ್ಯ ಮಂಡಳಿಗೆ ಅಧ್ಯಕ್ಷೆಯಾಗಿ ಆಯ್ಕೆ ಯಾದಾಗ ಕನ್ನಡ ಚಿತ್ರರಂಗದ ಅಮೃತ ಮಹೋತ್ಸವವನ್ನು ಮುನ್ನಡೆಸಬೇಕಾದ ಸವಾಲು ಬಂದಾಗಲೂ ನನಗೆ ಒಳ ಧೈರ್ಯವಾಗಿ ಇದ್ದದ್ದು ಉದಯವಾಣಿ ಬೆಂಬಲ. ಉದಯವಾಣಿಯಿಂದ ಬದು ಕನ್ನು ಕಲಿತ ಸಹಸ್ರಾರು ಮಂದಿಯಲ್ಲಿ ನಾನೂ ಒಬ್ಬಳು ಎಂಬುದು ಹೆಮ್ಮೆಯ ವಿಷಯ ಎಂದರು.

ಇತರ ಪುರಸ್ಕೃತರಾದ ಇಂಡಿಯನ್‌ ಓವರ್ಸಿಸ್‌ ಬ್ಯಾಂಕ್‌ ನಿವೃತ್ತ ಅಧ್ಯಕ್ಷ ಡಾ| ಎಂ. ನರೇಂದ್ರ, ಮಣಿಪಾಲ ಕೆಎಂಸಿ ಮೆಡಿಸಿನ್‌ ವಿಭಾಗದ ಪ್ರಾಧ್ಯಾಪಕ ಡಾ| ಎಚ್‌. ಮಂಜುನಾಥ ಹಂದೆ, ಹಿರಿಯ ಕೃಷಿಕ ಬಿ.ಕೆ. ದೇವ ರಾವ್‌, ಮಂಗಳೂರು ಕೆಎಂಸಿ ನಿವೃತ್ತ ಡೀನ್‌ ಡಾ| ಎಡ್ಕತೋಡಿ ಸಂಜೀವ ರೈ, ಪ್ರಶಸ್ತಿ ಪ್ರದಾನ ಮಾಡಿದ ಮಾಹೆ ಟ್ರಸ್ಟ್‌ ಅಧ್ಯಕ್ಷ ಡಾ| ರಂಜನ್‌ ಪೈ, ಟ್ರಸ್ಟಿ ವಸಂತಿ ಪೈ, ಎಂಎಂಎನ್‌ಎಲ್‌ ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಸತೀಶ್‌ ಯು. ಪೈ, ಡಾ| ಟಿಎಂಎ ಪೈ ಪ್ರತಿಷ್ಠಾನದ ಅಧ್ಯಕ್ಷ ಟಿ. ಅಶೋಕ್‌ ಪೈ, ಮಾಹೆ ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌, ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.