ಮಣಿಪಾಲ, ಉಡುಪಿ, ಮಲ್ಪೆಯೂ ಆಗಲಿವೆ ಸ್ಮಾರ್ಟ್‌ ಸಿಟಿ !

ಸಿದ್ಧವಾಗಿದೆ ನೀಲನಕಾಶೆ; ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಗೆ ಚಿಂತನೆ

Team Udayavani, Dec 11, 2019, 6:15 AM IST

ds-44

ಉಡುಪಿ: ಪ್ರವಾಸಿ ತಾಣವಾಗಿ ಬೆಳೆಯುತ್ತಿರುವ ಉಡುಪಿ, ಶಿಕ್ಷಣ ಕಾಶಿ ಖ್ಯಾತಿಯ ಮಣಿಪಾಲ ಮತ್ತು ಕರಾವಳಿ ಕರ್ನಾಟಕದ ಪ್ರಮುಖ ಬಂದರು ಹೊಂದಿರುವ ಮಲ್ಪೆಗಳನ್ನು “ಸ್ಮಾರ್ಟ್‌ ಸಿಟಿ’ ಪರಿಕಲ್ಪನೆಯಡಿ ಅಭಿವೃದ್ಧಿ ಪಡಿಸಲು ಅಗತ್ಯವಿರುವ ಸಿದ್ಧತೆ ನಡೆಯುತ್ತಿದೆ.

ಅಂತಾರಾಷ್ಟ್ರೀಯ ಗುಣ್ಣಮಟ್ಟದ ಮೂಲಸೌಕರ್ಯ, ಸಂಚಾರ ನಿಯಂತ್ರಣ, ಸುರಕ್ಷತೆ, ಪ್ರವಾಸೋದ್ಯಮ, ಸ್ಥಳೀಯ ಹೂಡಿಕೆ ಹೆಚ್ಚಳ ಮೊದಲಾದವು “ಸ್ಮಾರ್ಟ್‌ ಸಿಟಿ’ ಯೋಜನೆಯಡಿ ಇರುತ್ತವೆ. ಖಾಸಗಿ – ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ ಮಾದರಿ) ಮಣಿಪಾಲ, ಉಡುಪಿ, ಮಲ್ಪೆಗಳನ್ನು ಸ್ಮಾರ್ಟ್‌ ಸಿಟಿಯಾಗಿಸಲು ಬೆಂಗಳೂರಿನ ಸಂಸ್ಥೆ ಯೊಂದು ನೀಲನಕಾಶೆ ತಯಾರಿಸಿದ್ದು, ಡಿಪಿಆರ್‌ ಸಿದ್ಧವಾಗುತ್ತಿದೆ. ಈಗಾಗಲೇ ಶಾಸಕ ರಘುಪತಿ ಭಟ್‌, ಜಿಲ್ಲಾಧಿಕಾರಿ ಜಿ. ಜಗದೀಶ್‌, ಎಸ್ಪಿ ನಿಶಾ ಜೇಮ್ಸ್‌, ನಗರಸಭೆ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆದಿದೆ.

ಏನೆಲ್ಲ ಸ್ಮಾರ್ಟ್‌?
ಸ್ಮಾರ್ಟ್‌ ಮಣಿಪಾಲ, ಉಡುಪಿ, ಮಲ್ಪೆಯ ಚಿತ್ರಣ ಸಂಪೂರ್ಣವಾಗಿ ಬದಲಾಗಲಿದೆ. ಮಲ್ಟಿ ಲೆವೆಲ್‌ ಪಾರ್ಕಿಂಗ್‌ನಿಂದ ಪ್ರಸ್ತುತ ಉಡುಪಿ, ಮಲ್ಪೆ, ಮಣಿಪಾಲದಲ್ಲಿ ಕಾಡುತ್ತಿರುವ ಪಾರ್ಕಿಂಗ್‌ ಸಮಸ್ಯೆಗೆ ಮುಕ್ತಿ ಸಿಗಲಿದೆ. ಪ್ರಮುಖ ತಾಣಗಳ ಟ್ರಾಫಿಕ್‌ ಸಮಸ್ಯೆ ಸಂಪೂರ್ಣವಾಗಿ ಪರಿಹಾರವಾಗಲಿದೆ. ಮುಂದಿನ ದಿನಗಳಲ್ಲಿ ರಸ್ತೆಗೆ ಇಳಿಯಲಿರುವ ಇಲೆಕ್ಟ್ರಾನಿಕ್‌ ವಾಹನಗಳಿಗಾಗಿ ಚಾರ್ಜಿಂಗ್‌ ವ್ಯವಸ್ಥೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಆಯ್ದ ಕಡೆಗಳಲ್ಲಿ ಪ್ಯಾನಿಕ್‌ ಬಟನ್‌ ವ್ಯವಸ್ಥೆ ಇರಲಿದೆ.

ಪ್ರಮುಖ ಕಡೆಗಳಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನಗಳ ಪತ್ತೆಗೆ ಎಲ್‌ಪಿ ಕೆಮರಾ, ಸ್ಮಾರ್ಟ್‌ ಪೋಲ್ಸ್‌, ಸ್ಮಾರ್ಟ್‌ ಟವರ್, ಕಂಟ್ರೋಲ್‌ ಸೆಂಟರ್‌, ಬಸ್‌ ಬೇ, ಆಟೋ ಬೇ, ಬೈಕ್‌ ಬೇ, ಸೈಕ್ಲಿಂಗ್‌ ಪಾಥ್‌, ಇ-ಟಾಯ್ಲೆಟ್‌, ಸ್ಮಾರ್ಟ್‌ ಲಾಂಜ್‌ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸ್ಮಾರ್ಟ್‌ ಲೈಟ್ಸ್‌, ಕೆಮರಾ, ಸರ್ವೇಲೆನ್ಸ್‌, ವೈಫೈ ಹಾಟ್‌ಸ್ಪಾಟ್‌, ಡಿಜಿಟಲ್‌ ಡಿಸ್‌ಪ್ಲೇ, ಆರ್‌ಎಫ್ಐಡಿ ಕಾರ್ಡ್‌ ರೀಡರ್‌ ಇತ್ಯಾದಿ ಒಳಗೊಂಡ 10ಕ್ಕೂ ಅಧಿಕ ಸ್ಮಾರ್ಟ್‌ ಪೋಲ್‌, ಸ್ಮಾಟ್‌ ಟವರ್‌ಗಳು ನೀಲನಕಾಶೆಯಲ್ಲಿ ಸೇರಿವೆ.

ಮಣಿಪಾಲವನ್ನು ಸ್ಮಾರ್ಟ್‌ ಸಿಟಿ ಮಾಡುವ ಯೋಜನೆ ಹಿಂದೆಯೇ ಇತ್ತು¤. ಈಗ ಅದನ್ನು ಉಡುಪಿ ಮತ್ತು ಮಲ್ಪೆಗೂ ಖಾಸಗಿ ಸಹಭಾಗಿತ್ವದಲ್ಲಿ ವಿಸ್ತರಿಸಲಾಗಿದೆ. ಬೆಂಗಳೂರಿನ ಸಂಸ್ಥೆಯೊಂದು ನೀಲನಕಾಶೆ ಸಿದ್ಧಪಡಿಸಿದೆ. ಮಲ್ಪೆ, ಮಣಿಪಾಲ, ಉಡುಪಿಗೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ “ಸ್ಮಾರ್ಟ್‌ ಸಿಟಿ’ ಯೋಜನೆ ಅನುಕೂಲವಾಗಲಿದೆ.
– ರಘುಪತಿ ಭಟ್‌, ಶಾಸಕರು, ಉಡುಪಿ

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.