Manipal Kasturba Hospital: ಅತ್ಯಾಧುನಿಕ 3ಟೆಸ್ಲಾ ಎಂಆರ್‌ಐ ಉದ್ಘಾಟನೆ


Team Udayavani, Aug 17, 2023, 12:40 AM IST

Manipal Kasturba Hospital: ಅತ್ಯಾಧುನಿಕ 3ಟೆಸ್ಲಾ ಎಂಆರ್‌ಐ ಉದ್ಘಾಟನೆ

ಮಣಿಪಾಲ: ಅತ್ಯಾಧುನಿಕ ತಂತ್ರಜ್ಞಾನವಾದ ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಸಿದ್ಧಪಡಿಸಿರುವ 3ಟೆಸ್ಲಾ ಮ್ಯಾಗ್ನೆಟಿಕ್‌ ರೆಸೋನೆನ್ಸ್ ಇಮೇಜಿಂಗ್‌ (ಎಂಆರ್‌ಐ) ಯಂತ್ರ ವನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಂಗಳವಾರ ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಸಮೂಹದ ಮುಖ್ಯಸ್ಥರಾದ ಡಾ| ರಂಜನ್‌ ಆರ್‌. ಪೈ ಉದ್ಘಾಟಿಸಿದರು.

ಇಲ್ಲಿನ ಮಧುವನ್‌ ಸೆರಾಯ್‌ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಣಿಪಾಲ ಹೆಲ್ತ್ ಎಂಟರ್‌ ಪ್ರೈಸೆಸ್‌ ಪ್ರೈ.ಲಿ. ಮುಖ್ಯಸ್ಥ ಡಾ| ಸುದರ್ಶನ್‌ ಬಲ್ಲಾಳ್‌ ಮಾತನಾಡಿ ರಾಜ್ಯ, ಹೊರಾಜ್ಯದ ವಿವಿಧ ಭಾಗಗಳಿಂದ ಅನೇಕರು ಚಿಕಿತ್ಸೆಗಾಗಿ ಮಣಿಪಾಲಕ್ಕೆ ಭೇಟಿ ನೀಡುತ್ತಿರುತ್ತಾರೆ. 3 ಟೆಸ್ಲಾ ಎಂಆರ್‌ಐ ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಲ್ಲದೆ, ಅನೇಕ ಜಿಲ್ಲೆಗಳ ಗ್ರಾಮೀಣ ರೋಗಿಗಳಿಗೆ ಉತ್ತಮ ಪ್ರಯೋಜನ ನೀಡಲಿದೆ. ಜನರು ಸುಧಾರಿತ ರೋಗನಿರ್ಣಯ ಮತ್ತು ಚಿಕಿತ್ಸೆಗೆ ದೊಡ್ಡ ನಗರಗಳಿಗೆ ಹೋಗಬೇಕಾಗುವುದಿಲ್ಲ ಎಂದರು.

ಮಾಹೆ ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಮಾತನಾಡಿ, ವೈದ್ಯಕೀಯ ಶಿಕ್ಷಣದಲ್ಲಿ ಉತ್ಕೃಷ್ಟತೆ, ಬದ್ಧತೆಯೊಂದಿಗೆ ಮಾಹೆ ವಿ.ವಿ.ಯು 3 ಟೆಸ್ಲಾ ಎಂಆರ್‌ಐ ಯಂತ್ರದಂತಹ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ. ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆಗೂ ಇದರ ಪ್ರಯೋಜನ ಸಿಗಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌ ಮಾತನಾಡಿ, 3 ಟೆಸ್ಲಾ ಎಂಆರ್‌ಐ ಯಂತ್ರದ ಉದ್ಘಾಟನೆಯು ಡಾ| ಟಿಎಂಎ ಪೈ ಅವರ ದೂರದೃಷ್ಟಿ ಯೋಚನೆಗೆ ನೀಡಿದ ಗೌರವವಾಗಿದೆ. ರೆಡಿಯೋ ಡಯಾಗ್ನಸಿಸ್‌ ವಿಭಾಗದಲ್ಲಿ ಈಗ ಹಲವು ಬದಲಾವಣೆಗಳು ಆಗಿವೆ. 1970-80ರ ದಶಕದಲ್ಲಿದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಹೊಸ ಹೊಸ ತಂತ್ರಜ್ಞಾನ ಬಂದಿದೆ. ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳು ವುದು ಮತ್ತು ಉತ್ತಮ ಗುಣಮಟ್ಟದ ಸೇವೆ ಒದಗಿಸುವಲ್ಲಿ ಮಾಹೆ ವಿ.ವಿ. ಸದಾ ಮುಂದಿದೆ. ದೇಶದ ಟಾಪ್‌ 10 ವೈದ್ಯಕೀಯ ಕಾಲೇಜುಗಳಲ್ಲಿ ಕೆಎಂಸಿ ಇದೆ ಎಂದು ತಿಳಿಸಿದರು.

ಮುಂಬಯಿ ಮೆಡಿಕಾಬಜಾರ್‌ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಹಾಗೂ ವ್ಯವಹಾರ ಮುಖ್ಯಸ್ಥ ವಿ.ಪಿ. ತಿರುಮಲೈ, ಕೆಎಂಸಿ ಡೀನ್‌ ಡಾ| ಪದ್ಮರಾಜ್‌ ಹೆಗ್ಡೆ, ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ, ಮಾಹೆ ಸಿಒಒ ಸಿ.ಜಿ. ಮುತ್ತಣ್ಣ, ಮಾಹೆ ಬೋಧನಾ ಆಸ್ಪತ್ರೆಗಳ ಸಿಒಒ ಡಾ| ಆನಂದ್‌ ವೇಣುಗೋಪಾಲ್‌, ಕುಲಸಚಿವ ಡಾ| ಗಿರಿಧರ ಕಿಣಿ ಸಹಿತ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರೆಡಿಯೋಡಯಾಗ್ನಸಿಸ್‌ ವಿಭಾ ಗದ ಮುಖ್ಯಸ್ಥೆ ಡಾ| ಪ್ರಕಾಶಿನಿ ಕೆ. ಪ್ರಸ್ತಾವನೆಗೈದರು. ಪ್ರಾಧ್ಯಾಪಕ ಡಾ| ರಾಜಗೋಪಾಲ್‌ ಕೆ.ವಿ. ಸ್ವಾಗತಿ ಸಿದರು. ಸಹ ಪ್ರಾಧ್ಯಾಪಿಕೆ ಡಾ| ಪ್ರಿಯಾ ಜಯರಾಜ್‌ ವಂದಿಸಿದರು.

3 ಟೆಸ್ಲಾ ಎಂಆರ್‌ಐ
3ಟೆಸ್ಲಾ ಎಂಆರ್‌ಐ ಯಂತ್ರವು ವೈದ್ಯಕೀಯ ಚಿತ್ರಣದಲ್ಲಿ ಅತ್ಯಾಧುನಿಕ ನಿಖರತೆಯನ್ನು ಎಐ ತಂತ್ರಜ್ಞಾನದ ಮೂಲಕ ನೀಡುತ್ತದೆ. ಉತ್ತಮವಾದ ಚಿತ್ರದ ಗುಣಮಟ್ಟ ಮತ್ತು ಪ್ರಸರಣ-ಪ್ರಬಲವಾದ ಇಮೇಜಿಂಗ್‌ ಮತ್ತು ಕ್ರಿಯಾತ್ಮಕ ಎಂಆರ್‌ಐ ಸ್ಕ್ಯಾನ್‌ನಲ್ಲಿ ಇನ್ನಷ್ಟು ಸ್ಪಷ್ಟತೆ ಹಾಗೂ ನಿಖರತೆಯನ್ನು ಒದಗಿಸುತ್ತದೆ. ನ್ಯೂರೋ ಇಮೇಜಿಂಗ್‌, ಹೃದಯರಕ್ತನಾಳದ ಮೌಲ್ಯಮಾಪನ ಮತ್ತು ಮಸ್‌ಕ್ಯುಲೋಸ್ಕೆಲಟಲ್‌ ಮೌಲ್ಯಮಾಪನದಲ್ಲಿ ಅಪ್ಲಿಕೇಶನ್‌ನೊಂದಿಗೆ ರೋಗನಿರ್ಣಯ ಮತ್ತು ಚಿಕಿತ್ಸೆಯ ಯೋಜನೆ ರೂಪಿಸಲು ಸಹಕಾರಿಯಾಗಲಿದೆ. ವೆಚ್ಚ ಮತ್ತು ಸಮಯದ ಉಳಿತಾಯಕ್ಕೂ ಈ ಯಂತ್ರ ಅನುಕೂಲ ಮಾಡಿಕೊಡಲಿದೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.