ಮತ್ತೆ ಸುಂಟರಗಾಳಿ ಆರ್ಭಟ : ಹಲವು ಮನೆಗಳಿಗೆ ಹಾನಿ
Team Udayavani, Sep 8, 2019, 10:05 AM IST
ಹೆಬ್ರಿ: ಇಂದು ಬೆಳಿಗ್ಗೆ ಬೀಸಿದ ಭಾರಿ ಸುಂಟರಗಾಳಿಯ ಪರಿಣಾಮವಾಗಿ ಕುಚ್ಚೂರು ಬೇಳಂಜೆ ಪರಿಸರದ ಹಲವಾರು ಮನೆಗಳ ಹೆಂಚು ಶೀಟುಗಳು ಹಾರಿ ಹೋಗಿ ಅಪಾರ ನಷ್ಟ ಸಂಭವಿಸಿದೆ.
ಬೃಹತ್ ಮರಗಳು ರಸ್ತೆಗೆ ಬಿದ್ದ ಪರಿಣಾಮ ಬೇಳಂಜೆ -ಆರ್ಡಿ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು, ಬೇಳಂಜೆ ಮಲ್ಲಿಕಾರ್ಜುನ ದೇವಸ್ಥಾನದ ಎದುರಿನ ಪ್ರಾಂಗಣ ಹಾನಿಗೊಂಡಿದೆ.
ಸುಮಾರು ಅರ್ಧ ಗಂಟೆ ಬೀಸಿದ ಭಾರೀ ಸುಂಟರಗಾಳಿಯಿಂದ ಅಡಿಕೆ. ತೆಂಗು, ರಬ್ಬರ್ ತೋಟಗಳಿಗೂ ಹಾನಿ ಯಾಗಿ ನಷ್ಟ ಸಂಭವಿಸಿದೆ.
ಗ್ರಾಮದ ತಮ್ಮಯ್ಯ ನಾಯಕ್ , ಜಯಲಕ್ಷ್ಮಿ, ರಾಮ ನಾಯಕ್ , ಪುರುಷ ನಾಯಕ್ ,ಲಕ್ಷ್ಮನ್ ನಾಯಕ್ ಮುಂತಾದವರ ಮನೆಗಳಿಗೆ ತೀವ್ರವಾದ ಹಾನಿಯಾಗಿದೆ.
ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರು , ತಾಲೂಕು ಪಂಚಾಯತ್ ಅಧ್ಯಕ್ಷರು ಹಾಗೂ ಕಂದಾಯ ನಿರೀಕ್ಷಕರು ಭೇಟಿ ನೀಡಿದ್ದು ಶೀಘ್ರ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ