ಸ್ಥಳೀಯರಿಂದಲೇ ಕಡಲ್ಕೊರೆತ ತಡೆ ಯತ್ನ !

ಮರಳ ಚೀಲ ಪೇರಿಸಿಟ್ಟು ದೈತ್ಯ ಅಲೆಗಳಿಗೆ ಪ್ರತಿರೋಧ

Team Udayavani, Jun 24, 2019, 10:10 AM IST

MARAVANTHE3

ಉಪ್ಪುಂದ: ಮರವಂತೆಯಲ್ಲಿ ಕಡಲು ಕೊರೆತ ತಡೆಗೆ ಕ್ರಮ ಕೈಗೊಳ್ಳುವಂತೆ ಮಾಡಿರುವ ಮನವಿಗಳಿಗೆ ಸರಕಾರ, ಇಲಾಖೆಗಳು ಕಿವಿಗೊಡದ್ದ ರಿಂದ ರೋಸಿಹೋಗಿರುವ ಸ್ಥಳೀಯ ಮೀನುಗಾರರು ಸ್ವತಃ ಮರಳು ತುಂಬಿದ ಚೀಲಗಳನ್ನು ಪೇರಿಸಿಟ್ಟು ಅಲೆಗಳನ್ನು ತಡೆಯುವ ಸಾಹಸಕ್ಕೆ ಕೈಹಾಕಿದ್ದಾರೆ.

ಬಹಳಷ್ಟು ನಿರೀಕ್ಷೆ ಮೂಡಿಸಿದ್ದ ಕೇರಳ ಮಾದರಿಯ ಔಟ್‌ ಡೋರ್‌ ಬಂದರು ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ಈ ನಡುವೆ ಉತ್ತರ ಮತ್ತು ದಕ್ಷಿಣದ ತಡೆಗೋಡೆಯ ಮಧ್ಯ ಭಾಗದಲ್ಲಿ ಗಾಳಿಯ ಒತ್ತಡ ಅಧಿಕಗೊಂಡು ಕಡಲಿನ ಆರ್ಭಟ ಹೆಚ್ಚುತ್ತಿದೆ. ಕಳೆದ ಮಳೆಗಾಲದಿಂದೀಚೆಗೆ ಬುದ್ಧಿವಂತರ ಮನೆ ಮಂಜುನಾಥ, ಬಬ್ಬರ್ಯ ಕೋಡಿ ಮನೆ ರಾಮಚಂದ್ರ, ದೇವಿ, ಸುಬ್ರಹ್ಮಣ್ಯ, ಅಣ್ಣಪ್ಪ, ಸುಕ್ರ ಅವರ ಮನೆಯ ಅಂಗಳಕ್ಕೆ ನೀರು ನುಗ್ಗುತ್ತಿದೆ. ಸರಕಾರವನ್ನು ನಂಬಿ ಕೂತರೆ ಈ ಮಳೆಗಾಲದಲ್ಲಿ ಆಸ್ತಿಪಾಸ್ತಿ ಉಳಿಸಿಕೊಳ್ಳಲು ಸಾಧ್ಯವಾಗದು ಎಂದು ನಿರ್ಧರಿಸಿ ತಾವೇ ಕ್ರಮಕ್ಕೆ ಮುಂದಾಗಿದ್ದಾರೆ. 10 ಲಕ್ಷ ರೂ. ವೆಚ್ಚದಲ್ಲಿ 100ರಿಂದ 500 ಕಿಲೋ ಸಾಮರ್ಥ್ಯದ 1 ಸಾವಿರ  ದೊಡ್ಡ ಚೀಲ ಗಳಲ್ಲಿ ಮರಳು ತುಂಬಿ 120 ಮೀ. ದೂರದ ವರೆಗೆ ಇರಿಸಿ ಅಲೆಗಳು ಅಂಗಳಕ್ಕೇರದಂತೆ ತಡೆಯಲು ಯತ್ನಿಸಿದ್ದಾರೆ.

ಭರವಸೆಯಲ್ಲೇ ಉಳಿದ ಜಾಗ
ಕಳೆದ ಬಾರಿ ಅಲೆಗಳ ಹೊಡೆತಕ್ಕೆ ಮೀನುಗಾರರ 6 ಮನೆಗಳು ಸಂಪೂರ್ಣ ಜಖಂಗೊಂಡಿದ್ದವು. ಸ್ಥಳಕ್ಕಾಗಮಿಸಿದ್ದ ಮೀನುಗಾರಿಕೆ ಸಚಿವ ವೆಂಕಟರಾವ್‌
ನಾಡ ಗೌಡ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿ ಸಂತ್ರಸ್ತ ರಿಗೆ ಪರ್ಯಾಯ ಜಾಗ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಮರವಂತೆಯ ಗಾಂಧಿನಗರದ ಸರ್ವೆ ನಂಬ್ರ 57ಎಯಲ್ಲಿ ಪಂಚಾಯತ್‌ ಜಾಗ ಇದ್ದು, ಅದನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿತ್ತು. ಆದರೆ ಕಾರ್ಯಗತಗೊಂಡಿಲ್ಲ.

ಮರಳು ಚೀಲದ ತಡೆಗೋಡೆ
ಇಲ್ಲಿ ಸುಮಾರು 400 ಮೀ. ಉದ್ದಕ್ಕೆ ತಡೆಗೋಡೆ ನಿರ್ಮಿಸಲಾಗಿದೆ. ಆದರೆ ಅಲೆಗಳ ಹೊಡೆತಕ್ಕೆ ಕಲ್ಲುಗಳು ಕಡಲಾಳ ಸೇರುತ್ತಿವೆ. ಬೇಸಗೆಯಲ್ಲೂ ಕಂಡು ಬಂದಿದ್ದ ಕೊರೆತ ಈಗ ತೀವ್ರ ಸ್ವರೂಪದಲ್ಲಿದ್ದು, ತೀರ ಪ್ರದೇಶದ ರಸ್ತೆ, ಮನೆ, ತೆಂಗಿನ ಮರಗಳು, ಮೀನುಗಾರಿಕೆ ಶೆಡ್‌ಗಳು ಅಪಾಯದಲ್ಲಿವೆ.

ಶಾಶ್ವತ ಯೋಜನೆಗಿಲ್ಲ ಅನುದಾನ
ತಡೆಗೋಡೆ ಅವೈಜ್ಞಾನಿಕವಾಗಿರುವುದರಿಂದ ಒಳ ಭಾಗದಿಂದ ಮರಳು ಕೊಚ್ಚಿ ಹೋಗುತ್ತಿದೆ. ತಡೆಗೋಡೆ ನೆಲಮಟ್ಟದಿಂದ 2 ಅಡಿ ಕೆಳಗಡೆ ಇರುವುದರಿಂದ ಅಲೆಗಳು ಮೇಲೇರಿ ಬರುತ್ತಿವೆ. 2 ಮೀ. ಎತ್ತರದ ಗೋಡೆ  ನಿರ್ಮಿಸುವ ಚಿಂತನೆ ಇದೆ. ಮೀನುಗಾರಿಕೆ ಸ. ಎಂಜಿನಿ ಯರ್‌ 50 ಲಕ್ಷ ರೂ. ವೆಚ್ಚದ ಯೋಜನೆ ರೂಪಿಸಿದ್ದು, ಕೂಡಲೇ ಕಾರ್ಯಗತಗೊಳಿಸುವಂತೆ ಮೀನುಗಾರರು ಮನವಿ ಮಾಡುತ್ತಿದ್ದಾರೆ. ಆದರೆ ಇಲಾಖಾಧಿಕಾರಿಗಳು ಅನುದಾನ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಮೀನುಗಾರ ಮುಖಂಡರು ತಿಳಿಸಿದ್ದಾರೆ.

ಹಣ ಬಿಡುಗಡೆ ಮಾಡಿ
ಅಪಾಯದಲ್ಲಿರುವ ಮೀನು ಗಾರರಿಗೆ ಪರ್ಯಾಯ ನಿವೇಶನ ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರೂ ಜಾಗ ಮಂಜೂರಾಗಿಲ್ಲ. ಹೊರ ಬಂದರು ಕಾಮಗಾರಿಯನ್ನು ಶೀಘ್ರ ಪೂರ್ಣ ಗೊಳಿಸಬೇಕು. ಪ್ರಸ್ತುತ ಮೀನುಗಾರರು ತಮ್ಮ ಹಣದಿಂದ ಮರಳು ತುಂಬಿದ ಚೀಲಗಳನ್ನಿಟ್ಟು ತಾತ್ಕಾಲಿಕ ರಕ್ಷಣೆ ಮಾಡಿಕೊಂಡಿದ್ದಾರೆ. ಶಾಶ್ವತ ಯೋಜನೆಗೆ ಸರಕಾರ ಕೂಡಲೇ ಹಣ ಬಿಡುಗಡೆ ಮಾಡಲಿ.
– ಮೋಹನ ಖಾರ್ವಿ,ಮೀನುಗಾರರ ಮುಖಂಡ

ಕೃಷ್ಣ ಬಿಜೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.