ಮರವಂತೆ: ಕಡಲ್ಕೊರೆತ ಅಪಾಯದಲ್ಲಿ ತೀರ ಪ್ರದೇಶ
Team Udayavani, Jun 17, 2019, 6:00 AM IST
ಉಪ್ಪುಂದ: ಮರವಂತೆಯ ಹೊರ ಬಂದರು ಪ್ರದೇಶದ ತೀರದಲ್ಲಿ ಕಡಲಬ್ಬರ ತೀವ್ರಗೊಂಡಿದ್ದು ಕಡಲ್ಕೊರೆತ ಉಂಟಾಗಿದೆ.
ಸಮುದ್ರ ತೀರದ ರಸ್ತೆ, ತೆಂಗಿನ ಮರಗಳು ಸೇರಿದಂತೆ ಮನೆಗಳು ಅಪಾಯ ಎದುರಿಸುತ್ತಿವೆ. ಅಲೆಗಳ ಅಬ್ಬರಕ್ಕೆ ನೀರು ಮನೆಯ ಅಂಗಳಕ್ಕೆ ಬರುತ್ತಿದೆೆ.
ಮಳೆಗಾಲದ ಆರಂಭದಲ್ಲಿಯೇ ಕಡಲ್ಕೊರೆತ ಪ್ರಾರಂಭವಾಗಿದೆ. ಬೃಹತ್ ಗಾತ್ರದ ಅಲೆಗಳು ತಡೆಗೋಡೆಯ ಕಲ್ಲುಗಳಿಗೆ ಬಡಿದು ರಸ್ತೆಗೆ ಬಂದು ಅಪ್ಪಳಿಸುತ್ತಿವೆ. ತೀರ ಪ್ರದೇಶದ ರಕ್ಷಣೆಗೆ ಹಾಕಲಾಗಿರುವ ಕಲ್ಲುಗಳು ಸಮುದ್ರ ಸೇರುತ್ತಿವೆ. ಮಳೆ ಹಾಗೂ ಗಾಳಿಯ ಅಬ್ಬರ ಹೆಚ್ಚಾದಂತೆ ಕಡಲಿನ ಅಬ್ಬರವೂ ಹೆಚ್ಚಾಗುತ್ತದೆ.
ಕಾಮಗಾರಿ ಪೂರ್ಣಗೊಳಿಸಿ
ಬೇಸಗೆಯಲ್ಲಿ ಕಡಲ್ಕೊರೆತ ಉಂಟಾಗಿ ಅಪಾಯ ಎದುರಾಗಿತ್ತು. ಇದೀಗ ಮಳೆ ಬಿರುಸುಗೊಂಡಾಗಲೇ ಕಡಲಿನ ಆರ್ಭಟವೂ ಜೋರಾಗಿದೆ. ಇದಕ್ಕೆ ಕಾರಣ ನಿರ್ಮಾಣ ಹಂತದಲ್ಲಿರುವ ಹೊರ ಬಂದರಿನ ಅಪೂರ್ಣ ಕಾಮಗಾರಿಯೇ ಎನ್ನುತ್ತಾರೆ ಸ್ಥಳೀಯರು. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳ್ಳು ವಂತೆ ಕ್ರಮ ಕೈಗೊಳ್ಳ ಬೇಕು. ಈಗ ನಿರ್ಮಿಸಿರುವ ತಡೆಗೋಡೆಯ ಎತ್ತರವನ್ನು ಇನ್ನಷ್ಟು ಹೆಚ್ಚಿಸ ಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’