ಮಾ. 26ರಂದು ಪ್ರತಿಭಟನೆಗೆ ನಿರ್ಧಾರ: ಸೊರಕೆ
ಕಾಪು ತಾಲೂಕು, ಪುರಸಭೆ ವ್ಯಾಪ್ತಿಯ ಅಭಿವೃದ್ಧಿಯಲ್ಲಿ ಹಿನ್ನಡೆ
Team Udayavani, Mar 19, 2020, 5:22 AM IST
ಕಾಪು: ಕಾಪು ತಾಲೂಕು, ಪುರಸಭೆ ಸಹಿತವಾಗಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕಳೆದ ಎರಡೂವರೆ ವರ್ಷಗಳಲ್ಲಿ ಯಾವುದೇ ರೀತಿಯ ಅನುದಾನವನ್ನು ತಾರದೆ, ಅಭಿವೃದ್ಧಿ ಪರ ತೀರ್ಮಾನಗಳನ್ನೂ ಕೈಗೆತ್ತಿಕೊಳ್ಳದೆ ಹೊಸ ಯೋಜನೆಗಳ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಪ್ರಯತ್ನಿಸದೇ ಇರುವುದನ್ನು ಖಂಡಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮಾ.26ರಂದು ಪುರಸಭೆಯ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಕಾಪು ರಾಜೀವ ಭವನದಲ್ಲಿ ಮಾ. 17ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಅಧಿಕಾರಾವಧಿಯಲ್ಲಿ ತಂದ ಅನುದಾನವನ್ನು ಬೇರೆಡೆ ವರ್ಗಾಯಿಸಿ ಅದಕ್ಕೆ ಗುದ್ದಲಿ ಪೂಜೆ ನಡೆಸುವುದು, ಫ್ಲೆಕ್ಸ್ ಹಾಕಿಸುವಂತಹ ಕೆಲಸ ಮಾತ್ರ ಹಾಲಿ ಶಾಸಕರಿಂದ ನಡೆಯುತ್ತಿದೆ. ಅದು ಹೊರತು ಬೇರೇನೂ ನಡೆಯುತ್ತಿಲ್ಲ ಎಂದು ಅವರು ಆರೋಪಿಸಿದರು.
ಬೇಡಿಕೆ ಈಡೇರಿಕೆಗೆ
ಆಗ್ರಹಿಸಿ ಪ್ರತಿಭಟನೆ
ಕಾಪು ಪುರಸಭೆಗೆ ಮಂಜೂರಾದ ಅನುದಾನ ಬೇರೆಡೆ ವರ್ಗಾವಣೆಯಾಗುತ್ತಿದ್ದು, ಈ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ. ನಗರೋತ್ಥಾನ ಕಾಮಗಾರಿಗಳು ಕಳಪೆ ರೀತಿಯಲ್ಲಿ ನಡೆಯುತ್ತಿದ್ದು ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು. ಅದರ ಜತೆಗೆ ಕಾಮಗಾರಿಗಳ ವಿಳಂಬ, ಕಾಮಗಾರಿಯ ಬದಲಾಯಿಸುವಿಕೆ, ಅನುದಾನ ವರ್ಗಾವಣೆ ಸಹಿತವಾಗಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ಮಾ. 26ರಂದು ಪ್ರತಿಭಟನೆ ನಡೆಯಲಿದೆ ಎಂದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ ಚಂದ್ರ ಸುವರ್ಣ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಸಾದಿಕ್, ಪಕ್ಷದ ಮುಖಂಡರಾದ ಡಾ| ದೇವಿಪ್ರಸಾದ್ ಶೆಟ್ಟಿ, ಮನಹರ್ ಇಬ್ರಾಹಿಂ, ಹರೀಶ್ ನಾಯಕ್, ದೀಪಕ್ ಎರ್ಮಾಳ್, ಸುನೀಲ್ ಬಂಗೇರ, ಅಮೀರುದ್ದೀನ್, ಪುರಸಭಾ ಸದಸ್ಯರಾದ ಕೆ. ಎಚ್. ಉಸ್ಮಾನ್, ಅಬ್ದುಲ್ ಹಮೀದ್, ಶಾಬು ಸಾಹೇಬ್, ಮಹಮ್ಮದ್ ಇಮ್ರಾನ್, ಸುರೇಶ್ ದೇವಾಡಿಗ, ಮಾಲಿನಿ ಶೆಟ್ಟಿ, ಸೌಮ್ಯ, ವಿಜಯಲಕ್ಷಿ$¾, ಅಶ್ವಿನಿ, ಸುಲೋಚನಾ ಬಂಗೇರ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ