ದುರ್ಗಮ ಹಾದಿಯಲ್ಲಿ ಸಂಚಾರ ದುಸ್ತರ

ಮಾರ್ಡಿ ಶಾಲೆ- ಗುಡ್ಡೆಗಣಪತಿ ದೇವಸ್ಥಾನ ಸಂಪರ್ಕ ರಸ್ತೆ ; 1.5 ಮಣ್ಣಿನ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟಕರ

Team Udayavani, Aug 28, 2021, 6:09 AM IST

ದುರ್ಗಮ ಹಾದಿಯಲ್ಲಿ ಸಂಚಾರ ದುಸ್ತರ

ಮಳೆಗಾಲದಲ್ಲಿ ಪಡಿತರ ತರಲು, ಪೇಟೆಯಿಂದ ಅಗತ್ಯದ ವಸ್ತುಗಳನ್ನು, ಕೃಷಿ ಸಲಕರಣೆಗಳನ್ನೆಲ್ಲ ತರಲು ಇಲ್ಲಿನ ಜನರಿಗೆ ಬಹಳಷ್ಟು ಸಮಸ್ಯೆ ಯಾಗುತ್ತಿದೆ. ಇನ್ನು ಗ್ಯಾಸ್‌ ಸಿಲಿಂಡರ್‌ಗಳನ್ನೆಲ್ಲ ಬೈಕ್‌ನಲ್ಲಿ ಅಥವಾ ದೂರದಿಂದ ತಲೆ ಮೇಲೆ ಹೊತ್ತು ತರಬೇಕಾದ ಸ್ಥಿತಿ ಇಲ್ಲಿನವರದು.

ನೇರಳಕಟ್ಟೆ: ಈ ಮಾರ್ಗದಲ್ಲಿ ಬೇಸಗೆಯಲ್ಲಿಯೇ ಸಂಚರಿಸುವುದು ಕಷ್ಟ. ಇನ್ನೂ ಮಳೆಗಾಲ ಆರಂಭವಾದ ಮೇಲಂತೂ ಈ ರಸ್ತೆಯಲ್ಲಿ ಹೋಗುವುದು ಸಾಹಸವೇ ಸರಿ. ಇದು ಆಜ್ರಿ ಗ್ರಾ.ಪಂ. ವ್ಯಾಪ್ತಿಯ ಕೊಡ್ಲಾಡಿ ಗ್ರಾಮದ ಮಾರ್ಡಿ ಶಾಲೆ ಬಳಿಯಿಂದ ಗುಡ್ಡೆ ಗಣಪತಿ ದೇವಸ್ಥಾನದ ಕಡೆಗೆ ಸಂಪರ್ಕ ಕಲ್ಪಿಸುವ ದುರ್ಗಮ ಹಾದಿಯ ಬಗೆಗಿನ ಚಿತ್ರಣ.

ಕೊಡ್ಲಾಡಿ ಗ್ರಾಮದ ಮಾರ್ಡಿಯಿಂದ ಮೂಡುಬಗೆ ಕಡೆಗೆ ಸಂಚರಿಸುವ ಮುಖ್ಯ ರಸ್ತೆಯಿಂದ ಮಾರ್ಡಿ ಶಾಲೆ ಬಳಿಯ ಕ್ರಾಸ್‌ನಿಂದ ಗುಡ್ಡೆಗಣಪತಿ ದೇವಸ್ಥಾನದ ಕಡೆಗೆ ಸಂಪರ್ಕಿಸುವ ಮಣ್ಣಿನ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದೆ.

1.5 ಕಿ.ಮೀ. ದುರ್ಗಮ ರಸ್ತೆ
ಮಾರ್ಡಿ ಶಾಲೆಯ ಬಳಿಯಿಂದ ಗುಡ್ಡೆ ಗಣಪತಿಯವರೆಗೆ ಸುಮಾರು 1.5 ಕಿ.ಮೀ. ಉದ್ದದ ರಸ್ತೆ ಇದಾಗಿದ್ದು, ಆರಂಭದಿಂದ ಕೊನೆಯವರೆಗೂ ದುರ್ಗಮವಾಗಿಯೇ ಇದೆ. ಮಳೆಗಾಲದಲ್ಲಿ ನೀರೆಲ್ಲ ರಸ್ತೆಯಲ್ಲಿಯೇ ಹರಿದು ಮಧ್ಯೆ ಅಲ್ಲಲ್ಲಿ ಹೊಂಡ ಸೃಷ್ಟಿಯಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಈ ಪ್ರದೇಶದಲ್ಲಿ 15ಕ್ಕೂ ಹೆಚ್ಚು ಮನೆಗಳಿದ್ದು, ಸುಮಾರು 70ರಿಂದ 80 ಮಂದಿ ನೆಲೆಸಿದ್ದಾರೆ. ಇವರೆಲ್ಲ ಇದೇ ಮಾರ್ಗವನ್ನು ಆಶ್ರಯಿಸಿದ್ದಾರೆ.

ಮಳೆಗಾಲದ ಸಂಕಷ್ಟ
ಈ ಊರಿನವರಿಗೆ ಮಳೆಗಾಲ ಬಂತೆಂದರೆ ಸಾಕು ಸಮಸ್ಯೆಗಳ ಸರಮಾಲೆಯೇ ಶುರುವಾಗುತ್ತದೆ. ಬೇಸಗೆಯಲ್ಲಿ ಹೇಗೋ ಕಷ್ಟಪಟ್ಟು ತಮ್ಮ – ತಮ್ಮ ವಾಹನಗಳಲ್ಲಿ ಸಂಚರಿಸುತ್ತಿದ್ದರೂ, ಮಳೆಗಾಲದಲ್ಲಂತೂ ಈ ರಸ್ತೆ ಯಲ್ಲಿ ನಾಲ್ಕು ಚಕ್ರದ ವಾಹನ ಬಿಡಿ, ಬೈಕ್‌ ಸಹ ಕಷ್ಟಪಟ್ಟು ಸಂಚರಿಸುವ ದುಸ್ಥಿತಿ ಇದೆ.

ಇತರ ಸಮಸ್ಯೆಗಳೇನು?
– ಮಳೆಗಾಲದಲ್ಲಿ ರಸ್ತೆಯ ಸಮಸ್ಯೆಯಾದರೆ, ಈ ಊರಿನವರಿಗೆ ಬೇಸಗೆಯಲ್ಲಿ ಕುಡಿಯುವ ನೀರಿಗೆ ಬರ ಎದುರಾಗುತ್ತದೆ.
– ಹದಗೆಟ್ಟ ರಸ್ತೆಯಿಂದಾಗಿ ಯಾರಿಗಾದರೂ ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯಲು, ಪಡಿತರ, ಇನ್ನಿತರ ಸಾಮಗ್ರಿ ತರಲು ಬಹಳಷ್ಟು ಸಮಸ್ಯೆ ಅನುಭವಿಸುವಂತಾಗಿದೆ.

ಅನೇಕ ಸಲ ಮನವಿ
ಮಾರ್ಡಿ ಶಾಲೆ – ಗುಡ್ಡೆಗಣಪತಿ ದೇವಸ್ಥಾನವನ್ನು ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಬಗ್ಗೆ ಸಾಕಷ್ಟು ಬಾರಿ ಸಂಬಂಧಪಟ್ಟ ಶಾಸಕರು, ಇನ್ನಿತರ ಹಲವಾರು ಜನಪ್ರತಿನಿಧಿಗಳು, ಸ್ಥಳೀಯ ಪಂಚಾಯತ್‌, ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರುತ್ತಾರೆ ಸ್ಥಳೀಯರು.

ಭರವಸೆ ಈಡೇರಿಲ್ಲ
ನಮ್ಮ ಈ ರಸ್ತೆಯ ಅಭಿವೃದ್ಧಿ ಬಗ್ಗೆ ಸಂಬಂಧಪಟ್ಟ ಎಲ್ಲರಿಗೂ ಅನೇಕ ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೆ ಯಾವ ಪ್ರಯೋಜನವೂ ಆಗಿಲ್ಲ. ಮಾಡಿ ಕೊಡುತ್ತೇವೆ ಅನ್ನುತ್ತಾರೆ. ಕಳೆದ 2 ವರ್ಷಗಳಿಂದ ಅನೇಕ ಮನವಿ ಸಲ್ಲಿಸಿದ್ದೇವೆ. ಮಳೆಗಾಲದಲ್ಲಂತೂ ಈ ನಮ್ಮ ಊರಿನವರ ಪಾಡು ಯಾರಿಗೂ ಹೇಳತೀರದಾಗಿದೆ. ಈ ಬಾರಿಯಾದರೂ ಈ ರಸ್ತೆಯ ಅಭಿವೃದ್ಧಿಯಾಗಲಿ.
– ಸಚ್ಚೀಂದ್ರ ಶೆಟ್ಟಿ, ಸ್ಥಳೀಯರು

ಶಾಸಕರಿಂದ ಭರವಸೆ
ಈ ಮಾರ್ಡಿ ಶಾಲೆಯ ಬಳಿಯಿಂದ ಗುಡ್ಡೆಗಣಪತಿ ದೇವಸ್ಥಾನದವರೆಗಿನ 1.5 ಕಿ.ಮೀ. ದೂರದ ರಸ್ತೆ ಅಭಿವೃದ್ಧಿ ಬಗ್ಗೆ ಈಗಾಗಲೇ ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರನ್ನು ಕರೆದುಕೊಂಡು ಬಂದು ಪರಿಶೀಲನೆ ನಡೆಸಲಾಗಿದೆ. ಅವರು ಸಹ ಮುಂದಿನ ಕ್ರಿಯಾ ಯೋಜನೆಯಲ್ಲಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ.
– ಅಶೋಕ್‌ ಕುಲಾಲ್‌, ಅಧ್ಯಕ್ಷರು ಆಜ್ರಿ ಗ್ರಾ.ಪಂ.

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.