ಮದುವೆ ಭರವಸೆ ನೀಡಿ ವಂಚನೆ: 10 ವರ್ಷ ಕಠಿನ ಶಿಕ್ಷೆ
Team Udayavani, Jan 18, 2019, 1:15 AM IST
ಕುಂದಾಪುರ: ಎಂಟು ವರ್ಷಗಳ ಹಿಂದೆ ಯುವತಿಯನ್ನು ನಂಬಿಸಿ ದೈಹಿಕವಾಗಿ ಬಳಸಿಕೊಂಡು ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಂಪಾರು ಗ್ರಾಮದ ಮೂಡುಬಗೆ ನಿವಾಸಿ ವಿN°àಶ್ವರ್ (32)ಗೆ 10 ವರ್ಷ ಕಠಿನ ಶಿಕ್ಷೆ ಹಾಗೂ 20 ಸಾ.ರೂ.ದಂಡ ವಿಧಿಸಿ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ ಖಂಡೇರಿ ಗುರುವಾರ ತೀರ್ಪು ನೀಡಿದ್ದಾರೆ.
ಜ.4ರಂದು ಆತ ಅಪರಾಧಿ ಎಂದು ಸಾಬೀತಾಗಿತ್ತು. ಜ. 8ರಂದು ನಡೆದ ವಿಚಾರಣೆಯಲ್ಲಿ ಶಿಕ್ಷೆಯ ಪ್ರಮಾಣವನ್ನು ಜ. 17ರಂದು ಪ್ರಕಟಿಸಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದರು.
12 ಮಂದಿಯ ವಿಚಾರಣೆ
ಕುಂದಾಪುರದ ಆಗಿನ ವೃತ್ತ ನಿರೀಕ್ಷಕ ದಿವಾಕರ ಪಿ.ಎಂ. ಅವರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಒಟ್ಟು 20 ಸಾಕ್ಷಿಗಳಿದ್ದು, ಸಂತ್ರಸ್ತ ಯುವತಿ ಸಹಿತ 12 ಮಂದಿಯ ವಿಚಾರಣೆ ನಡೆಸಲಾಗಿದೆ. ಪ್ರಾಸಿಕ್ಯೂಶನ್ ಪರವಾಗಿ ಜಿಲ್ಲಾ ಸರಕಾರಿ ಅಭಿಯೋಜಕ ಬಿ. ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದಾರೆ.
ಶಿಕ್ಷೆಯ ಪ್ರಮಾಣ
ವಂಚನೆ(ಸೆಕ್ಷನ್ 417)ಗೆ 1 ವರ್ಷ ಶಿಕ್ಷೆ ಹಾಗೂ 5 ಸಾ.ರೂ. ದಂಡ,ಅತ್ಯಾಚಾರ (ಸೆಕ್ಷನ್ 376)ಕ್ಕೆ 10 ವರ್ಷ ಕಠಿನ ಸಜೆ ಹಾಗೂ 20 ಸಾ. ರೂ.ದಂಡ ವಿಧಿಸಲಾಗಿದೆ. ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸಬೇಕಾಗಿರು ವುದರಿಂದ ಒಟ್ಟು 10 ವರ್ಷ ಜೈಲು ಹಾಗೂ 25 ಸಾ.ರೂ. ದಂಡ ಪಾವತಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ