ಅನಾಥ ಯುವತಿಗೆ ವಿವಾಹ ಯೋಗ : ಹೆತ್ತವರ ಸ್ಥಾನದಲ್ಲಿ ನಿಂತ ಸರಕಾರ

ಉಡುಪಿಯಲ್ಲೊಂದು ಮಾದರಿ ಪಾಣಿಗ್ರಹಣ

Team Udayavani, Oct 18, 2022, 9:27 AM IST

ಅನಾಥ ಯುವತಿಗೆ ವಿವಾಹ ಯೋಗ : ಹೆತ್ತವರ ಸ್ಥಾನದಲ್ಲಿ ಸರಕಾರ

ಉಡುಪಿ : ಜಿಲ್ಲೆಯಲ್ಲೊಂದು ಮಾದರಿ ವಿವಾಹ ಕಾರ್ಯಕ್ರಮಕ್ಕೆ ತಯಾರಿ ನಡೆದಿದೆ. ಇಲ್ಲಿ ಸರಕಾರವೇ ಕುಟುಂಬದ ಹಿರಿಯರ ಸ್ಥಾನದಲ್ಲಿ ನಿಲ್ಲುವ ಮೂಲಕ ಮಹಿಳಾ ನಿಲಯದ ಹೆಣ್ಣೊಬ್ಬಳ ಕೌಟುಂಬಿಕ ಬದುಕಿನ ಭವಿಷ್ಯ ರೂಪಿಸಲು ಮುಂದಾಗಿರುವುದು ವಿಶೇಷ.

ಮನೆಯವರಿಂದ ದೂರವಾಗಿ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ನಿಟ್ಟೂರು ಮಹಿಳಾ ನಿಲಯದಲ್ಲಿ ಆಶ್ರಯ ಪಡೆದಿರುವ 25ರ ಹರೆಯದ ಯುವತಿಗೆ ವಿವಾಹ ಯೋಗ ಕೂಡಿಬಂದಿದೆ. ಹೊರ ಜಿಲ್ಲೆಯ ಕೃಷಿ ಕುಟುಂಬದ ಹಿನ್ನೆಲೆಯ 29ರ ಹರೆಯದ ಯುವಕ ವರ.

ಯುವಕನೇ ಮದುವೆಯ ಪ್ರಸ್ತಾವ ಇಟ್ಟಿದ್ದು, ಆತನ ಜಿಲ್ಲೆಯ ಅಧಿಕಾರಿಗಳ ಮೂಲಕ ಯುವಕನ ಗುಣ-ನಡತೆ, ಕುಟುಂಬಿಕರ ಬಗ್ಗೆ ಮಾಹಿತಿ ಕಲೆಹಾಕಲಾಗಿದೆ. ಈ ವರದಿಗಳನ್ನು ರಾಜ್ಯ ಮಹಿಳಾ ನಿಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರೂ ಆಗಿರುವ ಉಡುಪಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಪರಿಶೀಲನೆ ನಡೆಸಿ ಅನುಮೋದನೆ ನೀಡಿದ್ದು, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ವಿವಾಹಕ್ಕೆ ಒಪ್ಪಿಗೆ ನೀಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ವಿವಾಹ ಖರ್ಚಿಗೆ 5 ಸಾವಿರ ರೂ. ನೀಡಲಾಗುತ್ತದೆ. 15 ಸಾವಿರ ರೂ.ಗಳನ್ನು ಯುವತಿಯ ಹೆಸರಿನಲ್ಲಿ ಸರಕಾರ ಠೇವಣಿ ಇಡುತ್ತದೆ. ದಾನಿಗಳೂ ನೆರವಿಗೆ ಮುಂದೆ ಬಂದಿದ್ದು, ಜ್ಯೇಷ್ಠ ಡೆವಲಪರ್ಸ್‌ ಸಂಸ್ಥೆಯು ಯುವತಿಗೆ ಕರಿಮಣಿ ಸರ, ಮದುವೆಯ ಸೀರೆ ನೀಡಲಿದೆ. ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್‌ ಯುವತಿಗೆ ಜವುಳಿಯನ್ನು ನೀಡಲಿದ್ದಾರೆ. ಅಂಬಲಪಾಡಿ ದೇವಸ್ಥಾನದಿಂದ ಮಧ್ಯಾಹ್ನದೂಟದ ವ್ಯವಸ್ಥೆಯಾಗಿದೆ. ಮಹಿಳಾ ನಿಲಯದ ಎಲ್ಲ ನಿಲಯಾರ್ಥಿಗಳು, ಸಿಬಂದಿ, ಅಧಿಕಾರಿ ವರ್ಗ ಪ್ರಸ್ತುತ ಮದುವೆ ತಯಾರಿಯಲ್ಲಿ ಸಂಭ್ರಮದಿಂದ ತೊಡಗಿಸಿಕೊಂಡಿದ್ದಾರೆ.

ಆಮಂತ್ರಣ ಪತ್ರಿಕೆಯ ವಿಶೇಷ
ಕರ್ನಾಟಕದ ಸರಕಾರದ ಲಾಂಛನ, ಆದಿ ಪೂಜಿತ ಗಣಪತಿ ದೇವರ ಚಿತ್ರದೊಂದಿಗೆ ಕರ್ನಾಟಕ ಸರಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ನಿಲಯ, ಉಡುಪಿ ಆಯೋಜಕರು. ವಧು-ವರನ ಹೆಸರು ಮುದ್ರಿಸಿ ನಿಟ್ಟೂರು ರಾಜ್ಯ ಮಹಿಳಾ ನಿಲಯದಲ್ಲಿ ವಿವಾಹ ಸಮಾರಂಭವು ಅ. 28ರಂದು ಶುಭ ಮುಹೂರ್ತದಲ್ಲಿ ನೆರವೇರಲಿದೆ ಎಂದು ಬರೆದಿದೆ. ಜಿಲ್ಲಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ರಾಜ್ಯ ಮಹಿಳಾ ನಿಲಯ ಅಧೀಕ್ಷಕರು ಶುಭಾಕಾಂಕ್ಷಿಗಳಾಗಿದ್ದಾರೆ. ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರನ್ನು ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಮಂತ್ರಣ ಪತ್ರಿಕೆ ಕಳುಹಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರಾಜ್ಯ ಮಹಿಳಾ ನಿಲಯದ ವತಿಯಿಂದ ಪ್ರಸ್ತಾವ ಪರಿಶೀಲಿಸಿ ವಿವಾಹ ನೆರವೇರಿಸುವ ಬಗ್ಗೆ ವರದಿ ನೀಡಿದ್ದರು. ಅದರಂತೆ ಎಲ್ಲ ಮಾರ್ಗಸೂಚಿಗಳನ್ನು ಅನುಸರಿಸಿ ಸಮಿತಿ ಒಪ್ಪಿಗೆ ನೀಡಲಾಗಿದೆ.
– ಕೂರ್ಮಾ ರಾವ್‌ ಎಂ. ಉಡುಪಿ ಜಿಲ್ಲಾಧಿಕಾರಿ

ಮದುವೆ ಪ್ರಸ್ತಾವ ಬಂದ ಅನಂತರ 6 ತಿಂಗಳು ಕಾಲ ಎಲ್ಲ ಬಗೆಯ ಪರಿಶೀಲನೆ, ಪ್ರಕ್ರಿಯೆ ನಡೆದಿದೆ. ನಿಟ್ಟೂರು ಮಹಿಳಾ ನಿಲಯದಲ್ಲಿ ಸರಳವಾಗಿ ಶಾಸ್ತ್ರೋಕ್ತವಾಗಿ ವಿವಾಹ ಸಮಾರಂಭ ಜರಗಲಿದೆ.
-ವೀಣಾ ವಿವೇಕಾನಂದ, ಉಪ ನಿರ್ದೇಶಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ

ಇದನ್ನೂ ಓದಿ : ಮಲ್ಪೆ : ಕೋಸ್ಟ್‌ಗಾರ್ಡ್‌ ಬೋಟ್‌ ಚಲಿಸಿ 8 ಲಕ್ಷ ರೂ. ಬೆಲೆಯ ಬಲೆ ನಾಶ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.