ಮಾತೃಪೂರ್ಣ ಯೋಜನೆ : ಮುಗಿಯದ ಆಹಾರ ಸಾಮಗ್ರಿ ವಿತರಣೆ ಗೊಂದಲ


Team Udayavani, Oct 23, 2022, 11:24 AM IST

ಮಾತೃಪೂರ್ಣ ಯೋಜನೆ : ಮುಗಿಯದ ಆಹಾರ ಸಾಮಗ್ರಿ ವಿತರಣೆ ಗೊಂದಲ

ಉಡುಪಿ : ಸರಕಾರದ ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿಯರಿಗೆ ವಿತರಿಸಲಾಗುವ ಪೌಷ್ಟಿಕ ಆಹಾರ ಸಾಮಗ್ರಿ ವಿಚಾರವಾಗಿ ಕೊರೊನಾ ಬಳಿಕ ಹುಟ್ಟಿಕೊಂಡಿರುವ ಗೊಂದಲ ಈಗಲೂ ಮುಂದುವರಿದಿದೆ.

ಕೋವಿಡ್‌ ಸಂದರ್ಭ ಮಾತೃಪೂರ್ಣ ಯೋಜನೆಯಡಿ ನೀಡುವ ಆಹಾರ ಸಾಮಗ್ರಿಯನ್ನು ಮನೆಗೆ ಕೊಂಡೊಯ್ಯಲು ಅವಕಾಶ ನೀಡಲಾಗಿತ್ತು. ಅನಂತರ ಆದೇಶವನ್ನು ಹಿಂಪಡೆದು ಅಂಗನವಾಡಿಗೆ ಬಂದು ಮಧ್ಯಾಹ್ನದ ಊಟ ಮಾಡಿ ಹೋಗಬೇಕು ಎಂಬ ಸೂಚನೆ ನೀಡಲಾಗಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಉಡುಪಿ, ದ.ಕ. ಹಾಗೂ ಕೊಡಗು ಸಹಿತ 6 ಜಿಲ್ಲೆಗಳಿಗೆ ಮಳೆಗಾಲ ಮುಗಿಯುವ ವರೆಗೂ ಆಹಾರ ಸಾಮಗ್ರಿಯನ್ನು ಮನೆಗೆ ಕೊಂಡೊಯ್ಯಲು ಅವಕಾಶ ನೀಡಲಾಗಿದೆ. ಮಳೆಗಾಲ ಮುಗಿಯುವ ವರೆಗೆ ಎಂದು ಸೂಚನೆ ನೀಡಲಾಗಿದೆಯೇ ವಿನಾ ಯಾವ ತಿಂಗಳ ವರೆಗೆ ಎಂದು ಸ್ಪಷ್ಟವಾಗಿ ತಿಳಿಸಿಲ್ಲ. ಹೀಗಾಗಿ ಅಂಗನವಾಡಿ ಮೇಲ್ವಿಚಾರಕಿಯರು ಹಾಗೂ ಇಲಾಖೆಯ ಅಧಿಕಾರಿಗಳಲ್ಲಿ ಗೊಂದಲ ಸೃಷ್ಟಿಯಾಗಿದೆ.
ಕರಾವಳಿ ಜಿಲ್ಲೆಯಲ್ಲಿ ಮಾತೃಪೂರ್ಣ ಯೋಜನೆಯಡಿ ನೀಡುವ ಆಹಾರ ಸಾಮಗ್ರಿಯನ್ನು ಮಳೆ ನಿಲ್ಲುವ ವರೆಗೂ ಮನೆಗೆ ಕೊಂಡೊಯ್ಯಲು ನೀಡಿರುವ ಅವಕಾಶವನ್ನು ಇನ್ನಷ್ಟು ತಿಂಗಳು ವಿಸ್ತರಣೆ ಮಾಡಬೇಕು ಎಂಬ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ.

ತಿಂಗಳಿಗೆ ಎರಡು ಅಥವಾ ಮೂರು ಬಾರಿ
ಈ ಮೊದಲು ಪ್ರತೀ ತಿಂಗಳ ಆರಂಭದಲ್ಲಿ ಅಥವಾ ಅಂಗನವಾಡಿಗೆ ಆಹಾರ ಸಾಮಗ್ರಿ ಪೂರೈಕೆಯಾದ ದಿನದ ಅನಂತರದಲ್ಲಿ ಹಂಚಿಕೆ ಮಾಡಲಾಗುತ್ತಿತ್ತು. ಅಂದರೆ ತಿಂಗಳಿಗೆ ಒಂದು ಬಾರಿ ಹಂಚಿಕೆ ಪ್ರಕ್ರಿಯೆ ನಡೆಯುತ್ತಿತ್ತು. ಈಗ ಅದೇ ಆಹಾರ ಸಾಮಗ್ರಿಯನ್ನು ವಾರಕ್ಕೆ ಒಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ನೀಡಬೇಕು ಎಂಬ ಸೂಚನೆ ಇಲಾಖೆಯಿಂದ ಬಂದಿದೆ. ಹೀಗಾಗಿ ತಿಂಗಳಿಗೆ ಕೊಡಲಾಗುವ ಆಹಾರ ಸಾಮಗ್ರಿಯನ್ನು ವಿಭಜಿಸಿ ವಾರಕ್ಕೊಮ್ಮೆ ನೀಡುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆಹಾರ ಸಾಮಗ್ರಿ ವಿತರಣೆ
ಗರ್ಭಿಣಿಯರಿಗೆ ಗರ್ಭ ಧರಿಸಿರುವುದು ಖಚಿತಪಟ್ಟ ದಿನದಿಂದ ಹೆರಿಗೆಯಾಗುವವರೆಗೆ ಮತ್ತು ಬಾಣಂತಿಯರಿಗೆ ಹೆರಿಗೆಯ ದಿನದಿಂದ ಮುಂದಿನ ಆರು ತಿಂಗಳ ವರೆಗೆ ಮಾತೃಪೂರ್ಣ ಯೋಜನೆಯಡಿ ಆಹಾರ ಸಾಮಗ್ರಿ ನೀಡಲಾಗುತ್ತದೆ. ಅಕ್ಕಿ, ಹಾಲಿನ ಪುಡಿ, ಮೊಟ್ಟೆ (ಮೊಟ್ಟೆ ತಿನ್ನದವರಿಗೆ ಹೆಸರು ಬೇಳೆ) ತೊಗರಿ ಬೇಳೆ, ನೆಲಕಡಲೆ ಚಿಕ್ಕಿ, ಖಾರದ ಪುಡಿ ಇತ್ಯಾದಿ ನೀಡಲಾಗುತ್ತದೆ. ಕೆಲವು ಅಂಗನವಾಡಿಗಳಲ್ಲಿ ಆಹಾರ ಸಮಾಗ್ರಿ ವಿತರಣೆ ಸರಿಯಾಗಿ ನಡೆಯುತ್ತಿಲ್ಲ ಎಂಬ ಆರೋಪವೂ ಇದೆ.

ಮೊಟ್ಟೆ ಪೂರೈಕೆಯೇ ಕಗ್ಗಂಟು
ತಿಂಗಳಿಗೆ ಕನಿಷ್ಠ 25 ಮೊಟ್ಟೆ ನೀಡಬೇಕು. ಆದರೆ ಮೊಟ್ಟೆಯ ದರ ಸದಾ ಏರಿಳಿತ ಆಗುತ್ತಿರುವುದರಿಂದ 18ರಿಂದ 20 ಮೊಟ್ಟೆಗಳನ್ನು ನೀಡಲಾಗುತ್ತಿದೆ. ಮೊಟ್ಟೆ ಪೂರೈಕೆಗೆ ಇ- ಟೆಂಡರ್‌ ಕರೆಯಲು ಸರಕಾರ ನಿರ್ದೇಶನ ನೀಡಿದೆ. ಇ-ಟೆಂಡರ್‌ ಕೂಡ ಕರೆಯಲಾಗಿದೆ. ಆದರೆ ಸರಕಾರ ನಿಗದಿಪಡಿಸಿರುವ ದರಕ್ಕೆ ಮೊಟ್ಟೆ ಪೂರೈಕೆ ಮಾಡಲು ಯಾರೂ ಮುಂದೆ ಬರುತ್ತಿಲ್ಲ. ಹೀಗಾಗಿ ಅಂಗನವಾಡಿ ಮೇಲ್ವಿಚಾರಕಿಯೇ ಸದ್ಯ ಸ್ಥಳೀಯ ಅಂಗಡಿ ಅಥವಾ ಸ್ಥಳೀಯ ಕೋಳಿ ಫಾರಂಗಳಿಂದ ಮೊಟ್ಟೆ ಖರೀದಿ ಮಾಡುತ್ತಿದ್ದಾರೆ. ಮೊಟ್ಟೆ ಪೂರೈಕೆಯೇ ಸವಾಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.