ಗರಿಷ್ಠ ಪ್ರದೇಶ ತಲುಪಿದ ನೀರು: ದೂರಿನ ಪ್ರಮಾಣವೂ ಇಳಿಕೆ


Team Udayavani, May 18, 2019, 6:00 AM IST

1705UDSB1

ಶ್ರೀಕೃಷ್ಣ ಮಠದ ಆನೆ ಸುಭದ್ರೆಗೆ ಸ್ನಾನ ಮಾಡಿಸಲಾಯಿತು.

ಉಡುಪಿ: ಉಡುಪಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯ ತೀವ್ರತೆ ಕಡಿಮೆಯಾಗುತ್ತಿದೆ. ಬಜೆ ಡ್ಯಾಂ ಬಳಿ ಡ್ರಜ್ಜಿಂಗ್‌ ಹಾಗೂ ನದಿಯಲ್ಲಿನ ಕಲ್ಲು, ಹೂಳಿನ ತಡೆ ತೆರವಿನಿಂದಾಗಿ ನೀರಿನ ಹರಿವು ಮತ್ತು ಸಂಗ್ರಹ ಹೆಚ್ಚಾಗಿದ್ದು ನಗರದ ಬೇಡಿಕೆಯನ್ನು ಒಂದು ಹಂತದವರೆಗೆ ಪೂರೈಸಲು ಸಾಧ್ಯವಾಗಿದೆ.

ಒಟ್ಟು 6 ವಿಭಾಗಗಳನ್ನಾಗಿ ನಗರವನ್ನು ವಿಂಗಡಿಸಿ ಒಂದೊಂದು ನಗರಕ್ಕೆ ಒಂದೊಂದು ದಿನ ನೀರು ಪೂರೈಸಲಾಗುತ್ತಿದೆ. ಕೆಲವು ಪ್ರದೇಶಗಳಿಗೆ ಅರ್ಧ ದಿನಕ್ಕೂ ಅಧಿಕ ಸಮಯ ನೀರು ಪೂರೈಕೆಯಾಗುತ್ತಿದೆ. ಇದರಿಂದಾಗಿ ನೀರು ಸಂಗ್ರಹಿಸಡಲು ಅನುಕೂಲವಾಗಿದೆ. ಎತ್ತರದ ಪ್ರದೇಶಗಳಿರುವ ವಿಭಾಗಗಳಲ್ಲಿ 8ರಿಂದ 12 ಗಂಟೆಯವರೆಗೂ ನೀರು ಪೂರೈಸಲಾಗುತ್ತಿದೆ.

19 ದೂರುಗಳು
ನೀರು ಸಮಸ್ಯೆ ಉಲ್ಬಣ ಹಂತ ತಲುಪಿದ್ದಾಗ ನಗರಸಭೆಗೆ ದಿನವೊಂದಕ್ಕೆ 80ಕ್ಕೂ ಅಧಿಕ ದೂರು ಕರೆಗಳು ಬರುತ್ತಿದ್ದವು. ಈಗ ನೀರಿಗಾಗಿ ಬೇಡಿಕೆಯ ಕರೆಗಳ ಸಂಖ್ಯೆ ಕೂಡ ಗಣನೀಯವಾಗಿ ಕಡಿಮೆಯಾಗಿದೆ. ಗುರುವಾರ 19 ಕರೆಗಳು, ಶುಕ್ರವಾರ ಅದಕ್ಕಿಂತಲೂ ಕಡಿಮೆ ಕರೆಗಳು ಬಂದಿವೆ ಎಂದು ನಗರಸಭೆ ಮೂಲಗಳು ತಿಳಿಸಿವೆ. ಟ್ಯಾಂಕರ್‌ ನೀರಿನ ಬೇಡಿಕೆ ಇಳಿಮುಖವಾದ ಹಿನ್ನೆಲೆಯಲ್ಲಿ ನಗರಸಭೆಯು ಟ್ಯಾಂಕರ್‌ಗಳ ಸಂಖ್ಯೆಯನ್ನು ಕೂಡ 8ರಿಂದ 4ಕ್ಕೆ ಇಳಿಸಿದೆ.

ನೀರು ತುಂಬಿಸುವ ಸಮಸ್ಯೆ
“6 ದಿನಕ್ಕೊಮ್ಮೆ ನೀರು ಬರುತ್ತದೆ. ಸಾಕಷ್ಟು ಎಂಬಷ್ಟಿದೆ. ಆದರೆ ತುಂಬಿಸಿಡುವುದು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ. ಹಾಗಾಗಿ 6 ದಿನಕ್ಕೊಮ್ಮೆ ಅರ್ಧ ದಿನ ಅಥವಾ 12 ಗಂಟೆಗಳ ಕಾಲ ನೀರು ಪೂರೈಸುವ ಬದಲು ದಿನವೊಂದಕ್ಕೆ 4-5 ತಾಸು ನಿಗದಿಗೊಳಿಸಿ ಎರಡರಿಂದ ಮೂರು ವಿಭಾಗಗಳಿಗೆ ಪೂರೈಸಬೇಕು. ಆಗ 2-3 ದಿನಕ್ಕೊಮ್ಮೆ ನೀರು ಪೂರೈಸುವುದು ಕೂಡ ಸಾಧ್ಯವಾಗಬಹುದು. 6 ದಿನಕ್ಕೆ ಬೇಕಾದಷ್ಟು ನೀರು ಸಂಗ್ರಹಿಸಿಡುವ ಸಮಸ್ಯೆಯೂ ತಪ್ಪುತ್ತದೆ ಎಂಬ ಅಭಿಪ್ರಾಯವನ್ನು ಕೆಲವು ಪ್ರದೇಶದ ನಿವಾಸಿಗಳು ಮುಂದಿಟ್ಟಿದ್ದಾರೆ.

133 ಗ್ರಾಮಗಳಿಗೆ ಟ್ಯಾಂಕರ್‌
ಜಿಲ್ಲೆಯ ಒಟ್ಟು 89 ಗ್ರಾಮ ಪಂಚಾಯತ್‌ಗಳ 133 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಸಲಾಗಿದ್ದು ಸಮರ್ಪಕವಾಗಿ ಮಾನಿಟರಿಂಗ್‌ ಮಾಡಲಾಗುತ್ತಿದೆ. ನೋಡೆಲ್‌ ಅಧಿಕಾರಿಗಳನ್ನು ಕೂಡ ಈಗಾಗಲೇ ನಿಯೋಜಿಸ ಲಾಗಿದೆ ಎಂದು ಜಿ.ಪಂ. ಅಧಿಕಾರಿಗಳು ತಿಳಿಸಿದ್ದಾರೆ.

ಸುಭದ್ರೆಗೆ 2,000 ಲೀ
ಉಡುಪಿ ಜಿಲ್ಲಾ ನಾಗರಿಕ ಸಮಿತಿ ಮತ್ತು ಪಂಚರತ್ನ ಸೇವಾ ಟ್ರಸ್ಟ್‌ ನಗರದಲ್ಲಿ ಒಂದು ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಸುತ್ತಿದೆ. ಇದೀಗ ಶ್ರೀಕೃಷ್ಣ ಮಠದ ಆನೆ ಸುಭದ್ರೆಯ ಸ್ನಾನಕ್ಕೂ ನೀರಿನ ಕೊರತೆ ಉಂಟಾಗಿದ್ದು ಸಮಿತಿಗೆ ಬೇಡಿಕೆ ಸಲ್ಲಿಸಲಾಗಿದೆ. ಅದರಂತೆ ಶುಕ್ರವಾರ ಸಮಿತಿ ಪದಾಧಿಕಾರಿಗಳು 2,000ದಷ್ಟು ಲೀಟರ್‌ ನೀರಿನಿಂದ ಆನೆಗೆ ಸ್ನಾನ ಮಾಡಿಸಿದರು. ಮುಂದೆಯೂ ಆನೆಗೆ ನೀರು ಬೇಕಾದರೆ, ಒಂದು ವೇಳೆ ಜನರಿಂದ ಹೆಚ್ಚಿನ ಬೇಡಿಕೆ ಬಾರದೆ ಇದ್ದರೆ ನೀರು ಒದಗಿಸಲು ಸಿದ್ಧ ಇರುವುದಾಗಿ ನಾಗರಿಕ ಸಮಿತಿ ತಿಳಿಸಿದೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.