“ಎಕರೆಗೆ ಗರಿಷ್ಠ 10 ಟನ್‌ ಇಳುವರಿಯಿಂದ ಆದಾಯ’

ಶಿರ್ಲಾಲು: ಅರ್ಕ ಮಂಗಳ ಮೀಟರ್‌ ಅಲಸಂದೆ ತಳಿಯ ಕ್ಷೇತ್ರೋತ್ಸವ

Team Udayavani, Feb 2, 2020, 5:18 AM IST

0102AJKE01

ಅಜೆಕಾರು: ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಇದರ ವತಿಯಿಂದ ಭೂ ಸಮೃದ್ಧಿ ಯೋಜನೆಯಡಿ ಶಿರ್ಲಾಲು ಗ್ರಾಮದಲ್ಲಿ ಅರ್ಕ ಮಂಗಳ ಮೀಟರ್‌ ಅಲಸಂದೆ ತಳಿಯ ಕ್ಷೇತ್ರೋತ್ಸವ ಕಾರ್ಯಕ್ರಮ ನಡೆಯಿತು.

ಐಐಎಚ್‌ಆರ್‌ ಬೆಂಗಳೂರು ಇದರ ಮುಖ್ಯಸ್ಥ ಡಾ| ಪಿ.ಸಿ. ತ್ರಿಪಾಠಿ ಉದ್ಘಾಟನೆ ನೆರವೇರಿಸಿ ಮಾತನಾಡಿ, ಅರ್ಕಮಂಗಳ ಮೀಟರ್‌ ಅಲಸಂದೆ ತಳಿ ಎಲ್ಲ ವಾತಾವರಣಕ್ಕೂ ಹೊಂದಿಕೊಂಡು ಬೆಳೆಯುವ ತಳಿಯಾಗಿದ್ದು ಎಕರೆಗೆ ಗರಿಷ್ಠ 10 ಟನ್‌ ಇಳುವರಿ ನೀಡುವ ತಳಿಯಾಗಿದೆ ಎಂದರು.

ಸ್ಥಳೀಯ ಅಲಸಂಡೆ ತಳಿಯಾಗಿರುವ ಇದಕ್ಕೆ ರೋಗ ಮತ್ತು ಕೀಟದ ಬಾಧೆ ಕಡಿಮೆ ಇದ್ದು ರೈತರಿಗೆ ಹೆಚ್ಚಿನ ಆದಾಯವನ್ನು ತಂದುಕೊಡುವ ನಿಟ್ಟಿನಲ್ಲಿ ಉತ್ತಮ ಬೆಳೆಯಾಗಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಐಐಎಚ್‌ಆರ್‌ ಬೆಂಗಳೂರು ಇದರ ಪ್ರಧಾನ ವಿಜ್ಞಾನಿಗಳಾದ ಡಾ| ಆರ್‌. ಸೆಂತಿಲ್‌ ಕುಮಾರ್‌ ಭಾಗವಹಿಸಿ ಮಾತನಾಡಿ, ಭಾರತೀಯ ತೋಟಗಾರಿಕಾ ಸಂಶೋಧನ ಸಂಸ್ಥೆ ಬೆಂಗಳೂರು ಇದರ ಕಾರ್ಯಚಟುವಟಿಕೆಗಳು ಮತ್ತು ಈ ಸಂಸ್ಥೆಯಿಂದ ಬಿಡುಗಡೆಯಾದ 150 ತಂತ್ರಜ್ಞಾನಗಳ ಸಮಗ್ರ ಮಾಹಿತಿ ನೀಡಿದರು.

ಅತಿಥಿ, ಐಸಿಆರ್‌ಐಎಸ್‌ಎಟಿ ಹೈದರಾ ಬಾದ್‌ನ ಭೂಸಮೃದ್ಧಿ ಯೋಜನೆ ಪ್ರಧಾನ ವಿಜ್ಞಾನಿಗಳಾದ ಡಾ| ಕೆ.ಎಚ್‌. ಅನಂತ ಅವರು ಮಾತನಾಡಿ, ಭೂಸಮೃದ್ಧಿ ಯೋಜನೆ ಅಡಿ ಹಲವಾರು ಕಾರ್ಯಕ್ರಮವನ್ನು ಹೈದರಾಬಾದ್‌ ಕೇಂದ್ರದಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನಗೊಂಡಿದ್ದು ರೈತರಿಗೆ ಹೊಸ ತಂತ್ರಜ್ಞಾನಗಳ ಪರಿಚಯ ಹಾಗೂ ಅದರಿಂದ ಆದಾಯವನ್ನು ಹೆಚ್ಚಿಸಿಕೊಳ್ಳುವುದರಲ್ಲಿ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಮತ್ತು ಐಐಎಚ್‌ಆರ್‌ ಸಂಸ್ಥೆಗಳು ಕೈ ಜೋಡಿಸಿವೆ ಎಂದರು.

ಕೆ.ವಿ.ಕೆ. ಬ್ರಹ್ಮಾವರದ ಮುಖ್ಯಸ್ಥ ಡಾ| ಧನಂಜಯ ಬಿ. ಮಾತನಾಡಿ, ಶಿರ್ಲಾಲು ಗ್ರಾಮ ಕೆ.ವಿ.ಕೆ. ಬ್ರಹ್ಮಾವರದ ದತ್ತು ಗ್ರಾಮವಾಗಿದ್ದು, ಇದುವರೆಗೆ ಹಲವಾರು ಕೃಷಿ ಸಂಬಂಧಿತ ಯೋಜನೆಗಳನ್ನು ಗ್ರಾಮದಲ್ಲಿ ಪರಿ ಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದೆ. ಗ್ರಾಮದ ರೈತರು ಧನಾತ್ಮಕ ಪ್ರತಿಕ್ರಿಯೆ ತೋರಿಸಿದ್ದು ಕಾರ್ಯದ ಅನುಷ್ಠಾನಕ್ಕೆ ಇದೊಂದು ಉತ್ತಮ ವಾತಾ ವರಣ ನಿರ್ಮಾಣ ಮಾಡಿದೆ ಎಂದರು. ಕೆ.ವಿ.ಕೆ., ಬ್ರಹ್ಮಾವರದ ತೋಟಗಾರಿಕೆ ವಿಜ್ಞಾನಿ ಚೈತನ್ಯ ಎಚ್‌.ಎಸ್‌. ಪ್ರಸ್ತಾವಿಸಿ, ಸ್ವಾಗತಿಸಿದರು. ಮಣ್ಣು ವಿಜ್ಞಾನಿ ಡಾ| ಜಯ ಪ್ರಕಾಶ್‌ ಆರ್‌. ನಿರೂಪಿಸಿ, ವಂದಿಸಿದರು.

ಅನುಕೂಲ
ಪ್ರಗತಿಪರ ಕೃಷಿಕ ಗುಣಪಾಲ ಕಡಂಬ ಅಧ್ಯಕ್ಷತೆ ವಹಿಸಿ, ನೂತನ ತಂತ್ರಜ್ಞಾನಗಳು ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರದ ವತಿಯಿಂದ ಶಿರ್ಲಾಲು ಗ್ರಾಮದ ರೈತರಿಗೆ ಪರಿಣಾಮಕಾರಿಯಾಗಿ ತಲುಪುತ್ತಿದ್ದು ಗ್ರಾಮದ ರೈತರ ಆದಾಯವನ್ನು ಹೆಚ್ಚಿಸುವಲ್ಲಿ ಈ ಕಾರ್ಯಕ್ರಮ ಅನುಕೂಲವಾಗಿದೆ ಎಂದರು.

ಅನುಭವ
ಅರ್ಕಮಂಗಳ ಮೀಟರ್‌ ಅಲಸಂದೆ ತಳಿಯನ್ನು ಕೃಷಿ ವಿಜ್ಞಾನ ಕೇಂದ್ರದ ಬ್ರಹ್ಮಾವರ ಮಾರ್ಗದರ್ಶನದಲ್ಲಿ ಬೆಳೆದು ಉತ್ತಮ ಆದಾಯವನ್ನು ಗಳಿಸಿದ ದಯಾನಂದ ನಾಯಕ್‌, ಧರಣೇಂದ್ರ ಜೈನ್‌, ಸತೀಶ್‌ ಮುದ್ಯ ಕೃಷಿ ಅನುಭವವನ್ನು ರೈತರೊಂದಿಗೆ ಹಂಚಿಕೊಂಡರು.

ಟಾಪ್ ನ್ಯೂಸ್

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.