ವೈದ್ಯಕೀಯ ಚಿಕಿತ್ಸೆಗೆ ಕೊಲ್ಲೂರು ದೇಗುಲದಿಂದ ರೂ. 1 ಲಕ್ಷ ಹಸ್ತಾಂತರ
Team Udayavani, Aug 2, 2017, 6:30 AM IST
ಕೊಲ್ಲೂರು: 2 ವರ್ಷಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೂರ್ಛಾವಸ್ಥೆಯಲ್ಲಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಆಶೇಷ ಕಾಲ್ಕೋಡು ಅವರ ವೈದ್ಯಕೀಯ ಚಿಕಿತ್ಸೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವತಿಯಿಂದ ರೂ. 1 ಲಕ್ಷದ ಚೆಕ್ನ್ನು ಹಸ್ತಾಂತರಿಸಲಾಯಿತು.
ಕೊಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಅವರು ಕಾಲೊ¤àಡು ನರಸಿಂಹ ಶೆಟ್ಟಿ ಅವರಿಗೆ ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚಕ್ಕಾಗಿ ಚೆಕ್ನ್ನು ಹಸ್ತಾಂತರಿಸಿದರು. ದೇಗುಲದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ, ರಮೇಶ ಗಾಣಿಗ, ನರಸಿಂಹ ಹಳಗೇರಿ, ಜಯಂತಿ ವಿಜಯಕೃಷ್ಣ, ಕಾಲೊ¤àಡು ಗ್ರಾ.ಪಂ. ಅಧ್ಯಕ್ಷ ಅಣ್ಣಪ್ಪ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯ ಎ. ಶಿವರಾಮ, ದೈ.ಶಿ. ಶಿಕ್ಷಕ ರಾಜೀವ ಶೆಟ್ಟಿ ಉಪಸ್ಥಿತರಿದ್ದರು.