ಸೈಕ್ಲೋನ್ ಹಿನ್ನಲೆ ಕಾರ್ಕಳ ಶಾಸಕರಿಂದ ತುರ್ತು ಸಭೆ
Team Udayavani, May 15, 2021, 5:48 PM IST
ಕಾರ್ಕಳ: ತೌಕ್ತೇ ಚಂಡಮಾರುತ ಹಿನ್ನಲೆಯಲ್ಲಿ ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ಶನಿವಾರ ತಮ್ಮ ಕಚೇರಿ ವಿಕಾಸದಲ್ಲಿ ವಿಧಾನ ಸಭಾ ಕ್ಷೇತ್ರದ ಎಂಟು ಸೆಕ್ಷನ್ ಗಳ ಮೆಸ್ಕಾಂ ಅಧಿಕಾರಿಗಳ ಸಭೆ ನಡೆಸಿದರು.
ಚಂಡಮಾರುತ ಸಂದರ್ಭ ಹಾಗೂ ಮುಂದಿನ ಮಾನ್ಸೂನ್ ಅವಧಿಯಲ್ಲಿ ಕಾರ್ಕಳ ವಿಧಾನ ಸಭಾ ಕ್ಷೇತ್ರದಲ್ಲಿ ವಿದ್ಯುತ್ ಸರಬರಾಜು ಹಾಗೂ ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವುದು ಮತ್ತು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಾಸಕ ವಿ.ಸುನೀಲ್ ಕುಮಾರ್ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಗಾಳಿ, ಮಳೆ, ಸಿಡಿಲು, ಮಿಂಚು ಹೆಚ್ಚಿರುವ ಸಂದರ್ಬ ಸೊತ್ತು ಹಾನಿ, ಜೀವ ಹಾನಿ ಸಂಭವಿಸುವ ಸಾಧ್ಯತೆಗಳಿವೆ. ಇವುಗಳ ತಡೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.
ಅಗತ್ಯ ಸಿಬಂದಿ..ಮೆಟಿರಿಯಲ್ ಸಿದ್ದಪಡಿಸಿಕೊಳ್ಳುವಂತೆ ಸೂಚಿಸಿದರಲ್ಲದೆ ಮೆಸ್ಕಾಂ ಎಂ.ಡಿ ಗೆ ಕರೆ ಮಾಡಿ ಕಾರ್ಕಳ, ಹೆಬ್ರಿ ಒಳಗೊಂಡು ವಿಧಾನಸಭಾ ಕ್ಷೇತ್ರಕ್ಕೆ ಬೇಕಿರುವ ಅಗತ್ಯ ಮೆಟಿರಿಯಲ್ ಒದಗಿಸುವಂತೆ ಸೂಚಿಸಿದೆರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ