ಮರಳು ಸಂಬಂಧ ಮೇ 28ಕ್ಕೆ ಸಭೆ: ಶಾಸಕ ಭಟ್
Team Udayavani, May 26, 2019, 6:07 AM IST
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮರಳುಗಾರಿಕೆ ಆರಂಭಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೇ 28ರಂದು ಶಾಸಕರ ಸಭೆ ನಡೆಯಲಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಮರಳುಗಾರಿಕೆ ಈ ವರ್ಷ ನಡೆಯುವ ಆಸೆ ನಮಗಿಲ್ಲ. ಕನಿಷ್ಠ ಆಗಸ್ಟ್ಗಾದರೂ ಆರಂಭಿಸಲು ತಯಾರಿ ಮಾಡಬೇಕು. ಆ. 1ರಿಂದ ಮರಳುಗಾರಿಕೆ ನಡೆಸಲೇಬೇಕು. ಈ ಬಗ್ಗೆ ಚರ್ಚಿಸಲು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸಹಿತ ಜಿಲ್ಲೆಯ ಶಾಸಕರು ಜಿಲ್ಲಾಧಿಕಾರಿಯವರ ಜತೆ ಅಧಿಕೃತ ಸಭೆ ನಡೆಸಲಿದ್ದಾರೆ.
ಹೊಸ ಡಿಸಿಯವರು ಬಂದ ಅನಂತರ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೆವು. ಆದರೆ ಅಧಿಕೃತ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಹೊಸ ಡಿಸಿ ಬಂದಾಗ ನೀತಿ ಸಂಹಿತೆ ಜಾರಿಯಾಗಿತ್ತು. ಮೇ 27ರಂದು ಅದು ಕೊನೆಗೊಳ್ಳಲಿದೆ. ಹಾಗಾಗಿ ಮೇ 28ರಂದು ಅಧಿಕೃತ ಸಭೆ ನಡೆಸಲಾಗುತ್ತಿದೆ ಎಂದು ಭಟ್ ತಿಳಿಸಿದ್ದಾರೆ.
ಮರಳುಗಾರಿಕೆಗೆ ಚಿಂತನೆ
ಪ್ರ. ಕಾರ್ಯದರ್ಶಿ ಅನುಮತಿಯ ಮೇರೆಗೆ ಮೇ 15ರಂದು 7 ಮಂದಿ ಮರಳು ಹೋರಾಟ ಸಮಿತಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸಿಆರ್ಝೆಡ್ನಲ್ಲಿ ವ್ಯಾಪ್ತಿಯಲ್ಲಿ ಮರುಳು ದಿಬ್ಬ ತೆರವುಗೊಳಿಸುವ ಕುರಿತು ಚರ್ಚಿಸಲಾಗಿದೆ. ಜೂ. 1ರಿಂದ ಜು 31ರ ವರೆಗೆ ಮರಳುಗಾರಿಕೆ ನಿಷೇಧವಿದೆ. ಈ ಎರಡು ತಿಂಗಳ ಅವಧಿಯಲ್ಲಿ ಕಾನೂನು ವ್ಯಾಪ್ತಿಯಲ್ಲಿ ಶೀಘ್ರದಲ್ಲಿ ಮರಳುಗಾರಿಕೆ ಪ್ರಾರಂಭಿಸುವ ಕುರಿತು ಚಿಂತನೆ ನಡೆಸಲಾಗುತ್ತದೆ ಎಂದು ಡಿಸಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ