ಆಗಸ್ಟ್ 12-14: ಉಡುಪಿಯಲ್ಲಿ ಯೋಗಾಥಾನ್; ಜಿಲ್ಲಾಧಿಕಾರಿ ಕೂರ್ಮಾರಾವ್
Team Udayavani, Jul 2, 2022, 1:38 AM IST
ಮಣಿಪಾಲ: ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಅದರಿಂದ ದೇಹಕ್ಕೆ ಆಗುವ ಪ್ರಯೋಜನ ಕುರಿತು ಅರಿವು ಮೂಡಿಸುವುದು ಸೇರಿದಂತೆ ಯೋಗವನ್ನು ನಿತ್ಯ ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಲು ಆಗಸ್ಟ್ 12ರಿಂದ 14ರ ವರೆಗೆ ಜಿಲ್ಲಾಮಟ್ಟದ ಯೋಗಾಥಾನ್ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 10,000 ಜನರಿಗೆ ಏಕಕಾಲದಲ್ಲಿ ಒಂದೆಡೆ ತರಬೇತಿ ನೀಡಿ, ಯೋಗವನ್ನು ತಮ್ಮ ದೈನಂದಿನ ಚಟುವಟಿಕೆ ಯಾಗಿಸಿಕೊಂಡು ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಇದರಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಲಾಗುವುದು ಎಂದರು.
ಸಾರ್ವಜನಿಕರು ಯೋಗಾಥಾನ್ನಲ್ಲಿ ಭಾಗವಹಿಸಲು [email protected] ನಲ್ಲಿ ಆನ್ಲೈನ್ ನೋಂದಣಿ ಹಾಗೂ ಕಾರ್ಯಕ್ರಮದ ಸ್ಥಳದಲ್ಲಿಯೇ ನೋಂದಣಿಗೂ(ಆಫ್ಲೈನ್) ಅವಕಾಶವಿದೆ. ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕಾಲೇಜುಗಳಲ್ಲಿ ಪ್ರಾಂಶುಪಾಲರ ಸಹಕಾರ ಪಡೆಯಬೇಕು ಎಂದು ಸೂಚನೆ ನೀಡಿದರು.
ಉಡುಪಿ ಜಿಲ್ಲೆ ಘೋಷಣೆಯಾಗಿ 25 ವರ್ಷ ಸಂಪೂರ್ಣವಾಗುತ್ತಿದ್ದು, ಇದರ ಅಂಗವಾಗಿ ವಿಶೇಷ ಕಾರ್ಯಕ್ರಮ ಗಳನ್ನು ಆಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ, ಜಿಲ್ಲಾ ಆಯುಷ್ ಅಧಿಕಾರಿ ಡಾ| ಸತೀಶ್ ಆಚಾರ್ಯ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ