MEIL: ಮಣಿಪಾಲ ಸಂಸ್ಥೆಗಳಿಂದ ಉದ್ಯೋಗ ಸೃಷ್ಟಿ: ಕಾಣಿಯೂರು ಶ್ರೀ
ಮಣಿಪಾಲ ಎನರ್ಜಿ ನವೀಕೃತ ಕಚೇರಿ ಉದ್ಘಾಟಿಸಿದ ಕಾಣಿಯೂರು ಶ್ರೀ
Team Udayavani, Nov 2, 2023, 10:00 PM IST
ಮಣಿಪಾಲ: ಮಣಿಪಾಲವು ಸಾವಿರಾರು ಜನರಿಗೆ ಉದ್ಯೋಗ ನೀಡುತ್ತಿರುವ ಪ್ರದೇಶವಾಗಿ ಗುರು ತಿಸಿಕೊಂಡಿದೆ. ಇಲ್ಲಿ ಅಭಿವೃದ್ಧಿ ಸಾಧ್ಯವಾಗಿಸಿದ ಕೀರ್ತಿ ಪೈ ಕುಟುಂಬಕ್ಕೆ ಸಲ್ಲುತ್ತದೆ ಎಂದು ಶ್ರೀ ಕಾಣಿ ಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹೇಳಿದರು.
ಮಣಿಪಾಲ ಎನರ್ಜಿ ಮತ್ತು ಇನ್ಫ್ರಾಟೆಕ್ ಲಿಮಿಟೆಡ್ನ (ಎಂಇ ಐಎಲ್) ನವೀಕೃತ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಮಣಿಪಾಲ ಎನರ್ಜಿ ಮತ್ತು ಇನ್ಫ್ರಾಟೆಕ್ ಸಂಸ್ಥೆ ನಿರ್ಮಾಣ ವಲಯ, ಅಭಿವೃದ್ಧಿ ಕ್ಷೇತ್ರದಲ್ಲಿ ಹಲವಾರು ಮಂದಿಗೆ ಉದ್ಯೋಗ ನೀಡುತ್ತಿದೆ. ಈ ಸಂಸ್ಥೆ ಇನ್ನಷ್ಟು ಬೆಳೆಯಲಿ ಎಂದು ಹಾರೈಸಿದ ಅವರು, ನೂರಾರು ಜನರಿಗೆ ಉಪಯೋಗವಾಗುವಂತೆ ಸಂಸ್ಥೆ ಗಳು ಕಾರ್ಯ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಉದಯವಾಣಿ, ತರಂಗ ಮೂಲಕ ಸಾತ್ವಿಕ ವಿಚಾರವನ್ನು ಜನರಿಗೆ ತಲುಪಿಸುವ ಕೆಲಸವೂ ನಡೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಮಣಿಪಾಲ್ ಟೆಕ್ನಾಲಜಿಸ್ ಸಂಸ್ಥೆಯ (ಎಂಟಿಎಲ್) ಕಾರ್ಯ ನಿರ್ವಾಹಕ ಅಧ್ಯಕ್ಷರಾದ ಟಿ. ಗೌತಮ್ ಪೈ ಅವರು ಮಾತನಾಡಿ, ಸಂಸ್ಥೆಯು ಹಲವು ವರ್ಷಗಳಿಂದ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ಗುಣಮಟ್ಟದ ಮೌಲ್ಯಯುತ ಕಾರ್ಯದ ಮೂಲಕ ವಿಶೇಷ ಮನ್ನಣೆ ಪಡೆದಿದೆ ಎಂದರು.
ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ನ (ಎಂಎಂಎನ್ಎಲ್) ಕಾರ್ಯನಿರ್ವಾಹಕ ಅಧ್ಯಕ್ಷ ರಾದ ಟಿ. ಸತೀಶ್ ಯು. ಪೈ, ಎಂಎಂ ಎನ್ಎಲ್ನ ವನಿತಾ ಪೈ, ಎಂಇಐಎಲ್ ನ ಎಂಡಿ ಮತ್ತು ಸಿಇಒ ಸಾಗರ್ ಮುಖೋಪಾಧ್ಯಾಯ, ಎಂಟಿಎಲ್ ನ ಎಂಡಿ ಮತ್ತು ಸಿಇಒ ಅಭಯ್ ಗುಪ್ತೆ ಅತಿಥಿಗಳಾಗಿದ್ದರು.
ಎಂಇಐಎಲ್ನ ವಿಶ್ವನಾಥ್ ಚೌವ್ಹಾಣ್, ಸತೀಶ್ ಜಡ್ಡು ಉಪಸ್ಥಿತರಿದ್ದರು. ಆನಂದ್ ಕೆ. ಸ್ವಾಗತಿಸಿ, ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ