ಒಂದೇ ಮನೆಯ ಸದಸ್ಯರು ಬೇರೆ-ಬೇರೆ ವಾರ್ಡ್‌ ಮತದಾರರು!


Team Udayavani, Dec 20, 2020, 1:35 PM IST

ಒಂದೇ ಮನೆಯ ಸದಸ್ಯರು ಬೇರೆ-ಬೇರೆ ವಾರ್ಡ್‌ ಮತದಾರರು!

ಉಡುಪಿ, ಡಿ. 19: ಜಿಲ್ಲೆಯ 154 ಗ್ರಾ.ಪಂ.ಗಳ ಚುನಾವಣೆಯಲ್ಲಿ ಈ ಬಾರಿ ನಿರೀಕ್ಷೆಗಿಂತ ಕಡಿಮೆ ಪ್ರಮಾಣದಲ್ಲಿ ಮತದಾನ ಮಾಡುವ ಸಾಧ್ಯತೆಗಳು ಕಂಡು ಬರುತ್ತಿದೆ. ಚುನಾವಣ ಆಯೋಗದ ಎಡವಟ್ಟಿನಿಂದ ಒಂದೇ ಮನೆಯ ಸದಸ್ಯರು ಬೇರೆ- ಬೇರೆ ವಾರ್ಡ್‌ನ ಮತದಾರರಾಗಿದ್ದಾರೆ.

ಜಿಲ್ಲೆಯಲ್ಲಿ ವಿವಿಧ ಗ್ರಾ.ಪಂ.ಗಳಲ್ಲಿ ಒಂದೇ ಕುಟುಂಬದ ಹಲವರ ಹೆಸರು ಬೇರೆ ಬೇರೆ ಮತಗಟ್ಟೆಯಲ್ಲಿ ಸೇರಿರುವುದರಿಂದ ಅವರೆಲ್ಲರೂ ಮತದಾನದಿಂದ ದೂರವೇ ಉಳಿಯಬೇಕಾಗೀತು ಎನ್ನುವ ಅನುಮಾನ ಕಾಡುತ್ತಿದೆ. ವಿಶೇಷವಾಗಿ ಒಂದೇ ಮನೆಯ ಮತದಾರರ ಹೆಸರು ಬೇರೆ ಬೇರೆ  ವಾರ್ಡ್‌ನ ಮತಗಟ್ಟೆಯಲ್ಲಿ ಸೇರಿಕೊಂಡಿರು ವುದು ಗೊಂದಲಕ್ಕೆ ಎಡೆಮಾಡಿದೆ.

ಬೇರೆ ವಾರ್ಡ್‌ ಮತ :

ಆಯೋಗದ ಎಡವಟ್ಟಿನಿಂದಾಗಿ ಈ ಬಾರಿ ಚುನಾವಣೆಗೆ ನಿಂತಿರುವ ಅಭ್ಯರ್ಥಿಗಳ ಗೆಲುವಿಗೆ ಭಾರೀ ಹಿನ್ನಡೆಯಾಗುವ ಸಾಧ್ಯತೆಗಳು ಕಾಣುತ್ತಿದೆ. ಉದಾಹರಣೆಗೆ “ಎ’ ಗ್ರಾಮದ 2ನೇ ವಾರ್ಡ್‌ನ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಯ ಮತ “ಎ’ ಗ್ರಾಮದ 3ನೇ ವಾರ್ಡ್‌ಗೆ ವರ್ಗಾಯಿಸಲಾಗಿದೆ. ಸ್ಪರ್ಧೆಗೆ ನಿಂತ ಅಭ್ಯರ್ಥಿ ತನ್ನ ಬದಲಾಗಿ ಇನ್ನೊಂದು  ವಾರ್ಡ್‌ನ ಅಭ್ಯರ್ಥಿಗೆ ಮತ ಚಲಾಯಿಸಬೇಕಾಗಿದೆ. ಇದರಿಂದ ಈ ಅಭ್ಯರ್ಥಿಗೆ ಚುನಾವಣೆಯಲ್ಲಿ ಒಂದು ಮತದಿಂದಲಾದರೂ ಸೋಲು- ಗೆಲುವುಗಳಾಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ.

ಇನ್ನಷ್ಟು  ತಡವಾಗಲಿದೆ :

ಪ್ರತಿ ಬಾರಿ ಗ್ರಾ.ಪಂ. ಚುನಾವಣೆ ಮಧ್ಯಾಹ್ನದ ಹೊತ್ತಿಗೆ ಶೇ. 60ರಷ್ಟು ಮತದಾನ ಮುಗಿದಿರುತ್ತಿತ್ತು. ಆದರೆ ಈ ಬಾರಿ ಬೇಗ ಮುಗಿಯುವ ಸಾಧ್ಯತೆ ಕಡಿಮೆ ಇದೆ. ಏಕೆಂದರೆ ಒಂದು ಮನೆಯವರ ಹೆಸರು 1 ಕ್ರ.ಸಂ.ಯಲ್ಲಿ ಇದ್ದರೆ ಇನೋರ್ವ ಸದಸ್ಯ 100, 900ನೇ ಕ್ರಮ ಸಂಖ್ಯೆಯಲ್ಲಿ ಬರುತ್ತಾರೆ. ಇದರಿಂದ ಹೆಸರು ಹುಡುಕಾಟದಲ್ಲಿ ಸಮಯ ವ್ಯತ್ಯಯವಾಗಲಿದೆ. ಜತೆಗೆ ಈ ಕೊರೊನಾ ಸಂದರ್ಭದಲ್ಲಿ ಜನರು ಮತ ಚಲಾಯಿಸಲು ಸರದಿ ಸಾಲಿನಲ್ಲಿ ನಿಲ್ಲಬೇಕಾಗುತ್ತದೆ.

ಮತಗಳು ವರ್ಗಾವಣೆ! :

ಹೆಬ್ರಿ ತಾಲೂಕಿನ ಕುಚ್ಚಾರು 1ನೇ ವಾರ್ಡ್‌ನ 120 ಮತಗಳನ್ನು (30 ಮತದಾರರು) 2ನೇ ವಾರ್ಡ್‌ಗೆ ವರ್ಗಾಯಿಸಲಾಗಿದೆ. ಅಲ್ಲಿನ 30 ಮತಗಳನ್ನು (10 ಮತದಾರರನ್ನು) 1ನೇ ವಾರ್ಡ್‌ಗೆ ವರ್ಗಾಯಿಸಲಾಗಿದೆ. ಇಂತಹ ತಪ್ಪು ಕೇವಲ ಹೆಬ್ರಿ ಮಾತ್ರವಲ್ಲದೆ ಜಿಲ್ಲೆಯ ಇತರ ತಾಲೂಕುಗಳ ವಿವಿಧ ಗ್ರಾ.ಪಂ.ಗಳಲ್ಲಿ ವರದಿಯಾಗಿದೆ. ಜತೆಗೆ ಒಬ್ಬರ ಮನೆ ಸಂಖ್ಯೆಯಲ್ಲಿ ಬೇರೊಬ್ಬರ ಹೆಸರುಗಳನ್ನು ಸೇರಿಸಲಾಗಿದೆ.

ಅಕ್ರಮಕ್ಕೆ ದಾರಿ ! : ಪ್ರಸ್ತುತ ಒಂದು ವಾರ್ಡ್‌ನಿಂದ ಇನ್ನೊಂದು ವಾರ್ಡ್‌ಗೆ ಮತಗಳು ವರ್ಗಾವಣೆ ಆಗಿರುವುದರಿಂದ ಅಭ್ಯರ್ಥಿ ಅಂತಹ ಮನೆಗಳನ್ನು ಹುಡುಕಿಕೊಂಡು ಹೋಗಿ ಮತ ಬದಲಾಯಿಸಲು ಮನವಿ ಮಾಡುತ್ತಿದ್ದಾರೆ. ನಾವು ನಿಮ್ಮ ಅಭ್ಯರ್ಥಿಗಳಿಗೆ ಮತ ಹಾಕುತ್ತೇವೆ. ನೀವು ನಮ್ಮ ಅಭ್ಯರ್ಥಿಗೆ ಮತ ಹಾಕಿ ಎನ್ನುವ ಒಳ ಒಪ್ಪಂದಗಳು ಗ್ರಾ.ಪಂ. ಚುನಾವಣೆಯಲ್ಲಿ ನಡೆಯುತ್ತಿರುವ ಆರೋಪಗಳು ಕೇಳಿ ಬರುತ್ತಿವೆೆ. ಜತೆಗೆ ಹಣ ನೀಡಿ ಮತ ಖರೀದಿ ಮಾಡುತ್ತಿರುವ ಗುಮಾನಿಗಳಿವೆ.

ಮತದಾರರ ಸಂಖ್ಯೆ ಹೆಚ್ಚಳವಾಗಿ ಬೇರೆ ಮತಗಟ್ಟೆಗೆ ಸೇರ್ಪಡೆಗೊಳಿಸಿದ್ದರೆ ಸರಿ ಎನ್ನಬಹುದಿತ್ತು. ಆದರೆ ವಾರ್ಡನ್ನೇ ಬದಲಾಯಿಸ ಲಾಗಿದೆ. ಅದೂ ಒಂದೇ ಮನೆಯವರನ್ನೇ ಬೇರೆ-ಬೇರೆ ವಾರ್ಡ್‌ಗೆ ಹಾಕಿದರೆ ಹೇಗೆ? ಶೀಘ್ರದಲ್ಲಿ ಸಮಸ್ಯೆ ಬಗ್ಗೆ ಗಮನಹರಿಸಬೇಕು.-ಎಚ್‌. ರಾಜೀವ್‌ ಶೆಟ್ಟಿ ಕುಚ್ಚಾರು , ಹೆಬ್ರಿ ತಾಲೂಕು

ಒಂದೇ ಮನೆ ಸದಸ್ಯರು ಬೇರೆ- ಬೇರೆ ವಾರ್ಡ್‌ನ ಮತದಾರರಾಗಿ ಬದಲಾಗಿರುವುದು ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಗಮನ ಹರಿಸಲಾಗುತ್ತದೆ. -ಜಿ.ಜಗದೀಶ್‌, ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

Shirva: ಭಾರೀ ಗಾಳಿ ಮಳೆಗೆ ವ್ಯಾಪಕ ಹಾನಿ; ಲಕ್ಷಾಂತರ ರೂ. ನಷ್ಟ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.