ಎಂಐಸಿ ರಜತ ಮಹೋತ್ಸವ: ಬ್ರ್ಯಾಂಡ್‌ಗೆ ಧರ್ಮ, ರಾಜಕೀಯ ಬೆರೆಸದಿರಿ: ಹರೀಶ್‌ ಬಿಜೂರ್‌


Team Udayavani, Jan 29, 2023, 12:52 AM IST

ಎಂಐಸಿ ರಜತ ಮಹೋತ್ಸವ: ಬ್ರ್ಯಾಂಡ್‌ಗೆ ಧರ್ಮ, ರಾಜಕೀಯ ಬೆರೆಸದಿರಿ: ಹರೀಶ್‌ ಬಿಜೂರ್‌

ಮಣಿಪಾಲ: ಹೊಸ ಬ್ರ್ಯಾಂಡ್‌ ಸೃಷ್ಟಿಸುವ ಸಂದರ್ಭದಲ್ಲಿ ಧರ್ಮ ಮತ್ತು ರಾಜಕೀಯವನ್ನು ದೂರ ವಿಡದಿದ್ದರೆ ಬ್ರ್ಯಾಂಡ್‌ನ‌ಲ್ಲಿ ತಂದಾಗ ವಿಭಜನೆಯ ಹಲವು ಆಯಾಮಗಳು ಹುಟ್ಟಿಕೊಳ್ಳುತ್ತವೆ ಎಂದು ಬ್ರ್ಯಾಂಡ್‌ ಗುರು ಸಂಸ್ಥಾಪಕ ಹರೀಶ್‌ ಬಿಜೂರ್‌ ಹೇಳಿದರು.

ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್ ಕಮ್ಯುನಿಕೇಶನ್‌(ಎಂಐಸಿ)ಯ ರಜತ ಮಹೋತ್ಸವ ಮತ್ತು ಹಳೆ ವಿದ್ಯಾರ್ಥಿಗಳ ಸಹಮಿಲನ ಕಾರ್ಯ ಕ್ರಮವನ್ನು ಶನಿವಾರ ಹೊಟೇಲ್‌ ಫಾರ್ಚೂನ್‌ ವ್ಯಾಲಿವ್ಯೂನಲ್ಲಿ ಉದ್ಘಾ ಟಿಸಿ, “ಮೈಂಡ್‌ ದಿ ಗ್ಯಾಪ್‌- ದಿ ಕಮ್ಯೂ ನಿಕೇಶನ್‌ ಗ್ಯಾಪ್‌’ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

ಸಂವಹನ ವ್ಯವಸ್ಥೆಯೂ ಪ್ರಸ್ತುತ ತಂತ್ರಜ್ಞಾನಕ್ಕೆ ಪೂರಕವಾಗಿ ಬದಲಾಗುತ್ತಿದೆ. ಅದಕ್ಕೆ ಸರಿಯಾಗಿ ಎಂಐಸಿ ಕೂಡ ಒಗ್ಗಿಕೊಳ್ಳುತ್ತಿದೆ. ಸಾಮಾಜಿಕ ಜಾಲತಾಣದ ಜತೆಗೆ ಚಾಟ್‌ ಜಿಟಿಪಿ ಸಂವಹನ ಕ್ಷೇತ್ರದಲ್ಲಿ ಹಲವು ಬದಲಾವಣೆ ತರಲಿದೆ. ಸಂವಹನ ಒಂದು ಭಾಷೆಗೆ ಸೀಮಿತವಲ್ಲ. ಯಾವ ಭಾಷೆಯನ್ನು ಆಯ್ಕೆ ಮಾಡಿಕೊಂಡು ಎಷ್ಟು ಪರಿಣಾಮಕಾರಿಯಾಗಿ ಜನರಿಗೆ ವಿಷಯ ತಲುಪಿಸುತ್ತೇವೆ ಎಂಬುದೇ ಮುಖ್ಯ. ನಾವೇನು ಮಾಡಬೇಕು ಎಂಬುದನ್ನು ಜನರು ಹೇಳುವ ಕಾಲ ಬರುತ್ತಿದೆ. ಹೀಗಾಗಿ ಸಂವಹನದ ಸವಾಲಿಗೂ ಸಜ್ಜಾಗಬೇಕು ಎಂದರು.

ಮಣಿಪಾಲದಲ್ಲಿ ಯುವ ಸಂಪತ್ತು
ಮಣಿಪಾಲ ದೇಶದ ಯುವನಗರ. ಇಲ್ಲಿ ಸದಾ ಸರಾಸರಿ 23 ವರ್ಷದವರೇ ಹೆಚ್ಚು. ದೇಶದ ಯಾವ ನಗರದಲ್ಲೂ ಈ ರೀತಿಯಿಲ್ಲ. ಮಣಿಪಾಲ ಸಣ್ಣ ನಗರವಾದರೂ ಯುವ ಸಂಪತ್ತು ಹೆಚ್ಚಿದೆ ಎಂದು ಬಣ್ಣಿಸಿದರು.

ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಮಾತ ನಾಡಿ, ಯುವ ಸಂಪತ್ತು ದೇಶದ ನಿಜವಾದ ಭವಿಷ್ಯ. ಈ ವಿಷಯದಲ್ಲಿ ಮಣಿಪಾಲ ಹೆಮ್ಮೆ ಪಡುವಂತಿದೆ. ಇಲ್ಲಿ ಯುವ ಜನರೇ ಹೆಚ್ಚಿದ್ದಾರೆ. ಎಂ.ವಿ. ಕಾಮತ್‌ ಅವರು ಬೆಳೆಸಿದ ಕೂಸು ಎಂಐಸಿ. ಅವರ ದೂರದೃಷ್ಟಿಯ ಜತೆಗೆ ಹಿಂದಿನ, ಈಗಿನ ನಿರ್ದೇಶಕರು, ಸಿಬಂದಿ ವಿದ್ಯಾರ್ಥಿ ಸಮೂಹದ ಕಾರ್ಯ ಸಾಧನೆ ಈ ಬೆಳವಣಿಗೆಯ ಮೆಟ್ಟಿಲಾಗಿದೆ ಎಂದರು.

ಮಾಹೆ ವಿ.ವಿ. ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಮಾತನಾಡಿ, ಎಂಐಸಿ ಸ್ಥಾಪನೆ ಹಾಗೂ ಪ್ರಸ್ತುತ ಬೆಳೆದು ಬಂದಿರುವ ಹಾದಿಯ ಜತೆಗೆ ಡಾ| ಟಿಎಂಎ ಪೈ, ಡಾ| ರಾಮದಾಸ ಪೈ, ಎಂ.ವಿ.ಕಾಮತ್‌ ಅವರ ಕಾರ್ಯ ವನ್ನು ಸ್ಮರಿಸಿದರು.

ಸಮ್ಮಾನ
ಎಂಐಸಿ ನಿರ್ದೇಶಕಿ ಡಾ| ಪದ್ಮ ರಾಣಿ, ಮಾಜಿ ನಿರ್ದೇಶಕರಾದ ಡಾ| ಬೊರೊಶಿವದಾಸ್‌ ಗುಪ್ತ, ಡಾ| ವರದೇಶ ಹಿರೇಗಂಗೆ ಹಾಗೂ ಎಂಐಸಿ ಮೊದಲ ಬ್ಯಾಚ್‌ನ ವಿದ್ಯಾರ್ಥಿಗಳಾದ ಶರತ್‌ ಕುಮಾರ್‌, ವನಿತಾ ಪೈ, ಅಲೋಕ್‌ ಸಿಂಗ್‌ ಅವರನ್ನು ಸಮ್ಮಾನಿ ಸಲಾಯಿತು. ಹಲವು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಸಿಬಂದಿಯನ್ನು ಅಭಿನಂದಿಸಲಾಯಿತು.

ವಿ.ವಿ. ಸಹ ಕುಲಪತಿ ಡಾ| ನಾರಾಯಣ ಸಭಾಹಿತ್‌, ಎಂಐಟಿ ನಿರ್ದೇಶಕ ಕ| ಡಾ| ಅನಿಲ್‌ ರಾಣ, ಡಾ| ಎಚ್‌.ಎಸ್‌. ಬಲ್ಲಾಳ್‌ ಅವರ ಪತ್ನಿ ಇಂದಿರಾ ಬಲ್ಲಾಳ್‌ ಸೇರಿದಂತೆ ವಿ.ವಿ.ಯ ಅಧಿಕಾರಿಗಳು ಉಪಸ್ಥಿತರಿದ್ದರು. ಎಂಐಸಿ ನಿರ್ದೇಶಕಿ ಡಾ| ಪದ್ಮ ರಾಣಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಪ್ರಾಧ್ಯಾಪಿಕೆ ಡಾ| ಶುಭಾ ಎಚ್‌.ಎಸ್‌. ವಂದಿಸಿದರು. ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.