ಮಿನಿ ಲಾರಿ ಕಾರಿಗೆ ಢಿಕ್ಕಿ : ಕಾರು ಚಾಲಕನಿಗೆ ಗಾಯ
Team Udayavani, Oct 30, 2022, 11:20 PM IST
ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಬೀಡು ಬಳಿ ಮಂಜು ಸಾಗಿಸುತ್ತಿದ್ದ 709ಮಿನಿ ಲಾರಿಯು ರಸ್ತೆ ದಾಟಿ ಬಂದು ಕಾರಿಗೆ ಢಿಕ್ಕಿಯಾಗಿ ಮಗುಚಿಬಿದ್ದು ಸಂಭವಿಸಿದ ಅಪಘಾತದಲ್ಲಿ ಕಾರು ಚಾಲಕರಿಗೆ ಗಾಯಗಳಾಗಿವೆ.
ಬೈಕಂಪಾಡಿಗೆ ಉಡುಪಿಯಿಂದ ಮಂಜು ಸಾಗಿಸುತ್ತಿದ್ದ ಮಿನಿ ಲಾರಿ ಚಾಲಕನ ಅಜಾಗ್ರತೆಯ ಚಾಲನೆಯಿಂದಾಗಿ ಆತನಿಗೆ ತನ್ನ ವಾಹನವನ್ನು ಹಿಡಿತದಲ್ಲಿಸಿಕೊಳ್ಳಲಾಗಿರಲಿಲ್ಲ. ಮಿನಿ ಲಾರಿಯು ಡಿವೈಡರ್ ಹತ್ತಿಳಿದು ಮಂಗಳೂರಿನಿಂದ ಉಡುಪಿಯತ್ತ ಬರುತ್ತಿದ್ದ ಕಾರಿಗೆ ಅಡ್ಡಬಂದು ಢಿಕ್ಕಿಯಾಗಿ ಮಿನಿ ಲಾರಿ ಪಲ್ಟಿಯಾಗಿತ್ತು. ಅಪಘಾತದಿಂದಾಗಿ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನ ಏರ್ಬ್ಯಾಗ್ ತೆರೆದುಕೊಂಡಿದ್ದು ಚಾಲಕರಿಗೆ ತರಚಿದ ಗಾಯಗಳಾಗಿವೆ. ಪಡುಬಿದ್ರಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣವು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ