ಕ್ರೈಸ್ತ ಉದ್ಯಮಿ ಕಟ್ಟಿಸಿದ ಸಿದ್ಧಿ ವಿನಾಯಕ ದೇಗುಲಕ್ಕೆ ಸಚಿವ ಶ್ರೀನಿವಾಸ ಪೂಜಾರಿ ಭೇಟಿ
Team Udayavani, Jul 18, 2021, 12:07 PM IST
ಶಿರ್ವ: ಕ್ರೈಸ್ತ ಸಮುದಾಯದ ಉದ್ಯಮಿ ಗ್ಯಾಬ್ರಿಯಲ್ ಫೇಬಿಯನ್ ನಜರತ್ ಅವರು ಕಟ್ಟಿಸಿ ಹಿಂದುಗಳಿಗೆ ಕೊಡುಗೆಯಾಗಿ ನೀಡಿದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ರಾಜ್ಯ ಸರಕಾರದ ಮುಜರಾಯಿ ಖಾತೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ರವಿವಾರ ಭೇಟಿ ನೀಡಿ ಶ್ರೀದೇವರ ಪ್ರಸಾದ ಪಡೆದರು.
ಬಳಿಕ ಮಾತನಾಡಿದ ಸಚಿವರು ಕ್ರೈಸ್ತ ಸಮುದಾಯದ ಉದ್ಯಮಿ ಗ್ಯಾಬ್ರಿಯಲ್ ನಜರತ್ಕಟ್ಟಿಸಿದ ಕಲಾತ್ಮಕ ದೇಗುಲದಲ್ಲಿ ಗಣಪತಿಯನ್ನು ಸ್ತುತಿಸಲು ಸಮಸ್ತ ಭಕ್ತಾಧಿಗಳಿಗೆ ಅವಕಾಶ ಮಾಡಿಕೊಟ್ಟಿರುವುದು ದೇಶ ಮತ್ತು ರಾಜ್ಯದ ಬೆರಳೆಣಿಕೆಯ ಕಾರ್ಯಕ್ರಮಗಳಲ್ಲಿ ಒಂದಾಗಿದ್ದು,ಸರಕಾರದ ಮತ್ತು ಇಲಾಖೆಯ ಪರವಾಗಿ ಅಭಿನಂದನೆಗಳು. ದೇವಸ್ಥಾನದಲ್ಲಿ ಭಜನಾ ಸಪ್ತಾಹ,ಧಾರ್ಮಿಕ ಮತ್ತು ಸಾಂಸðತಿಕ ಚಟುವಟಿಕೆಗಳು ನಡೆಯುವ ಮೂಲಕ ಸಮಾಜ ಕಟ್ಟುವ ಕೇಂದ್ರವಾಗಿ ರೂಪುಗೊಂಡು ಎಲ್ಲಾ ವರ್ಗದ ಜನರಿಗೆ ದೇವರ ಆಶೀರ್ವಾದ ಲಭಿಸಲಿ. ದೇವಸ್ಥಾನದ ಬೆಳವಣಿಗೆಗೆ ಪೂರಕವಾಗಿ ಸರಕಾರದ ಸಹಾಯ ಯಾಚಿಸಿದಲ್ಲಿ ಅವರ ಜತೆ ನಿಂತು ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ದೇಗುಲದ ವತಿಯಿಂದ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಸಮ್ಮಾನಿಸಲಾಯಿತು. ಸಚಿವರು ದೇಗುಲದ ನಿರ್ಮಾತೃ ಗ್ಯಾಬ್ರಿಯಲ್ ನಜರತ್ ಅವರನ್ನು ಗೌರವಿಸಿದರು.
ದೇಗುಲದ ಅರ್ಚಕ ಗುಂಡಿಬೈಲು ನರಸಿಂಹ ಭಟ್, ಸತೀಶ್ ಶೆಟ್ಟಿ ಮಲ್ಲಾರು, ಕುತ್ಯಾರು ಪ್ರಸಾದ್ ಶೆಟ್ಟಿ, ಗಿರಿಧರ ಪ್ರಭು,ಶಿರ್ವ ಗ್ರಾ.ಪಂ. ಸದಸ್ಯರಾದ ಶ್ರೀನಿವಾಸ ಶೆಣೈ,ಪ್ರವೀಣ್ ಸಾಲಿಯಾನ್,ಕಾರ್ಯಕರ್ತರಾದ ರಾಜೇಶ್ ನಾಯ್ಕ, ದಿನೇಶ್ ಪೂಜಾರಿ,ಪ್ರಶಾಂತ್ ಪಾಲಮೆ,ನಿತಿನ್ ನಾಯಕ್,ಸೂರಜ್,ಜಯಂತ್, ರಾಜೇಶ್,ಚೇತನ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ