ನಾಳೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸಚಿವ ಶ್ರೀರಾಮುಲು ವಾಸ್ತವ್ಯ
Team Udayavani, Sep 26, 2019, 5:00 AM IST
ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಸೆ. 27ರಂದು ಉಡುಪಿಯ ಅಜ್ಜರಕಾಡು ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಂಜೆ 6ಕ್ಕೆ ಜಿಲ್ಲಾಸ್ಪತ್ರೆಗೆ ಆಗಮಿಸಿ ಕುಂದುಕೊರತೆ ಪರಿಶೀಲಿಸಲಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ವಾಸ್ತವ್ಯ ಇರಲಿದ್ದಾರೆ.
1962ರಲ್ಲಿ ಸಬ್ ಡಿವಿಷನ್ ಆಸ್ಪತ್ರೆಯಾಗಿ ಆರಂಭಗೊಂಡ ಅಜ್ಜರಕಾಡು ಆಸ್ಪತ್ರೆ ವಾಸ್ತವವಾಗಿ ಇಂದಿಗೂ ಜಿಲ್ಲಾಸ್ಪತ್ರೆ ದರ್ಜೆಯ ಸೌಲಭ್ಯ ಹೊಂದಿಲ್ಲ. 1997ರಲ್ಲಿ ಉಡುಪಿ ಜಿಲ್ಲೆ ರಚನೆಯಾದ ಬಳಿಕ ನಾಮಫಲಕದಲ್ಲಿ ಮಾತ್ರ ಜಿಲ್ಲಾಸ್ಪತ್ರೆ ಎಂದಿದೆ. ಸೌಲಭ್ಯಗಳು ತಾಲೂಕು ಮಟ್ಟದ್ದಾಗಿಯೇ ಇವೆ.
ರೋಗಿಗಳ ಸಂಖ್ಯೆ ಹೆಚ್ಚಳ
ದಾನಿಗಳ ನೆರವಿನಿಂದ ಕೆಲವು ಸವಲತ್ತು ಒದಗಿಸಲಾಗಿದ್ದರೂ ವೈದ್ಯರು, ಸಿಬಂದಿಯ ಕೊರತೆ ತೀವ್ರವಾಗಿದೆ. ಪ್ರಸ್ತುತ ದಿನವೊಂದಕ್ಕೆ ಸುಮಾರು 890ರಿಂದ 900 ಮಂದಿ ರೋಗಿಗಳು ಹೊರರೋಗಿ ವಿಭಾಗಕ್ಕೆ ಬರುತ್ತಾರೆ. ಆಸ್ಪತ್ರೆಯಲ್ಲಿ ಇರುವುದು 124 ಹಾಸಿಗೆಗಳು ಮಾತ್ರ. ಆದರೆ ಅನಿವಾರ್ಯವಾಗಿ 160ರಷ್ಟು ರೊಗಿಗಳನ್ನು ದಾಖಲಿಸಿಕೊಳ್ಳಲಾಗಿದೆ. ಇರುವ ವೈದ್ಯರು, ಸಿಬಂದಿಯ ಗರಿಷ್ಠ ಸೇವೆಯಿಂದ ಕೆಲವು ಸೇವೆಗಳು ಉತ್ತಮ ಮಟ್ಟದಲ್ಲಿ ದೊರೆಯುತ್ತಿದ್ದರೂ ಜಿಲ್ಲಾಸ್ಪತ್ರೆ ದರ್ಜೆಗೆ ಏರದಿದ್ದರೆ ಸಾರ್ವಜನಿಕರಿಗೆ ಅಗತ್ಯ ಸೇವೆಗಳು ದೊರೆಯುವುದು ಅಸಾಧ್ಯ. ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಭೇಟಿ ಮತ್ತು ವಾಸ್ತವ್ಯ ಮಹತ್ವ ಪಡೆದುಕೊಂಡಿದೆ.
ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ, ಸಮುದಾಯ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಾಸ್ತವ್ಯ ಹೂಡುವುದಾಗಿ ಸಚಿವರು ಇತ್ತೀಚೆಗೆ ಘೋಷಿಸಿದ್ದರು. ಸೆ. 24ರಂದು ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಚಾಲನೆ ನೀಡಿದ್ದರು. ಗುರುವಾರ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ನಡೆಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ