ಮೀನುಗಾರರ ಬೇಡಿಕೆ ಈಡೇರಿಕೆಗೆ ಕ್ರಮ


Team Udayavani, Jul 19, 2018, 6:00 AM IST

1807gk3.jpg

ಉಡುಪಿ: ಮೀನುಗಾರರ ವಿವಿಧ ಬೇಡಿಕೆಗಳ ಈಡೇರಿಕೆಯ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತವಾಗಿದೆ. ಈಗಾಗಲೇ ಹಲವು ಬೇಡಿಕೆಗಳನ್ನು ಪೂರೈಸಿದೆ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟ ರಾವ್‌ ನಾಡಗೌಡ ಹೇಳಿದ್ದಾರೆ.

ಜು. 18ರಂದು ಉಡುಪಿಯ ಮಹಿಳಾ ಹೈಟೆಕ್‌ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಮಹಿಳಾ ಮೀನು ಮಾರಾಟ ಗಾರಿಂದ ಅಹವಾಲು ಸ್ವೀಕರಿಸಿದ ಅನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಶೀತಲೀಕರಣ ಘಟಕ
60 ವರ್ಷ ಮೇಲ್ಪಟ್ಟ ಎಲ್ಲ ಮಹಿಳೆಯರಿಗೆ ನೀಡುವ ಪಿಂಚಣಿಯನ್ನು ಕುಮಾರಸ್ವಾಮಿಯವರು ಈಗಾಗಲೇ 1,000 ರೂ.ಗಳಿಗೆ ಹೆಚ್ಚಿಸಿದ್ದಾರೆ. ಮತ್ಸಾéಶ್ರಯ ಯೋಜನೆಯಡಿ ನೀಡಿದ ಮನೆಗಳು ನಾಲ್ಕು ವರ್ಷಗಳ ಹಿಂದೆ ನೀಡಿದ ಮನೆಗಳು ಪೂರ್ಣಗೊಂಡಿಲ್ಲ ಎಂಬ ದೂರುಗಳಿವೆ. ಅದನ್ನು ರಾಜೀವ್‌ಗಾಂಧಿ ವಸತಿ ನಿಗಮಕ್ಕೆ ನೀಡುವ ಬಗ್ಗೆ ಚಿಂತಿಸಲಾಗಿದೆ. ನಿಗಮಕ್ಕೆ ಕೊಟ್ಟರೆ ಮತ್ತೆ ವಿಳಂಬವಾಗಬಹುದೆಂಬ ಅಭಿ ಪ್ರಾಯಗಳು ಕೂಡ ಇವೆ. ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಬಡವರಿಗೆ ಈಗಾಗಲೇ 2 ಲ.ರೂ.ವರೆಗೆ ಉಚಿತವಾಗಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಶೀತಲೀಕರಣ ಘಟಕ ಮಾಡಿಕೊಡಲಾಗುವುದು ಎಂದು ಸಚಿವರು ಹೇಳಿದರು. 
 
ಮಾರುಕಟ್ಟೆ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ನಗರಸಭೆಯ ವತಿಯಿಂದ ಅಗತ್ಯ ಸೌಲಭ್ಯ ಮಾಡಿಸಿ ಕೊಡಲು ಸೂಚಿಸುತ್ತೇನೆ ಎಂದರು. 

ಸೀಮೆಎಣ್ಣೆಗೆ ಪರ್ಯಾಯ
ಕೇಂದ್ರದಿಂದ ಪಡಿತರ ವಿತರಣೆಗೆ ಸೀಮೆಎಣ್ಣೆ ನೀಡುತ್ತಿಲ್ಲ. ಮುಕ್ತ ಮಾರುಕಟ್ಟೆಯಲ್ಲಿಯೂ ಸಿಗುತ್ತಿಲ್ಲ. ಉಚಿತವಾಗಿ ಅಡುಗೆ ಅನಿಲ ಸಂಪರ್ಕ ನೀಡಲಾಗುತ್ತಿದೆ. ಮುಂದೆ ಸೀಮೆಎಣ್ಣೆ ಸಿಗದು. ಎಲೆಕ್ಟ್ರಾನಿಕ್‌ ಮೋಟರ್‌ಗಳ ಮೂಲಕ ಮೀನುಗಾರಿಕೆ ಮಾಡುವ ಬಗ್ಗೆ ಪ್ರಯೋಗಗಳು ನಡೆಯುತ್ತಿವೆ. ಅದು ಯಶಸ್ಸಾದರೆ ಅದನ್ನು ಅನುಷ್ಠಾನಗೊಳಿಸಬಹುದು ಎಂದು ಸಚಿವ ನಾಡಗೌಡ ಹೇಳಿದರು. 

ಶಾಸಕ ಕೆ.ರಘುಪತಿ ಭಟ್‌, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ ರಾವ್‌, ಮುಖಂಡರಾದ ಜಯಕುಮಾರ್‌ ಪರ್ಕಳ, ಪ್ರದೀಪ್‌ ಜಿ., ಪೌರಾಯುಕ್ತ ಜನಾರ್ದನ್‌ ಮೊದಲಾದವರು ಉಪಸ್ಥಿತರಿದ್ದರು.

ಸಂಘದ ಅಧ್ಯಕ್ಷೆ ಬೇಬಿ ಎಚ್‌.ಸಾಲ್ಯಾನ್‌, ಉಪಾಧ್ಯಕ್ಷೆ ಸರೋಜಾ ಮತ್ತಿತರ ಮಹಿಳಾ ಮೀನು ಮಾರಾಟಗಾರರು ಉಪಸ್ಥಿತರಿದ್ದರು.

ಬೇಡಿಕೆಗಳು  
ಶೂನ್ಯ ಬಡ್ಡಿದರದಲ್ಲಿ ಮಹಿಳೆಯರ ಮೀನು ವ್ಯಾಪಾರಕ್ಕಾಗಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 50 ಸಾವಿರದಿಂದ 1 ಲಕ್ಷದವರೆಗೆ ಸಾಲ ಸೌಲಭ್ಯ ಒದಗಿಸಬೇಕು, 60 ವರ್ಷ ಮೇಲ್ಪಟ್ಟ ಎಲ್ಲಾ ಮೀನುಗಾರ ಮಹಿಳೆಯರಿಗೆ ತಿಂಗಲಿಗೆ ಕನಿಷ್ಠ 1,000 ಪಿಂಚಣಿ ವ್ಯವಸ್ಥೆ ಒದಗಿಸಬೇಕು, ಮತ್ಸಾéಶ್ರಯ ಯೋಜನೆಯಡಿ ವಸತಿ ನಿರ್ಮಿಸಲು ತಲಾ 2 ಲ.ರೂ. ಸಹಾಯಧನ ಒದಗಿಸಬೇಕು, ಮಳೆಗಾಲದ ಜೀವನ ನಿರ್ವಹಣೆಗಾಗಿ ಮೂರು ತಿಂಗಳ ಅವಧಿಗೆ ಮೀನುಗಾರರಿಗೆ ತಮಿಳುನಾಡು, ಪುದುಚೇರಿ ಮಾದರಿಯಲ್ಲಿ 5,500 ರೂ.ಗಳಂತೆ ಪರಿಹಾರ ಒದಗಿಸಬೇಕು, ಮೀನುಗಾರರಿಗೆ ಪ್ರತ್ಯೇಕವಾಗಿ ಉಚಿತ ಆರೋಗ್ಯ ವಿಮೆ ಒದಗಿಸಬೇಕು ಮೊದಲಾದ ಬೇಡಿಕೆಗಳನ್ನು ಉಡುಪಿ ತಾಲೂಕು ಮಹಿಳಾ ಹಸಿಮೀನು ಮಾರಾಟಗಾರರ ಸಂಘದ ವತಿಯಿಂದ ಸಲ್ಲಿಸಲಾಯಿತು. 

ಮೊನ್ನೆ ಪ್ರತಿಭಟನೆ, ಇಂದು ಸ್ವಾಗತ !
ಬಜೆಟ್‌ನಲ್ಲಿ ರಾಜ್ಯ ಸರಕಾರ ಮೀನುಗಾರರಿಗೆ ಯಾವುದೇ ಸವಲತ್ತು ನೀಡಿಲ್ಲ ಎಂದು ಜು.13ರಂದು ಮಹಿಳಾ ಮೀನು ಮಾರಟಗಾರರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿರುದ್ಧ ಫ‌ಲಕಗಳನ್ನು ಅಳವಡಿಸಿಕೊಂಡು ಮೀನುಮಾರುಕಟ್ಟೆಯಲ್ಲಿ ಪ್ರತಿಭಟನೆ ನಡೆಸಿದ್ದರು. 

ಜು.18ರಂದು  ಮೀನುಗಾರಿಕಾ ಸಚಿವರು ಮಾರುಕಟ್ಟೆಗೆ ಭೇಟಿ ನೀಡಿದಾಗ ಹೂಗುತ್ಛ ಹಿಡಿದು ಸ್ವಾಗತಿಸಿದರು. ತಮ್ಮ ನೋವು, ಅಹವಾಲುಗಳನ್ನು ಸಚಿವರಲ್ಲಿ ತೋಡಿಕೊಂಡರು. 

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.