ಪ್ರಶಸ್ತಿ ನಿರಾಕರಣೆಗೆ ಸಚಿವರ ಅಸಮಾಧಾನ
Team Udayavani, Nov 2, 2017, 9:12 AM IST
ಉಡುಪಿ: ಉಡುಪಿಯ ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ಡಾ| ರವೀಂದ್ರನಾಥ ಶಾನುಭಾಗ್ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿರುವುದಕ್ಕೆ ಸಚಿವ ಪ್ರಮೋದ್ ಮಧ್ವರಾಜ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು “ಸರಕಾರ ನೀಡಿದ ಪ್ರಶಸ್ತಿಯನ್ನು ತಿರಸ್ಕರಿಸುವುದು ಸರಿಯಲ್ಲ. ಇದು ಅವರ ಗುಣದ ಪ್ರತಿಬಿಂಬ’ ಎಂದರು. ಡಾ| ಶಾನುಭಾಗ್ ಅವರು ಪ್ರಶಸ್ತಿಗೆ ಅರ್ಜಿ ಹಾಕಿಲ್ಲ. ಆದರೆ ಇಲಾಖೆಗಳೇ ಮಾಹಿತಿ ಸಂಗ್ರಹಿಸಿದ್ದವು ಎಂದು ಅವರು ಹೇಳಿದರು.
“ನನಗೂ ಕಾಳಜಿ ಇದೆ’
“ಹಿರಿಯ ನಾಗರಿಕರ ಸಮಸ್ಯೆ ಕುರಿತಾಗಿ ಡಾ| ಶಾನುಭಾಗ್ ಅವರು ಹೇಳಿದ್ದೇ ಎಲ್ಲವೂ ಸರಿಯಲ್ಲ. ತಂದೆ – ತಾಯಿ ಮತ್ತು ಮಕ್ಕಳ ನಡುವೆ ಇರುವ ಭಿನ್ನಾಭಿಪ್ರಾಯಗಳನ್ನು ಅಷ್ಟು ಸುಲಭದಲ್ಲಿ ಸರಿಪಡಿಸಲು ಸಾಧ್ಯವಿಲ್ಲ. ಆಸ್ತಿ ವಿಚಾರ ಕಂದಾಯ ಇಲಾಖೆಗೆ ಸಂಬಂಧಪಟ್ಟಿದ್ದರೆ ಅದರ ಪರಿಹಾರಕ್ಕೆ ತುಂಬಾ ಸಮಯ ಬೇಕಾಗುತ್ತದೆ. 24 ಗಂಟೆಗಳಲ್ಲಿ ಪರಿಹರಿಸಿ, 12 ಗಂಟೆಯಲ್ಲಿ ಸರಿ ಮಾಡಿ ಎಂದರೆ ಮಾಡಲು ಸಾಧ್ಯವಿಲ್ಲ. ಕಂದಾಯ ಇಲಾಖೆಯಲ್ಲಿ 13-14 ವರ್ಷಗಳ ಕಡತಗಳು ಕೂಡ ಹಾಗೆಯೇ ಬಾಕಿ ಇವೆ. ತಾಳ್ಮೆ ಬೇಕು. ಡಾ| ಶಾನುಭಾಗ್ ಅವರ ಹೋರಾಟಕ್ಕೆ ನನ್ನ ಬೆಂಬಲ ಇದೆ. ನಮ್ಮಿಬ್ಬರ ಮನೋಭಾವ ಕೂಡ ಒಂದೇ. ಆದರೆ ಅವರ ಮಾರ್ಗ ವೇಗದ್ದು. ನಮ್ಮದು ಸ್ವಲ್ಪ ನಿಧಾನವಾದದ್ದು. ನಾನೋರ್ವ ಜನಪ್ರತಿನಿಧಿಯಾಗಿ ಎಲ್ಲರ ಪತ್ರಗಳಿಗೂ ಉತ್ತರ ನೀಡುತ್ತೇನೆ. ಸಮಸ್ಯೆಗಳಿಗೂ ಸ್ಪಂದಿಸು ತ್ತೇನೆ’ ಎಂದು ಹೇಳಿದರು.
ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜದ ಜತೆಯಲ್ಲಿ ಕನ್ನಡ ಧ್ವಜವನ್ನು ಕೂಡ ಹಾರಿಸಿರುವ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಮೋದ್ “ಮುಖ್ಯಮಂತ್ರಿಗಳ ನಿಲುವೇ ನನ್ನ ನಿಲುವು. ಅವರು ಬೆಂಗಳೂರಿನಲ್ಲಿ ಕನ್ನಡ ಧ್ವಜ ಹಾರಿಸಿದ್ದಾರೆ. ಜಿಲ್ಲೆಗೆ ಈ ಬಗ್ಗೆ ಆದೇಶ ಬಂದಿಲ್ಲ. ಬಂದಿದ್ದರೆ ಅಧಿಕಾರಿಗಳು ಇಲ್ಲಿಯೂ ಅದೇ ರೀತಿ ಮಾಡುತ್ತಿದ್ದರು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ