“ಕೇಂದ್ರದಿಂದ ಗರಿಷ್ಠ ಪ್ರಯೋಜನಕ್ಕೆ ಪ್ರಯತ್ನ’: ಸಚಿವ ಪರಷೋತ್ತಮ ರೂಪಾಲ
ಮಲ್ಪೆ ಬಂದರಿನಲ್ಲಿ ಮೀನುಗಾರರೊಂದಿಗೆ ಸಂವಾದ
Team Udayavani, Mar 20, 2023, 5:45 AM IST
ಮಲ್ಪೆ: ಮೀನುಗಾರರ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ ಕೇಂದ್ರ ಸರಕಾರದಿಂದ ಗರಿಷ್ಠ ಪ್ರಯೋಜನ ದೊರೆಯು ವಂತೆ ಮಾಡಲಾಗುವುದು ಎಂದು ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆಯ ಸಹಾಯಕ ಸಚಿವ ಪರಷೋತ್ತಮ ರೂಪಾಲ ಹೇಳಿದರು.
ಅವರು ರವಿವಾರ ಮಲ್ಪೆ ಮೀನುಗಾರ ಸಂಘದ ಸಮುದಾಯ ಭವನದಲ್ಲಿ ಮೀನುಗಾರರೊಂದಿಗೆ ಸಂವಾದ ನಡೆಸಿದರು.
ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಯಾಂತ್ರಿಕ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್, ಮೀನುಗಾರ ಕ್ರಿಯಾ ಸಮಿತಿಯ ಅಧ್ಯಕ್ಷ ಜಯ ಸಿ. ಕೋಟ್ಯಾನ್, ನಾಡದೋಣಿ ಮೀನುಗಾರ ಸಹಕಾರ ಸಂಘದ ಗೋಪಾಲ ಆರ್.ಕೆ. ಮೀನುಗಾರರ ವಿವಿಧ ಬೇಡಿಕೆಗಳ ಬಗ್ಗೆ ಸಚಿವರ ಗಮನ ಸೆಳೆದರು. ಹಳೆಯ ಬೋಟುಗಳ ಪುನರ್ ನಿರ್ಮಾಣಕ್ಕೆ ಸಹಾಯಧನ, ರಾಜ್ಯದ ಪ್ರತೀ ಜಿಲ್ಲೆಗೆ ಮೀನುಗಾರಿಕಾ ಕೈಗಾರಿಕಾ ವಲಯ ಗುರುತಿ ಸುವುದು, ಬೋಟ್ಗಳಿಗೆ ರೋಡ್ಸೆಸ್ ರದ್ದತಿ, ಇತರ ರಾಜ್ಯದ ಮೀನು ಗಾರರಿಂದ ಕಿರು ಕುಳ ತಡೆಗೆ ಅಂತಾರಾಜ್ಯ ಸಮ ನ್ವಯ ಸಮಿತಿ ರಚನೆ, ರಾಜ್ಯಕ್ಕೆ ಕನಿಷ್ಟ ಎರಡು ಸೀ ಆ್ಯಂಬುಲೆನ್ಸ್ ಅಗತ್ಯ ಎಂಬುದರ ಸಹಿತ ಹಲವು ಬೇಡಿಕೆಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು.
ಶಾಸಕ ರಘುಪತಿ ಭಟ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಕೆ. ಜಯಪ್ರಕಾಶ್ ಹೆಗ್ಡೆ, ಕಾಪು ಶಾಸಕ ಲಾಲಾಜಿ ಅರ್. ಮೆಂಡನ್, ಮೈಸೂರು ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ರಾಜ್ಯ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಸಲ್ಮಾ ಫಾಹಿಮ್, ಕೋಸ್ಟ್ಗಾರ್ಡ್ ಡಿಐಜಿ ಪಿ.ಕೆ. ಮಿಶ್ರಾ, ಮಿನುಗಾರಿಕೆ ಇಲಾಖೆ ನಿರ್ದೇಶಕ ರಾಮಾಚಾರ್ಯ, ಜಂಟಿ ನಿರ್ದೇಶಕ ಶಿವಕುಮಾರ್, ಮೂರು ಜಿಲ್ಲೆಗಳ ಮೀನುಗಾರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಮೀನು ಮಾರಾಟ ಫೆಡರೇಶನಿನ ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ ಸ್ವಾಗತಿಸಿ, ವಂದಿಸಿದರು.
ಮಲ್ಪೆಯಲ್ಲಿ ಸ್ವಾಗತ
ಸಾಗರ ಪರಿಕ್ರಮ ಉದ್ಘಾಟನೆ ಮತ್ತು ಮೀನುಗಾರರ ಜತೆಗೆ ಸಂವಾದದಲ್ಲಿ ಭಾಗವಹಿಸಲು ಆಗಮಿಸಿದ ಕೇಂದ್ರ ಸಚಿವ ಪರಷೋತ್ತಮ ರೂಪಾಲ ಅವರನ್ನು ಮಲ್ಪೆ ಮೀನುಗಾರರ ನೇತೃತ್ವದಲ್ಲಿ ಆರತಿ ಬೆಳಗಿ ಬರಮಾಡಿಕೊಳ್ಳಲಾಯಿತು.
ಕೋಸ್ಟ್ಗಾರ್ಡ್ನ ವಿಕ್ರಮ್ ಹಡಗಿನಲ್ಲಿ ಕಾರವಾರದಿಂದ ಆಗಮಿಸಿದ್ದ ಸಚಿವರು ಶನಿವಾರ ರಾತ್ರಿ ಮಲ್ಪೆ ಸಮೀಪ ಸಮುದ್ರದಲ್ಲೇ ತಂಗಿದ್ದರು. ರವಿವಾರ ಬೆಳಗ್ಗೆ ರಾಜರಾಜೇಶ್ವರೀ ಟೂರಿಸ್ಟ್ ಬೋಟಿನಲ್ಲಿ ಅವರನ್ನು ಬಂದರಿಗೆ ಕರೆತರಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ