ಬ್ರಹ್ಮಾವರ: ತೀರ್ಥಹಳ್ಳಿಗೆಂದು ತೆರಳಿದ ಯುವತಿ ನಾಪತ್ತೆ
Team Udayavani, Dec 10, 2022, 8:48 PM IST
ಬ್ರಹ್ಮಾವರ: ತೀರ್ಥಹಳ್ಳಿಯ ತಾಯಿ ಮನೆಗೆ ಹೋಗಿ ಬರುವುದಾಗಿ ಆರೂರಿನಿಂದ ತೆರಳಿದ ರಂಜಿತಾ (23) ನಾಪತ್ತೆಯಾಗಿದ್ದಾರೆ.
ಶಿವಪುರದ ಅಜ್ಜಿ ಮನೆಯಲ್ಲಿ ವಾಸವಿದ್ದು ಉಡುಪಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಓದಿದ್ದ ಅವರು ತೀರ್ಥಹಳ್ಳಿಯ ತನ್ನ ಮನೆಯಲ್ಲಿದ್ದರು. ಉದ್ಯೋಗ ಹುಡುಕುವ ಉದ್ದೇಶದಿಂದ ಎರಡು ವಾರದ ಹಿಂದೆ ಆರೂರಿನ ಸಂಬಂಧಿಕರ ಮನೆಗೆ ಬಂದಿದ್ದರು.
ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸದ ಬಗ್ಗೆ ಮಾತನಾಡಿ ಡಿ.11ರಿಂದ ಹೋಗುವುದಾಗಿ ಹೇಳಿದ್ದರು. ಡಿ. 9ರಂದು ತಾಯಿಮನೆ ತೀರ್ಥಹಳ್ಳಿಗೆ ಹೋಗಿ ಬರುವುದಾಗಿ ಕುಂಜಾಲು ಕ್ರಾಸ್ನಲ್ಲಿ ಬಸ್ ಹತ್ತಿದವರು ತೀರ್ಥಹಳ್ಳಿಗೆ ಹೋಗದೆ ಫೋನ್ ಸಂಪರ್ಕಕ್ಕೆ ಸಿಗದೆ ಕಾಣೆಯಾಗಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಗಿದು ಆತ್ಮಹತ್ಯೆ
ಬ್ರಹ್ಮಾವರ: ಮಟಪಾಡಿ ಗ್ರಾಮದ ಗೋಪಾಲಕೃಷ್ಣ ನಾಯರಿ (52) ಶುಕ್ರವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಮಾರು 10 ವರ್ಷಗಳ ಹಿಂದೆ ಪತ್ನಿಯನ್ನು ಬಿಟ್ಟು ತಾಯಿಯೊಂದಿಗೆ ವಾಸವಾಗಿದ್ದರು. ತಾಯಿ ಬೆಂಗಳೂರಿಗೆ ತೆರಳಿದ್ದ ಸಂದರ್ಭ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?