ವಿನಾಯಿತಿಯ ದುರುಪಯೋಗ ಸಲ್ಲದು: ಡಿಸಿ


Team Udayavani, Mar 28, 2020, 6:03 AM IST

ವಿನಾಯಿತಿಯ ದುರುಪಯೋಗ ಸಲ್ಲದು: ಡಿಸಿ

ಕುಂದಾಪುರ: ಅಗತ್ಯ ವಸ್ತುಗಳ ಖರೀದಿಗಾಗಿ ಓಡಾಟಕ್ಕೆ ನೀಡಿದ ವಿನಾಯಿತಿಯನ್ನು ದುರುಪಯೋಗಪಡಿಸಿಕೊಳ್ಳಬಾರದು. ಅದರ ಕಾರಣದಿಂದ ಪೇಟೆ ಸುತ್ತಾಡಬಾರದು. ಹಾಗೊಂದು ವೇಳೆ ಅನಗತ್ಯ ಓಡಾಟ ಕಂಡು ಬಂದರೆ ಕಠಿನ ಕಾನೂನು ಕ್ರಮ ಕೈಗೊಳ್ಳಲು ಸ್ಥಳೀಯವಾಗಿ ಅಧಿಕಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಹೇಳಿದರು.

ಅವರು ಶುಕ್ರವಾರ ಇಲ್ಲಿಗೆ ಆಗಮಿಸಿ ಕಾನೂನು ಸುವ್ಯವಸ್ಥೆ ಪರಿಶೀಲಿಸಿ, ಅಧಿಕಾರಿಗಳ ಜತೆ ಸಭೆ ನಡೆಸಿ ಮಾಧ್ಯಮದೊಂದಿಗೆ ಮಾತನಾಡಿದರು.

ದಿನಬಳಕೆ ವಸ್ತುಗಳ ಸಾಗಾಟಕ್ಕೆ ತೊಂದರೆ ಉಂಟು ಮಾಡಬಾರದು. ಈಗಾಗಲೇ ಎಪಿಎಂಸಿಯವರ ಜತೆಗೂ ಮಾತನಾಡಲಾಗಿದೆ. ಗ್ರಾಮಾಂತರ ಪ್ರದೇಶಕ್ಕೆ ಕೂಡಾ ದಿನ ಬಳಕೆ ವಸ್ತುಗಳ ಸಾಗಾಟ ನಡೆಯಲಿದೆ. ಜನ ದಿನನಿತ್ಯದ ವಸ್ತುಗಳ ಖರೀದಿಗೆ ಪ್ರತಿನಿತ್ಯ ಬರಬೇಕಾದ ಅಗತ್ಯವಿಲ್ಲ. ಒಂದು ವಾರಕ್ಕೆ ಬೇಕಾದ ಸಾಮಗ್ರಿಗಳನ್ನು ಕೊಂಡೊಯ್ಯಿರಿ. ಮೀನುಗಾರಿಕೆಗೆ ನಿಷೇಧ ಹೇರಿಲ್ಲ. ಜನಜಂಗುಳಿ ಸೇರುವ ಕಾರಣ ಮೀನು ಮಾರುಕಟ್ಟೆ ಮುಚ್ಚಲಾಗಿದೆ. ಮೀನು ಗಾರಿಕೆ ನಡೆಸುವುದಾದರೆ ಸಾಮಾಜಿಕ ಅಂತರ ಕಾಯ್ದುಕೊಂಡು ನಡೆಸಬಹುದು. ಯಾವ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಿರುವು ದಿಲ್ಲವೋ ಅಂತಹ ಅಂಗಡಿ ಮುಚ್ಚಲು ಆದೇಶ ನೀಡಲಾಗಿದೆ ಎಂದರು.

ಎಲ್ಲೆಡೆ ಸ್ಯಾನಿಟೈಸರ್‌ ಕೊರತೆ ಇರುವುದು ಕಂಡು ಬಂದಿದೆ. ಈ ಕುರಿತು ಡಿಸ್ಟಲರೀಸ್‌ ಕಂಪೆನಿ ಜತೆ ಮಾತನಾಡಿದ್ದು ಅವರು ಸ್ಯಾನಿಟೈಸರ್‌ ತಯಾರಿಸಿ ಕೊಡುವುದಾಗಿ ಹೇಳಿದ್ದು ಈಗಾಗಲೇ ತಯಾರಿಸಿದ ಮಾದರಿಯನ್ನು ನೀಡಿದ್ದು ಉಪಯೋಗಕ್ಕೆ ಅರ್ಹವಾಗಿದೆ. ಮಾಸ್ಕ್ ಕೊರತೆ ಎಲ್ಲೆಡೆ ಇದೆ. ಆರೋಗ್ಯವಂತರು ಮಾಸ್ಕ್ ಧರಿಸಬೇಕೆಂದಿಲ್ಲ ಎಂದ ಅವರು, ಮಾಸ್ಕ್ ಧರಿಸದ ಕಾರಣಕ್ಕಾಗಿ ಪೊಲೀಸರು ಲಾಠಿ ಏಟು ನೀಡುತ್ತಿರುವುದನ್ನು ಪ್ರಶ್ನಿಸಿದಾಗ, ಈ ಕುರಿತು ಈಗಾಗಲೇ ಎಸ್‌ಪಿ ಅವರ ಜತೆ ಮಾತನಾಡಿದ್ದೇನೆ. ಮಾಸ್ಕ್ ಹಾಕದ ಕಾರಣಕ್ಕಾಗಿ ಹೊಡೆಯುವಂತಿಲ್ಲ. ಆದರೆ ಸರದಿ ಸಾಲಿನಲ್ಲಿ ನಿಂತಿದ್ದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜತೆಗೆ ಮಾಸ್ಕ್ ಧರಿಸಿದ್ದರೆ ಉತ್ತಮ ಎಂದರು.

ಸಹಾಯಕ ಕಮಿಷನರ್‌ ಕೆ. ರಾಜು ಆವರು ಉಪಸ್ಥಿತರಿದ್ದರು. ಶಾಸ್ತ್ರಿ ಸರ್ಕಲ್‌ನಲ್ಲಿ ಮೆಡಿಕಲ್‌ ಶಾಪ್‌ಗೆ ಭೇಟಿ ನೀಡಿದ ಡಿಸಿ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು. ಮಿನಿ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

ನಿಯಮ ಪಾಲಿಸಿ
ಹೋಮ್‌ ಕ್ವಾರಂಟೈನ್‌ಗೆ ಒಳಗಾದವರು ಪೇಟೆ ಸುತ್ತಾಡುತ್ತಾ ಕಾನೂನು ಉಲ್ಲಂಘನೆ ಮಾಡಿದ ಮೂವರ ಮೇಲೆ ಕಠಿನ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಅವರು ಸೂಚಿತ ನಿರ್ದಿಷ್ಟ ಅವಧಿ ತಿರುಗಾಡುವಂತಿಲ್ಲ. ಸರಕಾರದಿಂದ ಕೂಡಾ ಈ ಕುರಿತು ಸೂಚನೆ ಬಂದಿದ್ದು ಕಾನೂನು ಪಾಲನೆ ಮಾಡದವರಿಗೆ ಲಾಠಿ ಏಟಷ್ಟೇ ಅಲ್ಲ ಜೈಲಿಗೆ ಕಳುಹಿಸುವ ಕೆಲಸವೂ ನಡೆಯಲಿದೆ. ಆದ್ದರಿಂದ ತುರ್ತು ಕಾರ್ಯಕ್ಕಾಗಿ ಮಾತ್ರ ಮನೆಬಿಟ್ಟು ಹೊರಬನ್ನಿ.
-ಜಿ.ಜಗದೀಶ್‌,ಜಿಲ್ಲಾಧಿಕಾರಿ

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.