ನನ್ನ ಸೋಲಿಗೆ ಇಂದಿರಾ ಕಾರಣ


Team Udayavani, Mar 31, 2018, 6:30 AM IST

MK-vijaya-Kumar-BJP.jpg

ವಕೀಲರೂ ಆಗಿರುವ ಎಂ.ಕೆ. ವಿಜಯ ಕುಮಾರ್‌ 1972ರಿಂದ ರಾಜಕೀಯದಲ್ಲಿ ತೊಡಗಿಕೊಂಡವರು. ಜನತಾ ಪಾರ್ಟಿ ಹಾಗೂ ಬಿಜೆಪಿ ಸೇರಿದಂತೆ ನಾಲ್ಕು ಬಾರಿ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅವರು ತನ್ನ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ರಾಜಕೀಯದಲ್ಲಾದ ಬದಲಾವಣೆಗಳು?
    ಕೆಲವು ವರ್ಷಗಳ ಹಿಂದೆ ವಕೀಲರು, ವೈದ್ಯರು, ಪ್ರೊಫೆಸರ್‌ಗಳು -ಹೀಗೆ ವಿವಿಧ ವೃತ್ತಿಪರರೇ ರಾಜಕೀಯದಲ್ಲಿ ತೊಡಗಿಕೊಳ್ಳುತ್ತಿದ್ದರು. ಆದರೆ ರಾಜಕೀಯ ಇಂದು ಕಸುಬಾಗಿದೆ. ಹಿಂದೆ ಖರ್ಚು ಕಡಿಮೆ ಇತ್ತು. ಈಗ ನೀರಿನಂತೆ ಹಣ ವೆಚ್ಚ ಮಾಡಬೇಕಾಗುತ್ತದೆ.

ನಿಮ್ಮ ಸೋಲಿಗೆ ಕಾರಣ?
    ಅಂದು ಇಂದಿರಾ ಗಾಂಧಿ ಹೆಸರು ದೇಶದಲ್ಲಿ ಜೋರಾಗಿತ್ತು. ನನ್ನ ಸೋಲಿಗೆ ಅವರೇ ಕಾರಣ. ಭೂಮಸೂದೆ ಉಳಿಯುವುದಿಲ್ಲ ಎನ್ನುವ ಭಾವನೆ ಜನರಲ್ಲಿತ್ತು. ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷ ಬಂದರೆ ಭೂಮಾಲಕನಿಗೆ ಭೂಮಿ ವಾಪಸ್‌ ನೀಡಬೇಕಾಗುತ್ತದೆ ಎನ್ನುವ ಭ್ರಮೆಯನ್ನು ಜನರಲ್ಲಿ ಹುಟ್ಟಿಸಿದ್ದರು. ಅವಿದ್ಯಾವಂತರೂ ಆ ಕಾಲದಲ್ಲಿ ಹೆಚ್ಚಾಗಿದ್ದರು. ಮೊಲಿ ಜಯ ಗಳಿಸಿರುವುದೂ ಕೂಡ ಇಂದಿರಾ ಹೆಸರಿನಿಂದ. ಶಿವರಾಮ ಕಾರಂತರು, ಪ್ರೊ| ಅಡಿಗರಂತಹ ದಿಗ್ಗಜರನ್ನೇ ಜನ ಸೋಲಿಸಿದ್ದಾರೆ.

ಈ ಬಾರಿ ಚುನಾವಣೆ ಬಗ್ಗೆ?
    ರಾಜ್ಯದಲ್ಲಿ ಬಿಜೆಪಿ ಬರಲಿದೆ. ಕಾಂಗ್ರೆಸ್‌ನಂತಹ ಕೆಟ್ಟ ಸರಕಾರ ಬೇಡ ಎನ್ನುವ ಭಾವನೆ ಜನರಿಗೆ ಬಂದಿದೆ. ಸಣ್ಣ ಕಚೇರಿಗಳಲ್ಲೂ ಭ್ರಷ್ಟಾಚಾರ ತುಂಬಿದೆ. ಲೋಕಾಯುಕ್ತರಿಗೇ ಚೂರಿ ಹಾಕುವ ಸಂದರ್ಭ ಬಂದಿದೆ ಎಂದಾದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗಿದೆ ಎಂದು ಆಲೋಚಿಸಬೇಕು. ಪ್ರಾಮಾಣಿಕ ನಾಯಕರಿಗೆ ಕಾಂಗ್ರೆಸ್‌ನಲ್ಲಿ ಜಾಗವಿಲ್ಲ. ಅವರಿಗೆ ದೇಶ, ರಾಜ್ಯ ಯಾವುದೂ ಬೇಡ. ಪ್ರಜಾಪ್ರಭುತ್ವವೇ ಇಲ್ಲದ ಪಕ್ಷ ಅದು.

ದೇಶದ ರಾಜಕೀಯದ ಬಗ್ಗೆ?
     ದೇಶದ ರಾಜಕೀಯದಲ್ಲಿ ಬದಲಾವಣೆಯಾಗುತ್ತಿದೆ. ನರೇಂದ್ರ ಮೋದಿ ವಿಶ್ವ ಮೆಚ್ಚಿದ ನಾಯಕ. ತಳಮಟ್ಟದಿಂದ ಅಭಿವೃದ್ಧಿಯಾಗುತ್ತಿದೆ. ವಂಶಾಡಳಿತ ರಾಜಕೀಯ ನಶಿಸಿದೆ.

ಕಾರ್ಕಳ ಕ್ಷೇತ್ರದಲ್ಲಿ ಈ ಬಾರಿ?
     ಬಿಜೆಪಿ ಜಯಗಳಿಸಲಿದೆ. ಶಾಸಕರು ಪ್ರತೀ ಹಳ್ಳಿಯಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದಾರೆ. ಮಾದರಿ ಕೆಲಸ ನಡೆದಿದೆ. ಜನರಿಗೆ ಶಾಸಕರ ಮೇಲೆ ಪ್ರೀತಿ, ಭರವಸೆ ಇದೆ. ಯಾವುದೇ ಅನರ್ಹತೆಯ ಕೆಲಸ ಮಾಡಿಲ್ಲ.

– ಜಿವೇಂದ್ರ ಶೆಟ್ಟಿ

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.