ಎಂಎಂಎನ್ಎಲ್: ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ
Team Udayavani, Nov 3, 2019, 5:09 AM IST
ಉಡುಪಿ: ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿ. ದೀಪಾವಳಿಯ ಅಂಗವಾಗಿ ಸಂಸ್ಥೆಯ ಸಿಬಂದಿಗೆ ನಡೆಸಿದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಶನಿವಾರ ಮಣಿಪಾಲದ ಗೀತಾ ಮಂದಿರದಲ್ಲಿ ನಡೆಯಿತು. ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿ.ನ ಆಡಳಿತ ನಿರ್ದೇಶಕ ಟಿ. ಸತೀಶ್ ಯು.ಪೈ ಅವರು ವಿಜೇತರಿಗೆ ಬಹುಮಾನ ವಿತರಿಸಿ, ಶುಭಹಾರೈಸಿದರು.
ಮಣಿಪಾಲ ಮೀಡಿಯಾ ನೆಟ್ವರ್ಕ್ ಲಿ.ನ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿನೋದ್ ಕುಮಾರ್ ಮಾತನಾಡಿ, ಸಂಸ್ಥೆಯ ವತಿಯಿಂದ ಆಯೋಜಿಸುವ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಆ ಮೂಲಕ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಅವಕಾಶ ಸಿಗುತ್ತದೆ. ದೀಪಾವಳಿ ಅಂಗವಾಗಿ ನಡೆದ ಮಹಡಿ ಅಲಂಕರಣದಲ್ಲಿ ಎಂಎಂಎನ್ಎಲ್ ತಂಡದ ಪರಿಕಲ್ಪನೆಯಲ್ಲಿ ಮೂಡಿ ಬಂದ ಹಳ್ಳಿಮನೆ ತುಂಬ ಸುಂದರವಾಗಿತ್ತು.
ಇದೇ ಮೊದಲ ಬಾರಿ ಎಂಎಂಎನ್ಎಲ್ ತಂಡ ಒಂದಾಗಿ ಕೆಲಸ ಮಾಡಿರುವುದರಿಂದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದರು. ಎಂಎಂಎನ್ಎಲ್ ಗ್ರೂಪ್ ಸಂಸ್ಥೆಗಳ ಸಿಬಂದಿಗೆ ದೀಪಾವಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಎಂಎಂಎನ್ಎಲ್ ತಂಡ ಪ್ರಥಮ ಸ್ಥಾನ ಪಡೆದಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್