ಮೊವಾಡಿ – ನಾಡ ಸೇತುವೆ: 2020ರ ಮೇ ಒಳಗೆ ಪೂರ್ಣ


Team Udayavani, Oct 22, 2019, 5:55 AM IST

2110KDPP1

ಕುಂದಾಪುರ: ನಾಡದಿಂದ ತ್ರಾಸಿಗೆ ಸಂಪರ್ಕಿಸುವ ಮೊವಾಡಿ ಬಳಿ ಸೌಪರ್ಣಿಕಾ ನದಿಗೆ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿ ಭರದಿಂದ ಸಾಗಿದ್ದು, ಮುಂದಿನ ವರ್ಷದ ಮೇಯೊಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ದಿಂದ ಮಂಜೂರಾದ 9.28 ಕೋ.ರೂ. ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದೆ.

ತ್ರಾಸಿ ಹಾಗೂ ನಾಡ ಗ್ರಾಮಗಳನ್ನು ಬೆಸೆಯುವ ಸಂಪರ್ಕ ಸೇತುವೆಗೆ ಕಳೆದ ವರ್ಷ ಶಿಲಾನ್ಯಾಸ ನೆರವೇರಿಸಿದ್ದರೂ, ಕಾಮಗಾರಿ ಈ ವರ್ಷದ ಮಾರ್ಚ್‌ನಲ್ಲಿ ಆರಂಭಗೊಂಡಿತ್ತು. ಮಳೆ ಹಾಗೂ ಮರಳು ಸಮಸ್ಯೆಯಿಂದಾಗಿ ಕಾಮಗಾರಿಗೆ ಸ್ವಲ್ಪ ಮಟ್ಟಿಗೆ ತೊಡಕಾಗಿದ್ದರೂ, ಈಗ ಮತ್ತೆ ಕಾಮಗಾರಿ ಆರಂಭಗೊಂಡಿದೆ. 2020 ರ ಮೇಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಗಡುವು ನೀಡಲಾಗಿದೆ.

150 ಮೀಟರ್‌ ಉದ್ದ
ಸೌಪರ್ಣಿಕಾ ನದಿಗೆ ಅಡ್ಡಲಾಗಿ ನಿರ್ಮಿಸುವ‌ ಈ ಸೇತುವೆಯ ಉದ್ದ 150 ಮೀ. ಇರಲಿದ್ದು, 8.5 ಮೀ. ಅಗಲ, ಫುಟ್‌ಪಾತ್‌ ಸೇರಿದರೆ 10.5 ಮೀ. ಅಗಲವಿರಲಿದೆ. ಈ ಕಾಮಗಾರಿಗೆ ಕೋಣಿಯ ಸೈಂಟ್‌ ಆಂಥೋನಿ ಕನ್ಸಸ್ಟ್ರಕ್ಷನ್ಸ್‌ ಗುತ್ತಿಗೆದಾರರಾಗಿದ್ದಾರೆ. ಉಡುಪಿ, ಕಾರ್ಕಳ, ಈ ಮೊವಾಡಿ – ನಾಡ ಸೇತುವೆ, ಭಟ್ಕಳದಲ್ಲಿ ಒಟ್ಟು 9 ಸೇತುವೆಗಳಿಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ 42.57 ಕೋ.ರೂ. ಮಂಜೂರಾಗಿದ್ದು, ಈ ಎಲ್ಲ ಸೇತುವೆ ಕಾಮಗಾರಿ ಸೈಂಟ್‌ ಆಂಥೋನಿ ಕನ್‌ಸ್ಟ್ರಕ್ಷನ್ಸ್‌ಗೆ ನೀಡಲಾಗಿದೆ.

ರಸ್ತೆ ದುರಸ್ತಿಗೆ ಮನವಿ
ಈ ಸೇತುವೆ ಕಾಮಗಾರಿ ಮುಗಿದ ಬಳಿಕ ಇದನ್ನು ಸಂಪರ್ಕಿಸುವ ರಸ್ತೆಗಳು ಹದಗೆಟ್ಟು ಹೋಗಿದ್ದು, ಅದನ್ನು ಕೂಡ ದುರಸ್ತಿ ಮಾಡಿದರೆ ಅನುಕೂಲವಾಗಲಿದೆ. ಸುಮಾರು 300 ಕ್ಕೂ ಹೆಚ್ಚು ಮನೆಗಳ ಜನ ಈ ಸೇತುವೆಯನ್ನೇ ಅವಲಂಬಿಸಿದ್ದಾರೆ. ಹಾಗಾಗಿ ಸಂಪರ್ಕ ರಸ್ತೆಯ ಡಾಮರೀಕರಣ ಆಗಲಿ ಎನ್ನುವುದು ಸ್ಥಳೀಯರ ಆಗ್ರಹ.

ಹತ್ತಿರದ ಮಾರ್ಗ
ನಾಡ, ಹಡವು, ಮೊವಾಡಿಯ ಜನರಿಗೆ ತ್ರಾಸಿಗೆ ಬಂದು ಕುಂದಾಪುರಕ್ಕೆ ತೆರಳಲು ಈ ಸೇತುವೆಯಾದರೆ ಬಹಳಷ್ಟು ಅನುಕೂಲವಾಗಲಿದೆ. ಇದಲ್ಲದೆ ಮೊವಾಡಿಯ ನಿವಾಸಿಗಳಿಗೆ ತ್ರಾಸಿ ಅಥವಾ ಮುಳ್ಳಿಕಟ್ಟೆ ಪೇಟೆಗೆ ಬರಬೇಕಾದರೆ ಕನಿಷ್ಠ 3 ಕಿ.ಮೀ. ದೂರವಿದೆ. ಆದರೆ ಸೇತುವೆಯಾದರೆ ನಾಡ ಪೇಟೆಗಿರುವ ಅಂತರ ಕೇವಲ 1 ಕಿ.ಮೀ. ಮಾತ್ರ. ಮೊವಾಡಿಯಲ್ಲಿ ಕ್ರಿಶ್ಚಿಯನ್‌ ಸಮುದಾಯದವರು ಹೆಚ್ಚಿರುವುದರಿಂದ ಪಡುಕೋಣೆ ಇಗರ್ಜಿಗೆ ಹೋಗಲು ಕೂಡ ಇದು ಹತ್ತಿರದ ಮಾರ್ಗವಾಗಿದೆ.

ಬಹು ವರ್ಷದ ಬೇಡಿಕೆ
ಮೊವಾಡಿಯಿಂದ ನಾಡ, ಹಡವು, ಪಡುಕೋಣೆ ಭಾಗಕ್ಕೆ ತೆರಳುವ ಜನರ ಬಹು ಕಾಲದ ಬೇಡಿಕೆಯಾಗಿತ್ತು. ಈಗ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಇಷ್ಟೊತ್ತಿಗಾಗಲೇ ಕಾಮಗಾರಿ ಮುಗಿಯಬೇಕಿತ್ತು. ಈ ಭಾಗದ ಸಾವಿರಾರು ಮಂದಿಗೆ ಈ ಸೇತುವೆಯಾದರೆ ಅನುಕೂಲವಾಗಲಿದೆ. ಆದಷ್ಟು ಬೇಗ ಕಾಮಗಾರಿ ಮುಗಿಸಿ, ಸಂಚಾರಕ್ಕೆ ಮುಕ್ತವಾಗಲಿ.
-ಅನಂತ್‌ ಮೊವಾಡಿ,
ಮಾಜಿ ಜಿ.ಪಂ.ಸದಸ್ಯ,ಸ್ಥಳೀಯರು

ಮುಂದಿನ ವರ್ಷ ಪೂರ್ಣ
ಈಗಾಗಲೇ ಕಾಮಗಾರಿ ನಡೆಯುತ್ತಿದೆ. ಈ ಬಾರಿ ಮಳೆ ಪ್ರಮಾಣ ಹೆಚ್ಚಿದ್ದು, ನದಿಯಲ್ಲಿ ನೀರು ಕೂಡ ಹೆಚ್ಚಿದ್ದುದರಿಂದ ಕಾಮಗಾರಿ ಸ್ವಲ್ಪ ವಿಳಂಬವಾಗಿದೆ. ಆದರೆ ಮುಂದಿನ ವರ್ಷದ ಮೇಯೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಈಗಾಗಲೇ ಶೇ. 50 ಭಾಗದಷ್ಟು ಕಾಮಗಾರಿ ಆಗಿದೆ. 150 ಮೀ. ಉದ್ದದ ಸೇತುವೆ ಇದಾಗಿದ್ದು, ಒಟ್ಟು10.5 ಮೀ. ಅಗಲವಿರಲಿದೆ. ಎರಡೂ ಬದಿ ತಲಾ 70 ಮೀ. ವರೆಗೆ ರಸ್ತೆ ಡಾಮರೀಕರಣ ಮಾಡಿಕೊಡಲಾಗುವುದು. ಅಲ್ಲಿಂದ ಮುಂದಕ್ಕೆ ನಮ್ಮ ರಸ್ತೆ -ನಮ್ಮ ಗ್ರಾಮ ಯೋಜನೆಯಡಿ ರಸ್ತೆ ಡಾಮರೀಕರಣ ಮಾಡಬಹುದು.
-ಮಂಜುನಾಥ್‌,
ಎಕ್ಸಿಕ್ಯೂಟಿವ್‌ ಇಂಜಿನಿಯರ್‌,ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.