“ಆಧುನಿಕತೆ ಮುಂದುವರಿದರೂ ಅಸ್ತಿತ್ವ ಉಳಿಸಿಕೊಂಡ ಆಕಾಶವಾಣಿ’
Team Udayavani, Feb 16, 2019, 12:45 AM IST
ಶಿರ್ವ: ಪ್ರಸಾರ ಭಾರತಿ ಭಾರತೀಯ ಸಾರ್ವಜನಿಕ ಪ್ರಸಾರ ಸೇವೆ, ಆಕಾಶವಾಣಿ ಮಂಗಳೂರು, ರೋಟರಿ ಕ್ಲಬ್ ಶಿರ್ವ ಹಾಗೂ ಉಡುಪಿ ಜಿಲ್ಲಾ ಕೃಷಿಕ ಸಂಘದ ಸಹಯೋಗದಲ್ಲಿ ಬಾನುಲಿ ರೈತ ದಿನಾಚರಣೆಯು ಶಿರ್ವ ರೋಟರಿ ಅಧ್ಯಕ್ಷ ದಯಾನಂದ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಬಂಟಕಲ್ಲು ರೋಟರಿ ಸಭಾಂಗಣದಲ್ಲಿ ನಡೆಯಿತು.
ಉಡುಪಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ|ಎಚ್.ಕೆಂಪೇಗೌಡ ಕಾರ್ಯಕ್ರಮ ಉದ್ಘಾಟಿಸಿ ಕೃಷಿ ಮಾಹಿತಿಯನ್ನು ರೈತರಿಗೆ ತಲುಪಿಸಲು ಹಲವು ಸಂಘ ಸಂಸ್ಥೆ, ಇಲಾಖೆಗಳು ಪ್ರಯತ್ನ ನಡೆಸುತ್ತಿವೆ. ಯಾವುದೇ ಇಲಾಖೆ ಸುಲಭವಾಗಿ ರೈತರಿಗೆ ನೀಡ ಲಾಗದ ಮಾಹಿತಿಯನ್ನು ಆಕಾಶವಾಣಿ ರೇಡಿಯೋ ಕಾರ್ಯಕ್ರಮದ ಮೂಲಕ ಬಿತ್ತರಿಸುತ್ತಿದೆ.ಆಧುನಿಕತೆ ಮುಂದುವರಿ ದರೂ ಎಲ್ಲ ವರ್ಗದ ಜನರು ರೇಡಿಯೋ ಕಾರ್ಯಕ್ರಮ ಕೇಳುವ ಮೂಲಕ ಆಕಾಶವಾಣಿ ಮಹತ್ತರ ಪಾತ್ರ ವಹಿಸುತ್ತಿದ್ದು ತನ್ನ ಅಸ್ತಿತ್ವ ಉಳಿಸಿಕೊಂಡಿದೆ ಎಂದರು.
ಮಂಗಳೂರು ಆಕಾಶವಾಣಿಯ ಸಹಾಯಕ ನಿರ್ದೇಶಕಿ ಎಸ್.ಉಷಾಲತಾ ರೈತರು ಬಾನುಲಿ ಕಾರ್ಯಕ್ರಮದಿಂದ ಕೃಷಿ ಸಂಬಂಧಿತ ಮಾಹಿತಿ ಪಡೆದುಕೊಂಡು ಕೃಷಿಯಲ್ಲಿ ತೊಡಗಿಸಿಕೊಳ್ಳಲು ಪ್ರೇರಿತ ರಾಗಿದ್ದಾರೆ. ಆಕಾಶವಾಣಿ ಹೊಸ ತಂತ್ರಜ್ಞಾನ ದೊಂದಿಗೆ ರಾಸಾಯನಿಕ ಕೃಷಿಯ ಬದಲು ಸಾವಯವ ಕೃಷಿಯ ಧ್ವನಿಯಾಗಿ ಪ್ರಚುರ ಪಡಿಸಲು ಪ್ರಯತ್ನಿಸುತ್ತಿದ್ದು ವಿವಿಧ ಇಲಾಖೆಗಳ ಮೂಲಕ ರೈತರಿಗೆ ಮಾಹಿತಿ ನೀಡುತ್ತಿದೆ ಎಂದರು.
ಮಂಗಳೂರು ಸಾವಯವ ಕೃಷಿಕ ಗ್ರಾಹಕ ಬಳಗದ ಅಧ್ಯಕ್ಷ ಅಡೂxರು ಕೃಷ್ಣ ರಾವ್, ಮುಖ್ಯ ಅತಿಥಿ ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಪ್ರಗತಿಪರ ಕೃಷಿಕರು ಭಾಗವಹಿಸಿದ್ದರು. ಕಾರ್ಯಕ್ರಮ ಸಮನ್ವಯಾಧಿಕಾರಿ ಕಾನ್ಸೆಪಾr ಫೆರ್ನಾಂಡಿಸ್ ಸ್ವಾಗತಿಸಿದರು. ಆಕಾಶವಾಣಿ ಕೃಷಿ ವಿಭಾಗದ ಮುಖ್ಯಸ್ಥ ಶ್ಯಾಮ್ ಪ್ರಸಾದ್ ನಿರೂಪಿಸಿ, ಪ್ರಗತಿಪರ ಕೃಷಿಕ ರಾಘವೇಂದ್ರ ನಾಯಕ್ ಶಿರ್ವ ವಂದಿಸಿದರು.ಬಳಿಕ ಕೃಷಿಕರ ಆದಾಯ ಭದ್ರತೆಗೆ ಸಾವಯವ ಕೃಷಿ ಪ್ರಧಾನ ವಿಷಯವಾಗಿ ತಜ್ಞರ ಮಾರ್ಗದರ್ಶನದಲ್ಲಿ ಐದು ವಿಚಾರ ಗೋಷ್ಠಿ ನಡೆಯಿತು.
ತರಕಾರಿ ಬೆಳೆಗಳಲ್ಲಿ ಅಧಿಕ ಉತ್ಪಾದನಾ ತಾಂತ್ರಿಕತೆಯ ಬಗ್ಗೆ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಮನ್ವಯ ಅಧಿಕಾರಿ ಡಾ| ಬಿ. ಧನಂಜಯ, ದೇಶಿ ಹಸು ತಳಿಗಳು, ಗೋ ಉತ್ಪನ್ನಗಳ ಬಗ್ಗೆ ದೇಶಿ ಹಸು ಸಾಕಣೆದಾರ ನಾಗೇಶ ಪೈ ಕುಕ್ಕೆಹಳ್ಳಿ, ಬಾಳೆ ಬೆಳೆಯಲ್ಲಿ ಅಧಿಕ ಉತ್ಪಾದನಾ ತಾಂತ್ರಿಕತೆ ಬಗ್ಗೆ ಬ್ರಹ್ಮಾವರ ಕೃಷಿ ಉತ್ಪಾದನಾ ಕೇಂದ್ರದ ಎಚ್.ಎಸ್. ಚೈತನ್ಯ, ಹಣ್ಣುಗಳ ಸಂರಕ್ಷಣೆ, ಮೌಲ್ಯವರ್ಧನೆಯ ಬಗ್ಗೆ ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿ ಡಾ|ಸರಿತಾ ಹೆಗ್ಡೆ, ಕಾಡು ಪ್ರಾಣಿಗಳಿಂದ ಬೆಳೆ ರಕ್ಷಣೆ ಬಗ್ಗೆ ಕಾಸರಗೋಡು ಮುಳ್ಳೇರಿಯಾ ಕೆಆರ್ಎಸಿ ಅಗ್ರಿ ಬಿಸೆನೆಸ್ ಸೆಂಟರ್ನ ರಾಜಗೋಪಾಲ್ ಕೈಪಂಗಳ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ