ಮೋದಿ ಸಾಧನೆ ಮನೆ ಮನೆಗೆ ತಿಳಿಸಿ: ಶೋಭಾ
Team Udayavani, Feb 25, 2019, 1:00 AM IST
ಕುಂದಾಪುರ: ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ದಕ್ಷ ನಾಯಕತ್ವದ ಸರಕಾರದ ಸಾಧನೆಯನ್ನು ಮನೆ ಮನೆಗೆ ತಿಳಿಸಿ ಹೇಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ರವಿವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಮಹಾಸಂಪರ್ಕ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
ರವಿವಾರ ದೇಶಾದ್ಯಂತ ಮಹಾಸಂಪರ್ಕ ಅಭಿಯಾನ ನಡೆಯುತ್ತಿದೆ. ಮಾ.26ರಂದು ಮಹಿಳಾ ಮೋರ್ಚಾ ವತಿಯಿಂದ ದೇಶಾದ್ಯಂತ ಸಂಜೆ 7 ಗಂಟೆಗೆ ಕಮಲಜ್ಯೋತಿ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸರಕಾರದ ಉಜ್ವಲ ಹಾಗೂ ವಿವಿಧ ಯೋಜನೆಗಳಲ್ಲಿ ಫಲಾನುಭವಿ ಮಹಿಳೆಯರು ಒಂದೆಡೆ ಸೇರಿ ಕಮಲದ ಆಕಾರದಲ್ಲಿ ದೀಪ ಬೆಳಗಿಸುವ ಕಾರ್ಯಕ್ರಮ ಇದಾಗಿದೆ. ಮಾ.28ರಂದು ಮೋದಿ ಅವರು ಕಾರ್ಯಕರ್ತರ ಜತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಮಾ.2ರಂದು ಯುವ ಮೋರ್ಚಾ ವತಿಯಿಂದ ಬೈಕ್ ರ್ಯಾಲಿ ನಡೆಯಲಿದೆ.
ಈಗಾಗಲೇ ನನ್ನ ಮನೆ ಬಿಜೆಪಿ ಮನೆ ಎಂಬ ಅಭಿಯಾನ ಯಶಸ್ವಿಯಾಗಿದೆ. ಈ ಧ್ವಜ ಚುನಾವಣೆ ಮುಗಿಯುವವರೆಗೆ ಆಯಾ ಮನೆಗಳಲ್ಲಿ ಹಾರುತ್ತಿರಬೇಕು ಎಂದರು.
ಪಕ್ಷದ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಪಕ್ಷದ ಎಲ್ಲ ಕಾರ್ಯಕ್ರಮಗಳೂ ತಾಲೂಕಿನಾದ್ಯಂತ ನಡೆಯುತ್ತಿವೆ. ಮಹಾಸಂಪರ್ಕ ಅಭಿಯಾನ ಕೂಡಾ ನಡೆಯುತ್ತಿದ್ದು ಕಾರ್ಯಕರ್ತರು ಉತ್ಸಾಹದಲ್ಲಿ ಭಾಗಿಗಳಾಗಿದ್ದಾರೆ ಎಂದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕಿರಣ್ ಕೊಡ್ಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಧ್ಯಾ ರಮೇಶ್, ಜಿಲ್ಲಾ ಕಾರ್ಯದರ್ಶಿ ಗಣಪತಿ ಶ್ರೀಯಾನ್, ಅಲ್ವಿನ್ ಡಿ’ಸೋಜಾ, ಜಾರಿಸ್ ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಶಂಕರ್ ಅಂಕದಕಟ್ಟೆ ಸ್ವಾಗತಿಸಿ, ಭಾಸ್ಕರ ಬಿಲ್ಲವ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್