ಮಂಗನ ಕಾಯಿಲೆ: ಕಾರ್ಕಳದಲ್ಲಿ ಒಟ್ಟು 2 ಪ್ರಕರಣ  


Team Udayavani, Feb 15, 2019, 12:30 AM IST

monkey-disease-ddd.jpg

ವಿಶೇಷ ವರದಿ ಕಾರ್ಕಳ: ಇತ್ತೀಚೆಗೆ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಸದ್ದು ಮಾಡಿದ ಮಂಗನ ಕಾಯಿಲೆ ಭೀತಿ (ಕೆಎಫ್ಡಿ) ಜನರ ನೆಮ್ಮದಿಯನ್ನೇ ಕೆಡಿಸಿದೆ. ಉಣ್ಣೆ (ಉಣುಗು)ಗಳಿಂದ ಈ ಕಾಯಿಲೆ ಹರಡುತ್ತಿದ್ದರೂ ಮಂಗಗಳು ಸತ್ತ ಸುದ್ದಿ ಕೇಳಿ ಜನ ಮತ್ತಷ್ಟು ಆತಂಕಕ್ಕೀಡಾಗುತ್ತಾರೆ.

ಜ. 10ರ ಬಳಿಕ ಇಲ್ಲಿವರೆಗೆ ಕಾರ್ಕಳ ತಾಲೂಕು ಒಂದರಲ್ಲೇ ಒಟ್ಟು 52 ಮಂಗಗಳು ಮೃತಪಟ್ಟಿವೆ. ವಯೋಸಹಜವಾಗಿ ಮಂಗ ಗಳು ಸಾಯುತ್ತಿದ್ದರೂ, ಕಾಯಿಲೆಯ ಗುಮ್ಮದಿಂದ ಜನರು ಭಯಭೀತ ಗೊಂಡಿದ್ದಾರೆ. ಕೆಲವೊಂದು ಮಂಗಗಳು ವಾಹನ ಅಪಘಾತ, ವಿದ್ಯುತ್‌ ಶಾಕ್‌ನಿಂದಲೂ ಮೃತಪಟ್ಟಿವೆ.ಸತ್ತ 52 ಮಂಗಗಳ ಪೈಕಿ 2 ಮಂಗಗಳ ಸ್ಯಾಂಪಲ್‌ನಲ್ಲಿ  ಸೋಂಕು ದೃಢಪಟ್ಟಿದೆ. ಬಹುತೇಕ ಮಂಗಗಳು ಕೊಳೆತು ಮರಣೋತ್ತರ ಪರೀಕ್ಷೆ  ನಡೆಸಲಾಗದ ಕಾರಣ 52ರಲ್ಲಿ  19 ಮಂಗಗಳ ಮರಣೋತ್ತರ ಪರೀಕ್ಷೆ ಮಾತ್ರ ನಡೆಸಲಾಗಿದೆ. ಸ್ಯಾಂಪಲ್‌ ಅನ್ನು ಶಿವಮೊಗ್ಗ ವಿಡಿಎಲ್‌ (Virus Diagnostic Laboratory) ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ಅವುಗಳಲ್ಲಿ 11 ನೆಗೆಟಿವ್‌, 2 ಪಾಸಿಟಿವ್‌ ಆಗಿ ಕಂಡುಬಂದಿದೆ. 6 ಮಂಗಗಳ ವರದಿ ಇನ್ನಷ್ಟೇ ಬರಬೇಕಿದೆ. ಹಿರ್ಗಾನದ ಚಿಕ್ಕಲ್‌ಬೆಟ್ಟು ಹಾಗೂ ಅಯ್ಯಪ್ಪನಗರದ ಪಿಲಿಚೆಂಡಿಯಲ್ಲಿ ಪತ್ತೆಯಾದ ಮಂಗಗಳ ಸ್ಯಾಂಪಲ್‌ ನಲ್ಲಿ ಸೋಂಕು ದೃಢಪಟ್ಟಿದೆ.

ಅನವಶ್ಯವಾಗಿ ಕಾಡಿಗೆ ಹೋಗಬಾರದು. ತಮ್ಮ ಜಾನುವಾರು ಕಾಡಿಗೆ ಹೋಗದಂತೆ ಸಾಧ್ಯವಾದಷ್ಟು ತಡೆಗಟ್ಟಬೇಕು. ಕಾಡಿಗೆ ಹೋಗಲೇಬೇಕಾದ ಸಂದರ್ಭ ಮೈತುಂಬಾ ಬಟ್ಟೆ ಧರಿಸಿ, ಶೂ ಧರಿಸಿ ತೆರಳಬೇಕು. ಆರೋಗ್ಯ ಇಲಾಖೆಯಿಂದ ಉಚಿತವಾಗಿ ವಿತರಿಸುವ ಡಿ.ಎಂ.ಪಿ. ತೈಲ ಲೇಪಿಸಿ ಕಾಡಿಗೆ ತೆರಳಬೇಕು. ಕಾಡಿನಿಂದ ಬಂದ ಅನಂತರ ಬಿಸಿನೀರಿನಿಂದ ಸೋಪು ಹಚ್ಚಿ ಸ್ನಾನ ಮಾಡಿ,  ಬಟ್ಟೆಗಳನ್ನು ಬಿಸಿನೀರಿನಲ್ಲಿ  ತೊಳೆಯಬೇಕು. ಜ್ವರ, ವಿಪರೀತ ತಲೆನೋವು, ಕೈಕಾಲು- ಸೊಂಟನೋವು, ನಿಶ್ಶಕ್ತಿ ಕಂಡು ಬಂದಲ್ಲಿ ತತ್‌ಕ್ಷಣವೇ ತಪಾಸಣೆಗಾಗಿ ವೈದ್ಯರ ಬಳಿ ತೆರಳಿ ಸಲಹೆ ಪಡೆಯುವುದು ಮತ್ತು  ಸತ್ತ ಮಂಗ ಕಂಡುಬಂದಲ್ಲಿ ಸಮೀಪದ ಆರೋಗ್ಯ ಕೇಂದ್ರ, ಅರಣ್ಯ ಇಲಾಖೆ ಅಥವಾ ಪಶುವೈದ್ಯರ ಗಮನಕ್ಕೆ ತರುವಂತೆ ಜಾಗೃತಿ ಮೂಡಿಸಲಾಗುತ್ತಿದೆ.  

ಭಯ ಬೇಡ
ಮಂಗನ ಕಾಯಿಲೆ ಕುರಿತು ಭಯ ಬೇಡ. ಆದರೆ ಅಗತ್ಯ ಮುನ್ನೆಚರಿಕೆ  ಕ್ರಮಗಳನ್ನು ವಹಿಸುವುದು ಉತ್ತಮ.
– ಡಾ| ಕೃಷ್ಣಾನಂದ
ತಾಲೂಕು ಆರೋಗ್ಯ ಅಧಿಕಾರಿ, ಕಾರ್ಕಳ

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.