ಮಂಗನ ಕಾಯಿಲೆ: ಮತ್ತೆ ಇಬ್ಬರು ಬಲಿ
Team Udayavani, Apr 16, 2019, 6:52 AM IST
ಸಾಗರ: ತಾಲೂಕಿನ ಅರಳಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ.
ಕಾಳಮಂಜಿ ಗ್ರಾಮದ ಗಣಪತಿ (55) ಮತ್ತು ಕುಡಗುಂಜಿಯ ಈಶ್ವರ (28) ಶಂಕಿತ ಮಂಗನ ಕಾಯಿಲೆಯಿಂದ ಕಳೆದ ಎರಡು ದಿನಗಳಲ್ಲಿ ಮೃತಪಟ್ಟಿದ್ದಾರೆ. ಅರಳಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಸಾಕಷ್ಟು ದೂರದಲ್ಲಿರುವ ಕುಡಗುಂಜಿ ಪ್ರದೇಶದಲ್ಲಿ ಸಂಭವಿಸಿದ ಮೊದಲ ಸಾವು ಇದಾಗಿದೆ.
8 ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಗಣಪತಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಮೃತಪಟ್ಟಿದ್ದಾರೆ. ಕಾಳಮಂಜಿಯ ಈಶ್ವರ ರವಿವಾರ ರಾತ್ರಿ ಮೃತಪಟ್ಟಿದ್ದು, ಈಶ್ವರ ಅವರಲ್ಲಿ ಕೆಎಫ್ಡಿ ನೆಗೆಟಿವ್ ವರದಿಯಾಗಿದ್ದು, ಗಣಪತಿಯವರ ರಕ್ತದ ಮಾದರಿ ವರದಿ ಇನ್ನೂ ಬಂದಿಲ್ಲ ಎನ್ನಲಾಗಿದೆ.
ಗಣಪತಿಯವರನ್ನು ಅರಳಗೋಡು ಪಿಎಚ್ಸಿಯಿಂದ ಕೆಎಂಸಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಗಣಪತಿಯವರಿಗೆ ಮೂವರು ಹೆಣ್ಣುಮಕ್ಕಳಿದ್ದು, ಪತ್ನಿ ಈಗಾಗಲೇ ಮೃತಪಟ್ಟಿದ್ದು, ಅವರ ಕುಟುಂಬದಲ್ಲಿ ದಿಕ್ಕು ತೋಚದ ಸ್ಥಿತಿ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ