ಕರಾವಳಿಯಲ್ಲಿ ಆರಂಭವಾಯಿತು ನಾಟಿ ಕಾರ್ಯ
Team Udayavani, Jun 12, 2018, 6:05 AM IST
ಕೋಟ: ಮುಂಗಾರು ಬಿರುಸುಗೊಳ್ಳುತ್ತಿದ್ದಂತೆ ಕರಾವಳಿಯಲ್ಲಿ ರೈತನ ಕೃಷಿ ಚಟುವಟಿಕೆ ಕೂಡ ವೇಗ ಪಡೆದಿದೆ. ಸಾಕಷ್ಟು ಮುಂಚಿತವಾಗಿ ನೇಜಿ ತಯಾರಿಸಿದ ರೈತರು ಹಲವು ಕಡೆಗಳಲ್ಲಿ ಇದೀಗ ನಾಟಿ ಆರಂಭಿಸಿದ್ದಾರೆ.
ಅಂತೆಯೇ ಕೋಟ ಹೋಬಳಿಯ ಹಲವು ಕಡೆಗಳಲ್ಲಿ ಶನಿವಾರದಿಂದ ನಾಟಿ ಆರಂಭಗೊಂಡಿದ್ದು ಆಧುನಿಕ ಯಂತ್ರೋಪಕರಣಗಳ ಜತೆಗೆ ಸಾಂಪ್ರದಾಯಿಕ ಕೃಷಿ ಪದ್ಧತಿಯಾದ ಕೋಣದ ಮೂಲಕ ಉಳುಮೆ, ಕಾರ್ಮಿಕರ ಮೂಲಕ ನಾಟಿ ನಡೆಯುತ್ತಿದ್ದು ನೋಡುಗರಿಗೆ ಖುಷಿಕೊಡುತ್ತಿದೆ.
ನೇಜಿ ಕೊರತೆ
ಬಿಟ್ಟು ಬಿಡದೆ ಸುರಿದ ಭಾರೀ ಮಳೆಯಿಂದಾಗಿ ಹಲವು ಕಡೆಗಳಲ್ಲಿ ನೇಜಿಗೆ ಬಿತ್ತಿದ್ದ ಬೀಜ ಕೊಳೆತು ನಾಶವಾಗಿದೆ. ಹೀಗಾಗಿ ಈ ಬಾರಿ ಸಾಕಷ್ಟು ಪ್ರಮಾಣದಲ್ಲಿ ನೇಜಿ ಕೊರತೆ ಎದುರಾಗುವ ಲಕ್ಷಣವಿದೆ. ಇದಕ್ಕಾಗಿ ಕೆಲವು ರೈತರು ನಾಟಿ ಮಾಡುವುದನ್ನೇ ಕೈಬಿಟ್ಟು ಬಿತ್ತನೆಯಲ್ಲಿ ತೊಡಗಿದ್ದಾರೆ.
ಎಂ.ಒ.4. ಕೊರತೆ: ಬದಲಿ ತಳಿ ಪ್ರಯೋಗ ಈ ಬಾರಿ ಮುಂಗಾರು ಹಂಗಾಮಿಗೆ ಕರಾವಳಿಯ ಸಾಂಪ್ರದಾಯಿಕ ತಳಿ ಎಂ.ಒ.4. ಬೀಜದ ಕೊರತೆ ಯಾದ ಕಾರಣ ಹಲವು ಮಂದಿ ಪ್ರಯೋಗದ ರೀತಿಯಲ್ಲಿ ಉಮಾ, ಜ್ಯೋತಿ, ಜಯ, ಎನ್.13 ಮುಂತಾದ ತಳಿ ಉಪಯೋಗಿಸಿ ನೇಜಿ ತಯಾರಿಸಿದ್ದು ಈ ತಳಿಗಳು ಯಾವ ರೀತಿ ಫಸಲು ನೀಡಬಹುದು ಎನ್ನುವ ನಿರೀಕ್ಷೆ ಕೂಡ ರೈತರಲ್ಲಿದೆ.ಒಟ್ಟಾರೆ ಬೀಜದ ಕೊರತೆ, ನೇಜಿ ಸಮಸ್ಯೆ, ಕೂಲಿಯಾಳು ಸಮಸ್ಯೆಗಳನ್ನು ಮೆಟ್ಟಿ ನಿಂತು ಖುಷಿ- ಖುಷಿಯಲ್ಲಿ ಗದ್ದೆಯ ಕಡೆ ರೈತ ಹೆಜ್ಜೆಹಾಕಿದ್ದಾನೆ.
ಜಿಲ್ಲೆಯಲ್ಲಿ 44 ಸಾವಿರ ಹೆಕ್ಟೇರ್ ಭತ್ತದ ಗುರಿ
ಉಡುಪಿ ತಾಲೂಕಿನಲ್ಲಿ 17,750, ಕುಂದಾಪುರ 18,250, ಕಾರ್ಕಳ 8,000 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಈ ಬಾರಿ 44ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೇಸಾಯ ಮಾಡುವ ಗುರಿ ಕೃಷಿ ಇಲಾಖೆಯ ಮುಂದಿದೆ. ಕಳೆದ ಸಾಲಿನಲ್ಲಿ 42,820 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿತ್ತು.
ಬಿತ್ತನೆ ಬೀಜ ವಿತರಣೆ
ಜಿಲ್ಲೆಯಲ್ಲಿ 44 ಸಾವಿರ ಹೆಕ್ಟೇರ್ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಈಗಾಗಲೇ ಅಗತ್ಯವಿರುವ ಬಿತ್ತನೆ ಬೀಜ ಮುಂತಾದವುಗಳನ್ನು ರೈತಸಂಪರ್ಕ ಕೇಂದ್ರದ ಮೂಲಕ ವಿತರಿಸಲಾಗಿದೆ ಜತೆಗೆ ಯಂತ್ರೋಪಕರಣಗಳು ಮುಂತಾದವುಗಳನ್ನು ನೀಡಲಾಗುತ್ತಿದೆ.
– ಡಾ| ಕೆಂಪೇ ಗೌಡ,
ಕೃಷಿ ನಿರ್ದೇಶಕರು ಉಡುಪಿ ಜಿಲ್ಲೆ
– ರಾಜೇಶ ಗಾಣಿಗ ಅಚ್ಲಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ