ಶಿರ್ವ ಆರೋಗ್ಯ ಮಾತಾ ದೇವಾಲಯದಲ್ಲಿ ಸಂಭ್ರಮದ ಮೊಂತಿ ಫೆಸ್ಟ್
Team Udayavani, Sep 8, 2022, 9:24 AM IST
ಶಿರ್ವ: ಉಡುಪಿ ಕೆಥೋಲಿಕ್ ಧರ್ಮಪ್ರಾಂತ್ಯದ ಶಿರ್ವ ವಲಯದ ಪ್ರಮುಖ ಚರ್ಚುಗಳಲ್ಲೊಂದಾದ ಶಿರ್ವ ಆರೋಗ್ಯಮಾತಾ ದೇವಾಲಯದಲ್ಲಿ ವಲಯದ ಪ್ರಧಾನ ಧರ್ಮಗುರು ರೆ|ಫಾ|ಡಾ| ಲೆಸ್ಲಿ ಡಿಸೋಜಾ ಅವರ ನೇತೃತ್ವದಲ್ಲಿ ತೆನೆ ಹಬ್ಬದ (ಮೊಂತಿ ಫೆಸ್ಟ್)ಸಂಭ್ರಮಾಚರಣೆ ಸೆ.8 ರಂದು ನಡೆಯಿತು.
ಭಕ್ತಾಧಿಗಳ ಉಪಸ್ಥಿತಿಯಲ್ಲಿ ಪ್ರಧಾನ ಧರ್ಮಗುರು ರೆ|ಫಾ|ಡಾ| ಲೆಸ್ಲಿ ಡಿಸೋಜಾ, ಸಹಾಯಕ ಧರ್ಮಗುರುಗಳಾದ ರೆ|ಫಾ| ನೆಲ್ಸನ್ ಪೆರಿಸ್ ಮತ್ತು ರೆ|ಫಾ| ರೋಲ್ವಿನ್ ಅರಾನ್ಹಾ ಬಲಿ ಪೂಜೆ ನೆರವೇರಿಸಿ ಭಕ್ತಾಧಿಗಳಿಗೆ ತೆನೆ ವಿತರಿಸಿದರು. ಮಳೆಯ ಕಾರಣದಿಂದ ಮಾತೆ ಕನ್ಯಾ ಮೇರಿಯ ವಿಗ್ರಹದ ಮೆರವಣಿಗೆ ನಡೆಯದೆ ಚರ್ಚ್ನಲ್ಲಿಯೇ ಭಕ್ತಾಧಿಗಳು ಮೂರ್ತಿಗೆ ಪುಷ್ಪಾರ್ಚನೆ ನಡೆಸಿದರು.
ಚರ್ಚ್ ಆರ್ಥಿಕ ಮಂಡಳಿಯ ಸದಸ್ಯರಾದ ವಿಲ್ಸನ್ ರೊಡ್ರಿಗಸ್, ಮೆಲ್ವಿನ್ ಅರಾನ್ಹಾ, ಜೂಲಿಯಾನ್ ರೊಡ್ರಿಗಸ್, ನೋರ್ಬರ್ಟ್ ಇ. ಮಚಾದೋ, ಪುಷ್ಪಾ ಫೆರ್ನಾಂಡಿಸ್, ಪ್ರಮುಖರಾದ ಪೀಟರ್ ಕೋರ್ಡಾ, ಫೆಲಿಕ್ಸ್ ಡಿಸೋಜಾ,ಆಲ್ವಿನ್ ಡಿಸೋಜಾ, ಎಡ್ವರ್ಡ್ಮಿಸ್ಕಿತ್, ಡೆನ್ನಿಸ್ ಮತಾಯಸ್,ಆರಿನ್ ಡಿಸೋಜಾ, ಪ್ರೊ| ರೊನಾಲ್ಡ್ ಮೊರಾಸ್, ಚರ್ಚ್ನ ಆರ್ಥಿಕ ಸಮಿತಿಯ ಸದಸ್ಯರು, ನೇಟಿವಿಟಿ ಕಾನ್ವೆಂಟ್ನ ಧರ್ಮ ಭಗಿನಿಯರು ವಿವಿಧ ವಾರ್ಡ್ಗಳ ಗುರಿಕಾರರು, ಭಕ್ತಾಧಿಗಳು ಉಪಸ್ಥಿತರಿದ್ದರು.
ಶಿರ್ವ ವಲಯದ ಪಿಲಾರು, ಪೆರ್ನಾಲು, ಪಾಂಬೂರು, ಕಳತ್ತೂರು ಮತ್ತು ಮೂಡುಬೆಳ್ಳೆ ಚರ್ಚುಗಳಲ್ಲಿ ಕೂಡಾ ಬಲಿಪೂಜೆಯೊಂದಿಗೆ ತೆನೆ ಹಬ್ಬದ ಸಂಭ್ರಮ ಸಂಪನ್ನಗೊಂಡಿತು.
ಇದನ್ನೂ ಓದಿ : ಶಾರ್ಜಾ ಅಂಗಳದಲ್ಲಿ ಹೊಡೆದಾಟ: ಸೋಲಿನ ಬಳಿಕ ಅಫ್ಘಾನ್ ಅಭಿಮಾನಿಗಳ ದಾಂಧಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ