ಕಾರಂತರ ಹುಟ್ಟೂರಲ್ಲೇ “ಮೂಕಜ್ಜಿ…’ಗೆ ನೀರಸ ಪ್ರತಿಕ್ರಿಯೆ; ನಿರ್ದೇಶಕ ಶೇಷಾದ್ರಿ ಬೇಸರ


Team Udayavani, Dec 1, 2019, 5:10 AM IST

mookajjiya-kanasugalu

ಕುಂದಾಪುರ/ಉಡುಪಿ/ ಮಂಗಳೂರು: ಡಾ| ಶಿವರಾಮ ಕಾರಂತರ ಕಾದಂಬರಿ ಆಧಾರಿತ “ಮೂಕಜ್ಜಿಯ ಕನಸುಗಳು’ ಚಿತ್ರಕ್ಕೆ ಬೆಂಗಳೂರು ಮೊದಲಾದೆಡೆ ಉತ್ತಮ ಸ್ಪಂದನೆ ಲಭಿಸಿದೆ. ಆದರೆ ಕಾರಂತರ ಹುಟ್ಟೂರಿನಲ್ಲಿ, ಪ್ರಾದೇಶಿಕ ಭಾಷೆಯಲ್ಲೇ ಚಿತ್ರೀಕರಿಸಿರುವ ಈ ಚಿತ್ರಕ್ಕೆ ಕುಂದಾಪುರದಲ್ಲಿ ಮಾತ್ರ ಉತ್ತಮ ಪ್ರತಿಕ್ರಿಯೆ ಸಿಗದಿರುವುದು ಬೇಸರ ತಂದಿದೆ ಎಂದು ಚಿತ್ರದ ನಿರ್ದೇಶಕ ಪಿ. ಶೇಷಾದ್ರಿ ಬೇಸರ ವ್ಯಕ್ತಪಡಿಸಿದ್ದಾರೆ.

ಕುಂದಾಪುರದ ವಿನಾಯಕ ಚಿತ್ರಮಂದಿರದಲ್ಲಿ ಮತ್ತು ಮಣಿಪಾಲದ ಕೆನರಾ ಮಾಲ್‌ನ ಭಾರತ್‌ ಸಿನೆಮಾಸ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ರೀತಿಯ ಅನುಭವಗಳು ಕಲಾ ಚಿತ್ರ ಮಾಡುವಾಗ ಸಾಮಾನ್ಯ. ಆದರೆ ಇಲ್ಲಿರುವ ಲಕ್ಷಕ್ಕೂ ಮಿಕ್ಕಿ ಜನರಲ್ಲಿ ಶೇ. 10ರಷ್ಟು ಮಂದಿ ಚಿತ್ರ ವೀಕ್ಷಿಸಿದರೂ ಆ ಚಿತ್ರ ಗೆದ್ದಂತೆ. ಚಿತ್ರ ಲಾಭ ಗಳಿಸದಿದ್ದರೂ ನಿರ್ಮಾಪಕರು ಹಾಕಿದ ಹಣವಾದರೂ ಸಿಗುವಂತಾಗಲಿ ಎಂದವರು ಹೇಳಿದರು.

50ರ ಸಂಭ್ರಮ ಯಾರಲ್ಲೂ ಇಲ್ಲ!
ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕಾರಂತರ ಮೂಕಜ್ಜಿಯ ಕನಸುಗಳು ಕಾದಂಬರಿ ರಚನೆಯಾಗಿ ಈಗ ಸುವರ್ಣ ಸಂಭ್ರಮ. ನಾವೆಲ್ಲ ಇದನ್ನು ಸಂಭ್ರಮಿಸಬೇಕಿತ್ತು. ಸರಕಾರದಲ್ಲಾಗಲೀ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಾಗಲೀ ಸಾಹಿತ್ಯ ಲೋಕದಲ್ಲಾಗಲೀ ಸಾರ್ವಜನಿಕರಲ್ಲಾಗಲೀ ಯಾರಲ್ಲೂ ಈ ಸಂಭ್ರಮವೇ ಕಾಣುತ್ತಿಲ್ಲ. ಈ ಕಾರಣಕ್ಕಾಗಿಯೇ ಇದನ್ನೊಂದು ದೃಶ್ಯ ರೂಪದಲ್ಲಿ ತೆರೆಗೆ ತಂದಿದ್ದೇನೆ. ಈ ಸಂಭ್ರಮ ಐದೇ ದಿನಗಳಲ್ಲಿ ಮುಗಿಯುವ ಹಂತಕ್ಕೆ ತಲುಪದಿರಲಿ ಎಂದು ಶೇಷಾದ್ರಿ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ ಬಿಡುಗಡೆ
ಗೊಂಡ 45 ಚಿತ್ರಗಳಲ್ಲಿ 9 ಚಿತ್ರಗಳು ಮಾತ್ರ ಕನ್ನಡದ್ದು. ಭೋಜಪುರಿ ಸಿನೆಮಾವೂ ಒಂದಿತ್ತು.ಅದೇ 10 ಲಕ್ಷ ಕನ್ನಡಿಗರು ಇರುವ ಚೆನ್ನೈನಲ್ಲಿ,25 ಲಕ್ಷ ಕನ್ನಡಿಗರು ಇರುವ ಮುಂಬಯಿಯಲ್ಲಿ ಕನ್ನಡ ಚಿತ್ರಗಳು ಪ್ರದರ್ಶನಗೊಳ್ಳುತ್ತಿಲ್ಲ. ಮಣಿಪಾಲದ ಚಿತ್ರಮಂದಿರದ 200 ಆಸನಗಳಲ್ಲಿ 19 ಆಸನಗಳಷ್ಟೇ ಭರ್ತಿಯಾಗಿದ್ದವು ಎಂದು ವಿಷಾದಿಸಿದರು.

ಬಾಲನಟಿ ಶ್ಲಾಘಾ ಸಾಲಿಗ್ರಾಮ ಮಾತನಾಡಿ, ನನಗೆ ಇದೊಂದು ಉತ್ತಮ ಅನುಭವ ತಂದುಕೊಟ್ಟ ಚಿತ್ರವಾಗಿದ್ದು, ಇಂತಹ ಚಿತ್ರಗಳನ್ನು ನೋಡುವ ಮೂಲಕ ಪ್ರೋತ್ಸಾಹಿಸಿ ಎಂದು ಮನವಿ ಮಾಡಿದರು.

ನಟರಾದ ಅರವಿಂದ ಹುಬ್ಳೀಕರ್‌, ಅನಂತ್‌ ವಿ.ಎನ್‌., ನೀಲಕಂಠ ಕರಬ, ಉದಯ ಹಾಲಂಬಿ, ಪ್ರದೀಪ್‌ಚಂದ್ರ, ಶಿಖೀನ್‌ ಸಾಲಿಗ್ರಾಮ, ಬಾಲನಟಿ ಶ್ಲಾಘಾ ಸಾಲಿಗ್ರಾಮ ಪತ್ರಿಕಾಗೋಷ್ಠಿಯಲ್ಲಿದ್ದರು.

ವಿದ್ಯಾರ್ಥಿಗಳಿಗೆ ವಿಶೇಷ ಪ್ರದರ್ಶನ
ಶಾಲಾ – ಕಾಲೇಜುಗಳಲ್ಲಿ 100ಕ್ಕೂ ಅಧಿಕ ಮಕ್ಕಳು ವೀಕ್ಷಿಸುವು ದಾದರೆ ರಿಯಾಯಿತಿ ದರದಲ್ಲಿ ವಿಶೇಷ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಈ ಕುರಿತಂತೆ ಶಿಕ್ಷಣ ಇಲಾಖೆಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ಪ್ರದರ್ಶನ ಏರ್ಪಡಿಸಬಹುದು ಎಂದು ಶೇಷಾದ್ರಿ ಹೇಳಿದರು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Gangolli: ರಿಕ್ಷಾ-ಕಾರು ಢಿಕ್ಕಿ

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.