ಜು. 27: ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ಗ್ರಹಣ ಶಾಂತಿ


Team Udayavani, Jul 25, 2018, 2:35 AM IST

doddanagudde-24-7.jpg

ಉಡುಪಿ: ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಜು. 27ರಂದು ಗೋಚರಿಸಲಿರುವ ಕೇತುಗ್ರಸ್ತ ಸಂಪೂರ್ಣ ಚಂದ್ರಗ್ರಹಣದ ಪ್ರಯುಕ್ತ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗ್ರಹಣ ಶಾಂತಿ ನಡೆಯಲಿದೆ.

ಉತ್ತರಾಷಾಢ, ಶ್ರವಣ ನಕ್ಷತ್ರ, ಮಕರ ರಾಶಿಯಲ್ಲಿ ಚಂದ್ರನಿಗೆ ಕೇತು ಗ್ರಹಣ ಗೋಚರಿಸಲಿದೆ. ಉತ್ತರಾಷಾಢಾ ನಕ್ಷತ್ರದಲ್ಲಿ ಸ್ಪರ್ಶವಾಗಿ, ಶ್ರವಣ ನಕ್ಷತ್ರದಲ್ಲಿ ಖಗ್ರಾಸ ಮೋಕ್ಷವಾಗಲಿದೆ. ಮಕರ, ಕುಂಭ, ಮಿಥುನ, ಸಿಂಹ ರಾಶಿಯಲ್ಲಿ ಜನಿಸಿದವರಿಗೆ ಗ್ರಹಣದ ಅರಿಷ್ಟವಿದೆ. ಆಷಾಢ ಮಾಸದ ಶುಕ್ಲ ಪೌರ್ಣಿಮೆಯಂದು ಚಂದ್ರಗ್ರಹಣ ಸಂಭವಿಸಲಿದ್ದು, ರಾತ್ರಿ 11.54 ಗ್ರಹಣ ಸ್ಪರ್ಶ ಕಾಲ, ಮಧ್ಯರಾತ್ರಿ 1.52ಕ್ಕೆ ಗ್ರಹಣ ಮಧ್ಯ ಕಾಲ, ರಾತ್ರಿ 3.49 ಗ್ರಹಣ ಮೋಕ್ಷ ಕಾಲವಾಗಲಿದೆ. ಗ್ರಹಣ ಕಾಲದಲ್ಲಿ ಮಾಡುವ ಶಾಂತಿ, ರವಿ, ಚಂದ್ರ, ಕೇತು ಪ್ರೀತ್ಯರ್ಥ ಯಥಾಶಕ್ತಿ ಜಪ, ದಾನ, ಪೂಜೆ, ಹವನ ಇತ್ಯಾದಿಗಳಿಂದ ಅನಿಷ್ಠ ನಿವಾರಣೆಯಾಗಲಿದೆ. ಈ ದಿನ ಮಧ್ಯಾಹ್ನ 2.54ರ ಅನಂತರ ಭೋಜನ ನಿಷಿದ್ಧ. ಈ ಗ್ರಹಣವು ಭಾರತದಾದ್ಯಂತ ಗೋಚರಿಸುವುದರಿಂದ ಗ್ರಹಣಾಚರಣೆ ಇರುತ್ತದೆ. ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗುವ ಗ್ರಹಣ ಶಾಂತಿಯು ಸಾಮೂಹಿಕವಾಗಿದೆ ಎಂದು ಕ್ಷೇತ್ರ ಉಸ್ತುವಾರಿ ಕುಸುಮಾ ನಾಗರಾಜ್‌ ತಿಳಿಸಿದ್ದಾರೆ.

ಮಂತ್ರ ಸಿದ್ಧಿಗೆ ಪ್ರಸಕ್ತ ಕಾಲ

ಗ್ರಹಣ ಸ್ಪರ್ಶ ಕಾಲದಿಂದ ಮೋಕ್ಷ ಕಾಲದವರೆಗೆ ದೇವರ ನಾಮ ಸ್ಮರಣೆ ಮಾಡುವುದರಿಂದ ಅರಿಷ್ಟಾದಿಗಳು ದೂರವಾಗುವುದಲ್ಲದೆ, ಹೆಚ್ಚಿನ ಸತ್ಫಲಗಳು ಪ್ರಾಪ್ತಿಯಾಗುತ್ತದೆ. ಬೇರೆ ದಿನಗಳಲ್ಲಿ ಮಾಡಲ್ಪಡುವ ಹತ್ತು ಜಪಗಳನ್ನು ಗ್ರಹಣ ಕಾಲದಲ್ಲಿ ಮಾಡಿದರೆ ಹತ್ತಕ್ಕೆ ನೂರರಷ್ಟು ಫ‌ಲ ಲಭಿಸುತ್ತದೆ. ಮಂತ್ರ ಸಿದ್ಧಿಸಿಕೊಳ್ಳುವವರಿಗೆ ಇದು ಪ್ರಶಸ್ತ ಸಮಯವಾಗಿದೆ. ಅಶೌಚ – ಸೂತಕಗಳಿದ್ದರೂ ಗ್ರಹಣ ಕಾಲದಲ್ಲಿ ಜಪತಪ ಮಾಡಬಹುದು. ಗ್ರಹಣ ಆರಂಭದಲ್ಲಿ ಸ್ನಾನ ಮಾಡಿ ಪೂಜೆ ಆರಂಭಿಸಬೇಕು.ದೇವರ ಧ್ಯಾನ, ಭಜನೆ, ಸಂಕೀರ್ತನೆ, ಪಾರಾಯಣ ಪಠನೆ, ಹೋಮ ಹವನಾದಿಗಳಿಂದ ದೇವತಾರಾಧನೆ ನಡೆಸಬೇಕು. ಗ್ರಹಣ ಮೋಕ್ಷ ಕಾಲದ ಅನಂತರವೂ ಕೂಡ ಸ್ನಾನ ಮಾಡಿ ಪೂಜೆ ಮಾಡಬೇಕು. ಅರಿಷ್ಟ ಎದುರಾಗಲಿರುವ ರಾಶಿ, ನಕ್ಷತ್ರದವರು ಗ್ರಹಣ ಕಾಲದಲ್ಲಿ ದೇಗುಲಗಳಿಗೆ ತೆರಳಿ ಎಳ್ಳೆಣ್ಣೆಯನ್ನು ಸಮರ್ಪಿಸುವುದು ಉತ್ತಮ. ಗ್ರಹಣ ಕಾಲದಲ್ಲಿ ಅಕ್ಕಿ, ಹುರುಳಿಯನ್ನು ತೆಗೆದಿರಿಸಿ ಮರುದಿನ ಬೆಳಗ್ಗೆ ಬ್ರಾಹ್ಮಣರು, ಗೋವು ಅಥವಾ ಬಡವರಿಗೆ ದಾನ ನೀಡುವುದು ಶ್ರೇಯಸ್ಕರ.      
– ಶ್ರೀ ರಮಾನಂದ ಗುರೂಜಿ, ಧರ್ಮದರ್ಶಿಗಳು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.