ಬೈಂದೂರು ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚು ಅನುದಾನ: ಸಚಿವ ಮಾಧುಸ್ವಾಮಿ


Team Udayavani, Dec 27, 2019, 10:47 PM IST

67

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಶಾಸಕರು ಹಲವಾರು ಬಾರಿ ಭೇಟಿಯಾಗಿ ಅಹವಾಲು ಸಲ್ಲಿಸಿದ್ದು, ಅದರಂತೆ ಈವರೆಗೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ 73.70 ಕೋ.ರೂ. ಅನುದಾನವನ್ನು ಮಂಜೂರು ಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಇನ್ನಷ್ಟು ಅನುದಾನ ನೀಡುವುದಾಗಿ ಕಾನೂನು, ಸಂಸದೀಯ ಹಾಗೂ ಸಣ್ಣ ನೀರಾವರಿ ಇಲಾಖೆಯ ಸಚಿವ ಜೆ.ಸಿ. ಮಾಧುಸ್ವಾಮಿ ಭರವಸೆ ನೀಡಿದರು.

ಶುಕ್ರವಾರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ನೆಂಪುವಿನ ಶಾಸಕರ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಂತ – ಹಂತವಾಗಿ ಜನರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.

ಬೈಂದೂರು ತಾಲೂಕು ಕೇಂದ್ರವಾಗಿ ರೂಪುಗೊಂಡಿದ್ದು, ತಾಲೂಕು ನ್ಯಾಯಾಲಯದ ಆರಂಭದ ಕುರಿತಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಸಂಬಂಧಪಟ್ಟವರ ಬಳಿ ಶಾಸಕರ ಸಮ್ಮುಖದಲ್ಲಿ ಮಾತನಾಡಲಾಗುವುದು. ತಾಲೂಕಿಗೆ ಏನೆಲ್ಲ ಅಗತ್ಯತೆಗಳಿವೆಯೋ ಅದನ್ನು ಹಂತ – ಹಂತವಾಗಿ ಮಂಜೂರು ಮಾಡಲಾಗುವುದು ಎಂದು ಸಚಿವರು ಹೇಳಿದರು.

ಖಾಯಂಗೆ ಮನವಿ
ಇದೇ ಕುಂದಾಪುರ ತಾಲೂಕಿನ ರಾಜ್ಯ ಕಂದಾಯ ಇಲಾಖೆಯ ಗ್ರಾಮಸಹಾಯಕರ ಸಂಘದಿಂದ ಗ್ರಾಮ ಸಹಾಯಕರನ್ನು ಖಾಯಂಗೊಳಿಸಬೇಕು ಎನ್ನುವುದಾಗಿ ಸಚಿವ ಮಾಧುಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು. ಅಹವಾಲು ಆಲಿಸಿದ ಸಚಿವರು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಆದರೆ ಈ ಪ್ರಕ್ರಿಯೆ ಕ್ಯಾಬಿನೆಟ್‌ ಮಟ್ಟದಲ್ಲಿ ನಡೆಯಬೇಕು ಎಂದವರು ಹೇಳಿದರು.

ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ, ಸಣ್ಣ ನೀರಾವರಿ ಇಲಾಖೆಯ ರಾಜ್ಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಇಲಾಖೆಯ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಗೋಕುಲ್‌ದಾಸ್‌ ಮತ್ತಿತರರಿದ್ದರು.

ಸಿಎಂ ಜತೆ ಚರ್ಚೆ
ಸೌದಿಯಲ್ಲಿ ತನ್ನ ಹೆಸರಿನ ನಕಲಿ ಫೇಸ್‌ಬುಕ್‌ ಖಾತೆಯಲ್ಲಿ ಯಾರೋ ಕಿಡಿಗೇಡಿಗಳು ಪೋಸ್ಟ್‌ ಮಾಡಿ, ಅಲ್ಲಿನ ಪೊಲೀಸ್‌ ವಶದಲ್ಲಿರುವ ಬೀಜಾಡಿಯ ಹರೀಶ್‌ ಬಂಗೇರ ಅವರ ಬಿಡುಗಡೆ ಸಂಬಂಧ ರಾಜ್ಯ ಸರಕಾರ ಅನುಸರಿಸಬೇಕಾದ ಅಗತ್ಯ ಕ್ರಮಗಳ ಕುರಿತಂತೆ ಶೀಘ್ರ ಮುಖ್ಯಮಂತ್ರಿಯವರಲ್ಲಿ ಮಾತುಕತೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.