15 ಸಾವಿರಕ್ಕೂ ಅಧಿಕ ಪೌಷ್ಟಿಕ ತೋಟ : ಪೌಷ್ಟಿಕ ತೋಟದಲ್ಲಿ ಏನೇನು ಇರಲಿದೆ?


Team Udayavani, Oct 31, 2022, 9:16 AM IST

15 ಸಾವಿರಕ್ಕೂ ಅಧಿಕ ಪೌಷ್ಟಿಕ ತೋಟ : ಪೌಷ್ಟಿಕ ತೋಟದಲ್ಲಿ ಏನೇನು ಇರಲಿದೆ?

ಉಡುಪಿ : ಪೋಷಣ್‌ ಅಭಿಯಾನದ ಮುಂದುವರಿದ ಭಾಗವಾಗಿ ಜಿ.ಪಂ., ತೋಟಗಾರಿಕೆ ಇಲಾಖೆ ಹಾಗೂ ನ್ಯಾಶನಲ್‌ ರೂರಲ್‌ ಲೈವ್ಲಿಹುಡ್‌ ಮಿಷನ್‌ (ಎನ್‌ಆರ್‌ಎಲ್‌ಎಂ) ಒಟ್ಟಾಗಿ ಗ್ರಾ.ಪಂ.ಗಳಲ್ಲಿರುವ ಸಂಜೀವಿನಿ ಸಂಘಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ನರೇಗಾ ಯೋಜನೆಯಡಿಯಲ್ಲಿ ಪೌಷ್ಟಿಕ ತೋಟಗಳ ನಿರ್ಮಾಣಕ್ಕೆ ರೂಪರೇಖೆ ಸಿದ್ಧಪಡಿಸಲಾಗಿದೆ.
ಎಲ್ಲರ ಆರೋಗ್ಯ ವರ್ಧನೆಗೆ ಕೇಂದ್ರ ಸರಕಾರ 2022-23ರ ಅಂತ್ಯಕ್ಕೆ ಅಪೌಷ್ಟಿಕತೆ ಮುಕ್ತ ಭಾರತವೆಂದು ಘೋಷಿಸಲು ಪೂರಕವಾಗಿ ರಾಷ್ಟ್ರೀಯ ಪೋಷಣ್‌ ಅಭಿಯಾನ ಜಾರಿಗೊಳಿಸಿದೆ. ಇದರಡಿಯಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತಿವೆ. ಕುಟುಂಬದ ಪೌಷ್ಟಿಕ ಹೊರೆಯನ್ನು ಪೂರ್ತಿಗೊಳಿಸುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಆದ್ದರಿಂದ ಸಂಜೀವಿನಿ ಸ್ವ-ಸಹಾಯ ಮಹಿಳಾ ಗುಂಪುಗಳ ಮೂಲಕ ಜಿ.ಪಂ., ತೋಟಗಾರಿಕೆ ಇಲಾಖೆಯ ಸಹಭಾಗಿತ್ವದಲ್ಲಿ ಮನೆಗೊಂದು ಪೌಷ್ಟಿಕ ತೋಟದ ಅಡಿಯಲ್ಲಿ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಜಿಲ್ಲೆಯ ಗುರಿ
ಜಿಲ್ಲೆಯ 155 ಗ್ರಾ.ಪಂ.ಗಳಲ್ಲಿ ತಲಾ 101 ಪೌಷ್ಟಿಕ ತೋಟದಂತೆ ಒಟ್ಟು 15,500ಕ್ಕೂ ಮನೆಯಂಗಳದಲ್ಲಿ ಪೌಷ್ಟಿಕ ತೋಟ ನಿರ್ಮಾಣಕ್ಕೆ ಯೋಜನೆ ರೂಪಿಸ ಲಾಗಿದೆ. ಪೌಷ್ಟಿಕ ತೋಟ ನಿರ್ಮಾಣಕ್ಕೆ ನರೇಗಾದಡಿಯಲ್ಲಿ ವೈಯಕ್ತಿಕ ಕಾಮಗಾರಿ ಹೆಸರಿನಡಿ ಕೂಲಿ ಹಾಗೂ ಸಾಮಗ್ರಿ ವೆಚ್ಚ ಸೇರಿ ಒಟ್ಟು 4,503 ರೂ. ಸಿಗಲಿದೆ. ಆರಂಭದಲ್ಲಿ ಪೌಷ್ಟಿಕ ತೋಟ ನಿರ್ಮಾಣ ಮಾಡುವವರೇ ತಮ್ಮ ಖರ್ಚಿನಲ್ಲಿ ಇದನ್ನು ಮಾಡಿಕೊಳ್ಳಬೇಕು. ಅನಂತರದಲ್ಲಿ ನರೇಗಾ ಯೋಜನೆಯಡಿ ಅವರ ಖಾತೆಗೆ ಹಣ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.

ಪೌಷ್ಟಿಕ ತೋಟದಲ್ಲಿ ಏನೇನು ಇರಲಿದೆ?
ಜಿಲ್ಲೆಯ ಭೌಗೋಳಿಕ ಪರಿಸರಕ್ಕೆ ಪೂರಕವಾಗುವಂತೆ ಯಾವೆಲ್ಲ ಗಿಡಗಳನ್ನು ನಡೆಬಹುದು ಎಂಬುದನ್ನು ತೋಟಗಾರಿಕೆ ಇಲಾಖೆ ಹಾಗೂ ಜಿ.ಪಂ. ಒಟ್ಟಾಗಿ ತಜ್ಞರ ಮೂಲಕ ಚರ್ಚಿಸಿ ತೀರ್ಮಾನಿಸಲಾಗಿದೆ. ಪೌಷ್ಟಿಕ ತೋಟದಲ್ಲಿ ತಲಾ ಎರಡೆರೆಡು ತೆಂಗು, ಸೀಬೆ, ನೆಲ್ಲಿ, ಕರಿಬೇವು, ನಿಂಬೆ, ನುಗ್ಗೆ ಹಾಗೂ ಪಪಾಯ ಗಿಡ ಇರಲಿದೆ. ಕನಿಷ್ಠ ತಲಾ ಒಂದರಂತೆ ಎಂಟು ಗಿಡಗಳು ಇರಬೇಕು. ಗರಿಷ್ಠ 14 ಗಿಡ ಹೊಂದಲು ಅವಕಾಶವಿದೆ.

ಇದನ್ನೂ ಓದಿ : ಚಿಂಚೋಳಿ ಪುರಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಬಿಜೆಪಿಗೆ ಮುಖಬಂಗ

ಗಿಡದ ಲಭ್ಯತೆ ಮತ್ತು ದರ
ಒಂದು ತೆಂಗಿನ ಗಿಡಕ್ಕೆ 70 ರೂ., ಸೀಬೆ 85 ರೂ., ನೆಲ್ಲಿ 40 ರೂ., ಕರಿಬೇವು 12 ರೂ., ನಿಂಬೆ 15 ರೂ., ನುಗ್ಗೆ 10 ರೂ. ಹಾಗೂ ಪಪಾಯಕ್ಕೆ 10 ರೂ. ನಿಗದಿ ಮಾಡಲಾಗಿದೆ. ಒಬ್ಬರಿಗೆ ಗರಿಷ್ಠ ಎಲ್ಲ ಬಗೆಯ ಎರಡೆರೆಡು ಗಿಡಗಳನ್ನು ನೀಡಲಾಗುತ್ತದೆ. ತೋಟಗಾರಿಕೆ ಇಲಾಖೆಯ ಅಧಿಕೃತ ನರ್ಸರಿ, ಜಿ.ಪಂ.ಗಳಿಂದ ರಚಿಸಲ್ಪಟ್ಟಿರುವ ಸಂಜೀವಿನಿ ಸಂಘಗಳ ನರ್ಸರಿಗಳಲ್ಲಿ ನಿರ್ದಿಷ್ಟ ದರ ನೀಡಿ ಗಿಡ ಖರೀದಿ ಮಾಡಬಹುದಾಗಿದೆ. ನರೇಗಾದಡಿ ಈಗಾಗಲೇ 10 ಸಾವಿರಕ್ಕೂ ಅಧಿಕ ಅರ್ಜಿಗಳು ಬಂದಿವೆ ಎಂದು ಅಧಿಕಾರಿಯೊಬ್ಬರು ವಿವರ ನೀಡಿದರು.

ಪೌಷ್ಟಿಕ ತೋಟಕ್ಕೆ ಪೂರಕವಾದ ಗಿಡಗಳು ತೋಟಗಾರಿಕೆ ಇಲಾಖೆಯ ಅಧಿಕೃತ ನರ್ಸರಿ ಹಾಗೂ ಗ್ರಾ.ಪಂ. ಸಂಜೀವಿನಿ ಸಂಘಗಳ ನರ್ಸರಿಗಳಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಲಿದ್ದೇವೆ. ಪ್ರತೀ ಗ್ರಾ.ಪಂ.ನಲ್ಲಿ 101 ಪೌಷ್ಟಿಕ ತೋಟ ನಿರ್ಮಾಣದ ಗುರಿಯಿದೆ.
– ಭುವನೇಶ್ವರಿ, ಉಪನಿರ್ದೇಶಕಿ, ತೋಟಗಾರಿಕೆ ಇಲಾಖೆ

ಪೌಷ್ಟಿಕ ತೋಟ ನಿರ್ಮಾಣ ಸಂಬಂಧ ನರೇಗಾದಡಿ ಕಾರ್ಯಕ್ರಮ ಅನುಷ್ಠಾನಕ್ಕೆ ಈಗಾಗಲೇ ಪಿಡಿಒಗಳಿಗೆ ನಿರ್ದೇಶನ ನೀಡಿದ್ದೇವೆ. ಎಲ್ಲ ಗ್ರಾ.ಪಂ.ಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತದೆ. ಸಂಜೀವಿನಿ ಸಂಘಗಳನ್ನು ಇದರಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು.
-ಪ್ರಸನ್ನ ಎಚ್‌., ಜಿ.ಪಂ. ಸಿಇಒ ಉಡುಪಿ

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.