ಸಚಿವರಿಗೆ 2,000ಕ್ಕೂ ಹೆಚ್ಚು ಪುಸ್ತಕ ಗಿಫ್ಟ್
Team Udayavani, Aug 12, 2021, 7:35 AM IST
ಕಾರ್ಕಳ: ಅಭಿನಂದಿಸಲು ಹಾರ ತುರಾಯಿ ತರಬೇಡಿ. ಕೊಡಲೇಬೇಕು ಅಂತಿದ್ದರೆ ಒಂದು ಕನ್ನಡ ಪುಸ್ತಕ ತನ್ನಿ. ಅದನ್ನು ಗ್ರಂಥಾಲಯಕ್ಕೆ ಕೊಡುವೆ. ಹೀಗೆಂದು ಸಚಿವರಾಗುತ್ತಲೇ ಮನವಿ ಮಾಡಿದ್ದ ವಿ. ಸುನಿಲ್ ಕುಮಾರ್ ಅವರ ಮನವಿಗೆ ನಿರೀಕ್ಷೆಗೂ ಮೀರಿ ಸ್ಪಂದನೆ ದೊರಕಿದೆ.
ಸಚಿವರಾದ ಬೆನ್ನಲ್ಲೇ ಅವರ ನಿವಾಸ, ಕಚೇರಿ, ಬೆಂಗಳೂರು ಮುಂತಾದ ಕಡೆಗಳಲ್ಲಿ ಅಭಿನಂದಿಸಲು ಬಂದವರು ನೀಡಿದ ಒಟ್ಟು ಪುಸ್ತಕಗಳದ ಸಂಖ್ಯೆ 2 ಸಾವಿರ ದಾಟಿವೆೆ. ಭಗವದ್ಗೀತೆ ಸಹಿತ ಹೆಚ್ಚು ಮೌಲ್ಯದ ಪುಸ್ತಕಗಳು ಇದರಲ್ಲಿ ಸೇರಿದೆ. ಇನ್ನು ಕೂಡ ಪುಸ್ತಕ ರೂಪದಲ್ಲಿ ಶುಭಾಶಯಗಳು ಹರಿದು ಬರುತ್ತಲೇ ಇವೆ. ಸಂಗ್ರಹಗೊಂಡ ಈ ಎಲ್ಲ ಪುಸ್ತಕಗಳನ್ನು ಸ್ಥಳೀಯ ಗ್ರಂಥಾಲಯಗಳಿಗೆ ನೀಡಲು ಸಚಿವರು ನಿರ್ಧರಿಸಿದ್ದಾರೆ. ಇದರಿಂದ ತನ್ನ ಕ್ಷೇತ್ರದ ವಿದ್ಯಾರ್ಥಿಗಳಿಗೆ, ಜ್ಞಾನದಾಹಿಗಳಿಗೆ ಅನುಕೂಲವಾಗುತ್ತದೆ ಎನ್ನುವುದು ಅವರ ಆಶಯವಾಗಿದೆ.
ಸರಕಾರವೂ ಕೂಡ ಇದೀಗ ಸಾರ್ವಜನಿಕ ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ ನಿಷೇಧಿಸುವಂತೆ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ