ಕುಸಿಯುತ್ತಿರುವ ಸಚ್ಚೇರಿಪೇಟೆ ಕಜೆ ರಸ್ತೆಯ ಮೋರಿ

ಆತಂಕದಲ್ಲಿ ವಾಹನ ಸವಾರರು

Team Udayavani, Jul 21, 2019, 5:09 AM IST

BElman

ವಿಶೇಷ ವರದಿ-ಬೆಳ್ಮಣ್‌: ಮುಂಡ್ಕೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬೋಳ ಪದವು ಮಾರ್ಗದಿಂದ ಸಚ್ಚೇರಿಪೇಟೆ ಕಜೆ ಮಾರಿಗುಡಿ ದೇವಸ್ಥಾನ ಸಂಪರ್ಕಿಸುವ ರಸ್ತೆಯಲ್ಲಿ ಮೋರಿಯೊಂದು ಕುಸಿಯುತ್ತಿದ್ದು, ವಾಹನ ಸವಾರರು ಭೀತಿ ಎದುರಿಸುತ್ತಿದ್ದಾರೆ.

ಹಲವು ವರ್ಷಗಳ ಹಿಂದೆ ಇಲ್ಲಿ ರಸ್ತೆ ನಿರ್ಮಾಣಗೊಂಡ ವೇಳೆ ಮೋರಿ ಕಟ್ಟಲಾ ಗಿತ್ತು. ಅದೀಗ ಮಳೆ ನೀರಿನ ರಭಸಕ್ಕೆ ಕುಸಿಯುತ್ತಿದೆ. ಇದನ್ನು ಸರಿಪಡಿಸದೇ ಇದ್ದಲ್ಲಿ ರಸ್ತೆಯೂ ಕುಸಿಯುವ ಸಾಧ್ಯತೆ ಇದೆ.

ಒಂದು ಭಾಗ ಕುಸಿತ
ಮೋರಿಯ ಒಂದು ಬದಿ ಕುಸಿದಿದ್ದು, ಸಿಮೆಂಟ್‌ನ ಪೈಪ್‌ ಕೂಡ ತುಸು ದೂರ ಕೊಚ್ಚಿ ಹೋಗಿದೆ. ಮೋರಿಯ ತಡೆಗೋಡೆಯೂ ಕುಸಿದು ಕಲ್ಲುಗಳು ಚೆಲ್ಲಾಪಿಲ್ಲಿಯಾಗಿವೆ. ಮೋರಿ ಕುಸಿಯುತ್ತಿರುವುದರಿಂದ ರಸ್ತೆಯೂ ಬಿರುಕುಬಿಟ್ಟಿದೆ.

ಕಜೆ ಮಾರಿಗುಡಿ ಸಂಪರ್ಕ ರಸ್ತೆ
ಈ ರಸ್ತೆಯು ಮುಂಡ್ಕೂರು, ಬೆಳ್ಮಣ್‌ ಭಾಗದ ಭಕ್ತರಿಗೆ ಐತಿಹಾಸಿಕ ಕಜೆ ಮಾರಿಗುಡಿಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಈ ಭಾಗದಲ್ಲಿ ಹಲವಾರು ಮನೆಗಳಿದ್ದು ಜನರ ಸಂಚಾ ರಕ್ಕೂ ತೊಂದರೆಯಾಗುವ ಸಾಧ್ಯತೆ ಇದೆ. ಬೆಳ್ಮಣ್‌, ಬೋಳ, ಕೆದಿಂಜೆ, ಮಂಜರಪಲ್ಕೆ ಹಾಗೂ ಮುಂಡ್ಕೂರು ಭಾಗದ ಜನರು ಮೂಡುಬಿದಿರೆಯನ್ನು ಸೇರಲು ಹೆಚ್ಚಾಗಿ ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಹಲವು ವಾಹನಗಳು ಇದೇ ಮಾರ್ಗದಲ್ಲಿ ಓಡಾಟ ನಡೆಸುತ್ತವೆ. ಹೀಗಾಗಿ ಕೂಡಲೇ ಕುಸಿದ ಮೋರಿಯ ದುರಸ್ತಿ ಕಾರ್ಯ ನಡೆಯಲಿ ಎನ್ನುವುದು ಇಲ್ಲಿನ ನಿವಾಸಿಗಳ ಒತ್ತಾಯ. ಒಂದು ವೇಳೆ ಮೋರಿ ಸಂಪೂರ್ಣ ಕುಸಿದರೆ ಕಜೆ ಪರಿಸರವನ್ನು ಸಂಪರ್ಕಿಸುವ ರಸ್ತೆಯೂ ಕಡಿತಗೊಳ್ಳಲಿದೆ.

ಎಚ್ಚರಿಕೆ ಫಲಕ
ಮೋರಿ ಕುಸಿದಿರುವ ಬಗ್ಗೆ ರಸ್ತೆ ಬದಿ ರೀಪಿನ ಬೇಲಿ ಮತ್ತು ಒಂದು ಬ್ಯಾನರನ್ನು ಉಡುಪಿ ಜಿ.ಪಂ. ಎಂಜಿನಿಯರಿಂಗ್‌ ಇಲಾಖೆ ಅಳವಡಿಸಿದ್ದು ಬಿಟ್ಟರೆ ಮೋರಿಯ ದುರಸ್ತಿಯ ಬಗ್ಗೆ ಇಲ್ಲಿಯ ವರೆಗೂ ಕ್ರಮವನ್ನು ಕೈಗೊಂಡಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಶಾಲಾ ವಾಹನಗಳು, ವಿದ್ಯಾರ್ಥಿಗಳು ತೆರಳುತ್ತಿರುವುದರಿಂದ ಅಪಾಯಕಾರಿಯಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಮೋರಿ ಕುಸಿದು ಭಾರೀ ಅವಘಡ ಸಂಭವಿಸುವ ಮುನ್ನ ಸ್ಥಳೀಯಾಡಳಿತ ಹಾಗೂ ಇಲಾಖೆ ಎಚ್ಚೆತ್ತು ಹೊಸತೊಂದು ಮೋರಿ ನಿರ್ಮಾಣ ಮಾಡಬೇಕೆನ್ನುವ ಆಗ್ರಹ ಗ್ರಾಮಸ್ಥರದ್ದು.

ಜಿ.ಪಂ.ಗೆ ಮನವಿ
ಮೋರಿಯ ಸಮಸ್ಯೆಯ ಬಗ್ಗೆ ಜಿಲ್ಲಾ ಪಂಚಾಯತ್‌ಗೆ ಮನವಿ ಮಾಡಲಾಗುವುದು.
-ಶ‌ಶಿಧರ ಆಚಾರ್ಯ,
ಮುಂಡ್ಕೂರು ಗ್ರಾ.ಪಂ.ಪಿಡಿಒ

ಸ್ಪಂದಿಸುವ ಭರವಸೆ
ಈ ಮೋರಿಯ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಮನವರಿಕೆ ಮಾಡ ಲಾಗಿದೆ. ಸ್ಪಂದಿಸುವ ಭರವಸೆ ಇದೆ.
-ಉದಯ ಕಜೆ, ಸ್ಥಳೀಯರು

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.