Udupi; ತಾಯಿ, ಶಿಶು ಮರಣ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ


Team Udayavani, Jan 17, 2024, 12:12 AM IST

Udupi; ತಾಯಿ, ಶಿಶು ಮರಣ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ

ಉಡುಪಿ: ಪ್ರಸವ ಪೂರ್ವ ಹಾಗೂ ಪ್ರಸವ ಅನಂತರದಲ್ಲಿ ತೆಗೆದುಕೊಳ್ಳಬೇಕಾದ ಆರೈಕೆ ಕ್ರಮಗಳ ಅರಿವು ಮೂಡಿಸುವುದು ಹಾಗೂ ಆರೋಗ್ಯ ಸೇವೆಗಳನ್ನು ನೀಡುವುದರೊಂದಿಗೆ ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣಕ್ಕೆ ಸಂಬಂಧಿಸಿದ ಯಾವುದೇ ಪ್ರಕರಣಗಳು ಆಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.

ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಆರೋಗ್ಯ ಇಲಾಖೆಯ ಸಾಮಾಜಿಕ ಸವಲತ್ತುಗಳ ಸಮನ್ವಯ ಸಮಿತಿ ಸಭೆ, ಟಿ.ಬಿ. ಫೋರಂ ಸಮಿತಿ ಸಭೆ, ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಲಹ ಸಮಿತಿ ಸಭೆ, ಜಿಲ್ಲಾ ಕಣ್ಗಾವಲು ಸಮಿತಿ ಸಭೆ, ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ನೋಂದಣಿ ಪ್ರಾಧಿಕಾರದ ಆಸ್ಪತ್ರೆಗಳ ನೋಂದಣಿ ಮತ್ತು ಕುಂದುಕೊರತೆ ನಿವಾರಣೆ ಸಭೆ ಹಾಗೂ ವಿವಿಧ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗರ್ಭಿಣಿಯರಿಗೆ ಆರಂಭದಲ್ಲಿಯೇ ತಾಯಿಕಾರ್ಡನ್ನು ವಿತರಿಸಿ, ನಿಯಮಿತ ಆರೋಗ್ಯ ತಪಾಸಣೆಗೆ ಬಂದಾಗ ಅವರಲ್ಲಿರುವ ತೊಡಕುಗಳನ್ನು ಪ್ರಾರಂಭದಲ್ಲಿಯೇ ಗುರುತಿಸಿ, ಚಿಕಿತ್ಸೆ ನೀಡಬೇಕು. ಹೆರಿಗೆ ಸಮಯದಲ್ಲಿ ತೊಡಕು ಉಂಟಾದಲ್ಲಿ ಉನ್ನತ ಮಟ್ಟದ ಚಿಕಿತ್ಸೆಗಾಗಿ ಶಿಫಾರಸು ಮಾಡಿದಾಗ ತುರ್ತು ಸಿಬಂದಿಯೊಂದಿಗೆ ಮೇಲ್ಮಟ್ಟದ ಆಸ್ಪತ್ರೆಗೆ ವರ್ಗಾಯಿಸಬೇಕು. ವರ್ಗಾಯಿಸುವ ಸಂಬಂಧ ದೂರವಾಣಿ ಮೂಲಕ ಮೇಲ್ಮಟ್ಟದ ಆಸ್ಪತ್ರೆಗೆ ಮುಂಚಿತವಾಗಿ ತಿಳಿಸಿ, ಚಿಕಿತ್ಸೆ ಒದಗಿಸಲು ಮುಂದಾಗಬೇಕು ಎಂದರು.

ಕೋವಿಡ್‌: ಮುನ್ನೆಚ್ಚರಕ್ಕೆ ಸೂಚನೆ
ಜಿಲ್ಲೆಯಲ್ಲಿ ಈವರೆಗೆ 1,954 ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದು, 2 ಕೋವಿಡ್‌ ಪ್ರಕರಣಗಳು ಜಿಲ್ಲೆಯ ಗಡಿ ಭಾಗದಲ್ಲಿ ಕಂಡುಬಂದಿವೆ. ರೋಗಿಗಳಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಪ್ರತ್ಯೇಕ ಬೆಡ್‌ಗಳು, ಐಸಿಯುಸೇರಿದಂತೆ ಆಕ್ಸಿಜನ್‌ ವ್ಯವಸ್ಥೆ ಅಗತ್ಯವಿರುವ ಔಷಧ ದಾಸ್ತಾನುಗಳನ್ನು ಇಟ್ಟುಕೊಂಡು ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಕ್ಷಯರೋಗ ತಪಾಸಣೆ
2025ಕ್ಕೆ ಕ್ಷಯ ನಿರ್ಮೂಲನ ಭಾರತ ನಿರ್ಮಾಣಕ್ಕೆ ಪಣ ತೊಟ್ಟಿದ್ದು, ಇದನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ 32,576 ಜನರಲ್ಲಿ ಕ್ಷಯರೋಗ ತಪಾಸಣೆ ನಡೆಸಿದ್ದು, 1,578 ಕ್ಷಯರೋಗ ಪ್ರಕರಣಗಳು ಕಂಡುಬಂದಿವೆ. ಜಿಲ್ಲೆಯ 153 ಗ್ರಾ.ಪಂ.ಗಳಲ್ಲಿ 30 ಗ್ರಾ.ಪಂ.ಗಳನ್ನು ಕ್ಷಯಮುಕ್ತ ಗ್ರಾಮಗಳಾಗಿ ಶೀಘ್ರದಲ್ಲಿಯೇ ಘೋಷಿಸಲಾಗುವುದು. ರೋಗಿ ಪತ್ತೆಯಾದಲ್ಲಿ ಉತ್ತಮ ಚಿಕಿತ್ಸೆ ನೀಡಬೇಕು ಎಂದರು.

ಆಯುಷ್ಮಾನ್‌ ಅಡಿ ಸೂಕ್ತ ಚಿಕಿತ್ಸೆ ನೀಡಿ
ಆಯುಷ್ಮಾನ್‌ ಭಾರತ್‌ ಆರೋಗ್ಯ ಕಾರ್ಡಗಳನ್ನು ಅರ್ಹ ಫ‌ಲಾನುಭವಿಗಳಿಗೆ ತಪ್ಪದೇ ವಿತರಿಸಬೇಕು. ಜಿಲ್ಲಾ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳಲ್ಲಿ ನೀಡುವಷ್ಟೇ ಚಿಕಿತ್ಸೆ ನೀಡಬೇಕು. ಖಾಸಗಿ ಆಸ್ಪತ್ರೆಗಳು ಸರಕಾರದ ನಿಯಮಾನುಸಾರ ಆಯುಷ್ಮಾನ್‌ ಭಾರತ್‌ ಆರೋಗ್ಯ ಕಾರ್ಡ್‌ ಹೊಂದಿರುವ ಫ‌ಲಾನುಭವಿಗಳಿಗೆ ಬೆಡ್‌ಗಳನ್ನು ಮೀಸಲಿರಿಸಿ, ಸೂಕ್ತ ಚಿಕಿತ್ಸೆ ನೀಡಬೇಕು ಎಂದರು.

ಎಡಿಸಿ ಮಮತಾ ದೇವಿ ಜಿ.ಎಸ್‌., ಡಿಎಚ್‌ಒ ಡಾ| ಐ.ಪಿ. ಗಡಾಧ್‌, ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ| ಚಿದಾನಂದ ಸಂಜು, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ| ಕೆ. ರಾಮರಾವ್‌, ಜಿಲ್ಲಾ ಕುಷ್ಟರೋಗ ನಿಯಂತ್ರಣ ಅಧಿಕಾರಿ ಡಾ| ಲತಾ ನಾಯಕ್‌, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಪ್ರಶಾಂತ್‌ ಭಟ್‌, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ| ನಾಗರತ್ನಾ, ಡಾ| ಜೋಶ್ನಾ, ತಾಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸಾಮಾನ್ಯ ಹೆರಿಗೆಗೆ ಒತ್ತು ನೀಡಿ
ಜಿಲ್ಲೆಯಲ್ಲಿ 2023ರ ಜುಲೈಯಿಂದ ಡಿಸೆಂಬರ್‌ ಅಂತ್ಯದವರೆಗೆ 2 ತಾಯಿ ಮರಣ ಹಾಗೂ 51 ಶಿಶು ಮರಣ ಪ್ರಕರಣಗಳು ಉಂಟಾಗಿವೆ. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಆಗದಂತೆ ನೋಡಿಕೊಳ್ಳಬೇಕು. 2023 ರ ಎಪ್ರಿಲ್‌ನಿಂದ ಡಿಸೆಂಬರ್‌ ಅಂತ್ಯದವರೆಗೆ 9,169 ಹೆರಿಗೆಗಳಾಗಿದ್ದು, ಖಾಸಗಿಯಲ್ಲಿ 6,422, ಸರಕಾರಿ ಆಸ್ಪತ್ರೆಗಳಲ್ಲಿ 2,747 ಆಗಿದೆ, 3,902 ಸಾಮಾನ್ಯ ಹೆರಿಗೆ ಉಂಟಾದರೆ, 5,267 ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ವೈದ್ಯರು ಸಾಮಾನ್ಯ ಹೆರಿಗೆ ಮಾಡಿಸಲು ಹೆಚ್ಚು ಒತ್ತು ನೀಡಬೇಕು ಎಂದರು.

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.